ಅಮೆರಿಕದಲ್ಲಿ ತೆಲುಗು ಯುವತಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ತಮಿಳುನಾಡಿನಲ್ಲಿ ಬಂಧನ

Date:

ಅಮೆರಿಕದಲ್ಲಿ ತೆಲುಗು ಮೂಲದ ಯುವತಿಯೊಬ್ಬರನ್ನು ಹತ್ಯೆಗೈದು ಭಾರತಕ್ಕೆ ಪರಾರಿಯಾಗಿದ್ದ ಆರೋಪಿಯನ್ನು ತಮಿಳುನಾಡಿನಲ್ಲಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೇರಿಲ್ಯಾಂಡ್‌ನಲ್ಲಿ ನಡೆದ ನಿಕಿತಾ ಗೊಡಿಶಾಲ ಅವರ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಅರ್ಜುನ್ ಶರ್ಮಾನನ್ನು ಇಂಟರ್‌ಪೋಲ್ ನೆರವಿನೊಂದಿಗೆ ಪತ್ತೆಹಚ್ಚಿ ಸೋಮವಾರ ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಅಮೆರಿಕದ ಮೇರಿಲ್ಯಾಂಡ್‌ನಲ್ಲಿ ನೆಲೆಸಿದ್ದ ಭಾರತೀಯ ಮೂಲದ ಡೇಟಾ ವಿಶ್ಲೇಷಕಿ ನಿಕಿತಾ ರಾವ್ ಗೊಡಿಶಾಲ (27) ಅವರು ಜನವರಿ 2 ರಂದು ನಾಪತ್ತೆಯಾಗಿದ್ದರು. ನಿಕಿತಾ ಅವರ ಮಾಜಿ ಪ್ರಿಯಕರನಾಗಿದ್ದ ಅರ್ಜುನ್ ಶರ್ಮಾ (26), ತಾನು ಹೊಸ ವರ್ಷದ ಮುನ್ನಾದಿನದಂದು ನಿಕಿತಾ ಅವರನ್ನು ಕೊನೆಯದಾಗಿ ನೋಡಿದ್ದಾಗಿ ಹಾವರ್ಡ್ ಕೌಂಟಿ ಪೊಲೀಸರಿಗೆ ತಿಳಿಸಿದ್ದ.

​ಆದರೆ, ಶರ್ಮಾ ನೀಡಿದ ದೂರು ಮತ್ತು ಆತನ ನಡೆ ಪೊಲೀಸರಲ್ಲಿ ಅನುಮಾನ ಮೂಡಿಸಿತ್ತು. ನಾಪತ್ತೆ ದೂರು ದಾಖಲಿಸಿದ ದಿನವೇ ಅರ್ಜುನ್ ಶರ್ಮಾ ಅಮೆರಿಕದಿಂದ ಭಾರತಕ್ಕೆ ವಿಮಾನವೇರಿರುವುದು ತನಿಖೆಯಲ್ಲಿ ದೃಢಪಟ್ಟಿತು.

​ಸಂಶಯಗೊಂಡ ಪೊಲೀಸರು ಕೊಲಂಬಿಯಾದ ಟ್ವಿನ್ ರಿವರ್ಸ್ ರಸ್ತೆಯಲ್ಲಿರುವ ಶರ್ಮಾ ಅವರ ಅಪಾರ್ಟ್‌ಮೆಂಟ್ ಮೇಲೆ ಶೋಧನೆ ವಾರೆಂಟ್ ಪಡೆದು ದಾಳಿ ನಡೆಸಿದರು. ಈ ವೇಳೆ, ಜನವರಿ 3ರಂದು ಅಪಾರ್ಟ್‌ಮೆಂಟ್ ಒಳಗೆ ನಿಕಿತಾ ಅವರ ಮೃತದೇಹ ಪತ್ತೆಯಾಗಿತ್ತು. ತನಿಖೆಗೊಳಪಡಿಸಿದ ಹಾವರ್ಡ್ ಕೌಂಟಿ ಪೊಲೀಸರು ಶರ್ಮಾ ವಿರುದ್ಧ ಬಂಧನ ವಾರೆಂಟ್ ಜಾರಿಗೊಳಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ವೆನೆಜುವೆಲಾ ಮೇಲೆ ‘ಅಮೆರಿಕ’ ಹಿಡಿತ: ಮೂರನೇ ವಿಶ್ವಯುದ್ಧದ ಕಾರ್ಮೋಡ

ಆರೋಪಿ ದೇಶ ತೊರೆದಿದ್ದರಿಂದ ಅಮೆರಿಕದ ಫೆಡರಲ್ ಏಜೆನ್ಸಿಗಳು ಭಾರತೀಯ ಅಧಿಕಾರಿಗಳೊಂದಿಗೆ ತಕ್ಷಣ ಸಂಪರ್ಕ ಸಾಧಿಸಿ ಕಾರ್ಯಾಚರಣೆ ಆರಂಭಿಸಿದ್ದವು. ಏಜೆನ್ಸಿಗಳ ನಡುವಿನ ಮಾಹಿತಿ ವಿನಿಮಯ ಮತ್ತು ನಿರಂತರ ಕಣ್ಗಾವಲಿನ ಫಲವಾಗಿ, ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ ಅರ್ಜುನ್ ಶರ್ಮಾನನ್ನು ಇಂಟರ್‌ಪೋಲ್ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಅಮೆರಿಕಕ್ಕೆ ಹಸ್ತಾಂತರಿಸುವ (ಗಡೀಪಾರು) ಪ್ರಕ್ರಿಯೆಗಳು ಜರುಗುವ ನಿರೀಕ್ಷೆಯಿದೆ.

​ಎಲಿಕಾಟ್ ಸಿಟಿಯಲ್ಲಿ ವಾಸವಿದ್ದ ನಿಕಿತಾ, 2025ರ ಫೆಬ್ರವರಿಯಿಂದ ‘ವೆದಾ ಹೆಲ್ತ್’ (Vheda Health) ಸಂಸ್ಥೆಯಲ್ಲಿ ಡೇಟಾ ಮತ್ತು ಸ್ಟ್ರಾಟಜಿ ಅನಾಲಿಸ್ಟ್ ಆಗಿ ಕೆಲಸ ಮಾಡುತ್ತಿದ್ದರು. ಇತ್ತೀಚೆಗೆ ಅವರು ಕಂಪನಿಯ ಪ್ರತಿಷ್ಠಿತ ‘ಆಲ್-ಇನ್ ಅವಾರ್ಡ್’ ಅನ್ನೂ ಪಡೆದಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.

​ಈ ನಡುವೆ, ಮೃತ ನಿಕಿತಾ ಅವರ ಕುಟುಂಬದೊಂದಿಗೆ ನಿರಂತರ ಸಂಪರ್ಕದಲ್ಲಿರುವುದಾಗಿ ಹಾಗೂ ಅಗತ್ಯವಿರುವ ಎಲ್ಲ ರಾಯಭಾರ ನೆರವು ನೀಡುತ್ತಿರುವುದಾಗಿ ಅಮೆರಿಕದಲ್ಲಿರುವ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಬೇರೊಬ್ಬ ವ್ಯಕ್ತಿಯ ಫೋಟೊ ಈ ಪ್ರಕರಣಕ್ಕೆ ಸಂಬಂಧಿಸಿದ್ದಲ್ಲ ಎಂದು ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...