ಇಸ್ರೇಲ್ | ಭಾರತೀಯ ವಿದ್ಯಾರ್ಥಿಗಳಿಗೆ ರಾಯಭಾರ ಕಚೇರಿಯಿಂದ ಸುರಕ್ಷತಾ ಸೂಚನೆ

Date:

ಹಮಾಸ್‌ ಸಂಘಟನೆ ಇಸ್ರೇಲ್‌ ವಿರುದ್ಧ ಯುದ್ಧ ಘೋಷಿಸಿರುವ ಹಿನ್ನೆಲೆಯಲ್ಲಿ ಈಗಾಗಲೇ 300ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಗಾಜಾ ಪ್ರದೇಶದಲ್ಲಿ ಉಗ್ರರು ಇಸ್ರೇಲಿನ ನೂರಕ್ಕೂ ಹೆಚ್ಚು ಸೈನಿಕರು ಹಾಗೂ ನಾಗರಿಕರನ್ನು ಒತ್ತಾಯಾಳಾಗಿ ಇಟ್ಟುಕೊಂಡಿದ್ದಾರೆ.

ಹಮಾಸ್ ಗುಂಪಿನ ದಾಳಿಗಳ ಮಧ್ಯೆ ಭಾರತೀಯ ವಿದ್ಯಾರ್ಥಿಗಳು ಇಸ್ರೇಲ್‌ ದೇಶದಲ್ಲಿ ಸಿಲುಕಿಕೊಂಡಿದ್ದು, ಆತಂಕದಲ್ಲಿದ್ದಾರೆ. ಈ ನಡುವೆ ಇಸ್ರೇಲ್‌ ಮತ್ತು ಪ್ಯಾಲೆಸ್ಟೈನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಶನಿವಾರ ತನ್ನ ನಾಗರಿಕರಿಗೆ ಜಾಗರೂಕರಾಗಿರಿ ಎಂದು ಸೂಚನೆ ನೀಡಿದೆ.

ಈ ಸುದ್ದಿ ಓದಿದ್ದೀರಾ? ಇಸ್ರೇಲ್ – ಹಮಾಸ್ ಯುದ್ಧ| 500ಕ್ಕೂ ಹೆಚ್ಚು ಸಾವು; ನಗರ ತೊರೆಯುತ್ತಿರುವ ಸ್ಥಳೀಯರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾನು ತುಂಬಾ ಭಯಗೊಂಡಿದ್ದೇನೆ. ಅದೃಷ್ಟವಶಾತ್ ನಮಗೆ ಆಶ್ರಯ ದೊರಕಿದೆ ಹಾಗೂ ಇಸ್ರೇಲಿ ಪೊಲೀಸ್ ಪಡೆಗಳು ಹತ್ತಿರದಲ್ಲಿವೆ. ಇಲ್ಲಿಯವರೆಗೆ, ನಾವು ಸುರಕ್ಷಿತವಾಗಿದ್ದೇವೆ. ನಾವು ಭಾರತೀಯ ರಾಯಭಾರಿ ಕಚೇರಿಯ ಜನರೊಂದಿಗೆ ಸಂಪರ್ಕದಲ್ಲಿದ್ದೇವೆ. ನಾವು ಭಾರತೀಯ ಸಮುದಾಯದೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದು, ಅವರೊಂದಿಗೆ ಸಂಪರ್ಕ ಹೊಂದಿದ್ದೇವೆ” ಎಂದು ಇಸ್ರೇಲ್‌ನಲ್ಲಿರುವ ಭಾರತೀಯ ವಿದ್ಯಾರ್ಥಿ ಗೋಕುಲ್ ಮನವಾಲನ್ ಸುದ್ದಿ ಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ.

ಮತ್ತೊಬ್ಬ ವಿದ್ಯಾರ್ಥಿಯಾದ ವಿಮಲ್ ಕೃಷ್ಣಸಾಮಿ ಹಾಗೂ ಮಣಿವಣ್ಣನ್ ಚಿತ್ರಾ ಅವರು ಈ ದಾಳಿಯು “ತುಂಬಾ ಉದ್ವಿಗ್ನ ಮತ್ತು ಭಯಾನಕವಾಗಿದೆ. ಭಾರತೀಯ ರಾಯಭಾರ ಕಚೇರಿಯು ಗುಂಪಿನಲ್ಲಿ ನಮ್ಮೊಂದಿಗೆ ಸಂಪರ್ಕದಲ್ಲಿದೆ. ಅವರು ನಮ್ಮ ಮೇಲೆ ನಿಗಾ ಇಡುತ್ತಿದ್ದಾರೆ” ಎಂದು ಹೇಳಿದ್ದಾರೆ.

ದಾಳಿ ಪ್ರಾರಂಭವಾದ ಕ್ಷಣದಲ್ಲಿ ತನ್ನ ಪರಿಸ್ಥಿತಿಯನ್ನು ಹಂಚಿಕೊಂಡ ವಿದ್ಯಾರ್ಥಿ ಆದಿತ್ಯ ಕರುಣಾನಿತಿ ನಿವೇದಿತಾ, “ನಾವು ಇದನ್ನು ನಿರೀಕ್ಷಿಸಿರಲಿಲ್ಲ. ಏಕೆಂದರೆ ಇಸ್ರೇಲ್‌ನಲ್ಲಿ ಈಗ ಧಾರ್ಮಿಕ ರಜಾದಿನಗಳು ನಡೆಯುತ್ತಿವೆ. ನಾವು ಮುಂಜಾನೆ ಸುಮಾರು 5.30ಕ್ಕೆ ಸೈರನ್‌ಗಳನ್ನು ಪಡೆದುಕೊಂಡಿದ್ದೇವೆ. ನಾವು ಸುಮಾರು 7-8 ಗಂಟೆಗಳ ಕಾಲ ಬಂಕರ್‌ಗಳಲ್ಲಿ ಇದ್ದೆವು. ಸೈರನ್‌ಗಳು ಮೊಳಗಿದ ನಂತರ ನಮ್ಮ ಮನೆಯೊಳಗೆ ಇರುವಂತೆ  ತಿಳಿಸಲಾಗಿದೆ” ಎಂದರು.

ಇಸ್ರೇಲ್‌ನ ಹೀಬ್ರೂ ವಿಶ್ವವಿದ್ಯಾಲಯದಲ್ಲಿ ಓದುತ್ತಿರುವ ವಿದ್ಯಾರ್ಥಿಯ ಪ್ರಕಾರ, ಅವರು ವಸತಿ ನಿಲಯಗಳಲ್ಲಿ ಉಳಿದುಕೊಂಡಿದ್ದಾರೆ ಮತ್ತು ಅವರಿಗೆ ಕಾಲೇಜಿನಿಂದ ವಸತಿ ಒದಗಿಸಲಾಗುತ್ತಿದೆ.

ಕಳೆದ 18 ವರ್ಷಗಳಿಂದ ಇಸ್ರೇಲ್‌ನಲ್ಲಿ ಕೆಲಸ ಮಾಡುತ್ತಿರುವ ಭಾರತೀಯ ಪ್ರಜೆ ಸೋಮ, “ಇಂದು ತುಂಬಾ ಕಷ್ಟಕರವಾದ ದಿನ, ನಾವು ಎಂದಿಗೂ ಪರಿಸ್ಥಿತಿಯನ್ನು ಈ ರೀತಿ ನೋಡಿಲ್ಲ. ಹಮಾಸ್ ಸಂಘಟನೆ 20 ನಿಮಿಷಗಳಲ್ಲಿ, 5,000 ರಾಕೆಟ್‌ಗಳನ್ನು ಹಾರಿಸಿ  22 ಜನರನ್ನು ಕೊಂದರು. ಇದು ದೇಶಕ್ಕೆ ಬಹಳ ಕಷ್ಟಕರವಾದ ಪರಿಸ್ಥಿತಿಯಾಗಿದೆ ” ಎಂದರು.

ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಇಸ್ರೇಲ್‌ನಲ್ಲಿರುವ ಎಲ್ಲ ಭಾರತೀಯ ಪ್ರಜೆಗಳು ಜಾಗರೂಕರಾಗಿರಲು ಮತ್ತು ಸ್ಥಳೀಯ ಅಧಿಕಾರಿಗಳ ಸಲಹೆಯಂತೆ ಸುರಕ್ಷತಾ ಪ್ರೋಟೋಕಾಲ್‌ಗಳನ್ನು ಅನುಸರಿಸಲು ವಿನಂತಿಸಲಾಗಿದೆ.

“ದಯವಿಟ್ಟು ಜಾಗರೂಕರಾಗಿರಿ, ಅನಗತ್ಯ ಚಲನವಲನವನ್ನು ತಪ್ಪಿಸಿ ಮತ್ತು ಸುರಕ್ಷತಾ ಆಶ್ರಯಗಳ ಹತ್ತಿರವಿರಿ” ಎಂದು ರಾಯಭಾರ ಕಚೇರಿ ಇಂಗ್ಲಿಷ್, ಕನ್ನಡ, ಹಿಂದಿ, ಮರಾಠಿ, ತಮಿಳು, ತೆಲುಗು, ಮಲಯಾಳಂ ಭಾಷೆಗಳಲ್ಲಿ ತನ್ನ ಸಲಹೆಯಲ್ಲಿ ತಿಳಿಸಿದೆ.

ರಾಯಭಾರ ಕಚೇರಿಯ ವೆಬ್‌ಸೈಟ್‌ನಲ್ಲಿರುವ ವಿವರಗಳ ಪ್ರಕಾರ, ಇಸ್ರೇಲ್‌ನಲ್ಲಿ ವಜ್ರದ ವ್ಯಾಪಾರಿಗಳು, ಐಟಿ ವೃತ್ತಿಪರರು ಮತ್ತು ವಿದ್ಯಾರ್ಥಿಗಳು ಒಳಗೊಂಡಂತೆ ಸುಮಾರು 18,000 ಭಾರತೀಯ ನಾಗರಿಕರಿದ್ದಾರೆ.

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...