ಸಿಂಗಾಪುರದಲ್ಲಿ ಭಯವಿಲ್ಲದ ತಡರಾತ್ರಿ ನಡಿಗೆ; ಭಾರತೀಯ ಮಹಿಳೆಯ ವಿಡಿಯೋ ವೈರಲ್

Date:

ಸಿಂಗಾಪುರದಲ್ಲಿ ವಾಸಿಸುವ ಭಾರತೀಯ ಮಹಿಳೆಯೊಬ್ಬರು, ತಡರಾತ್ರಿಯಲ್ಲಿ ತಾವು ಮನೆಗೆ ಹಿಂತಿರುಗುವಾಗ ಚಿತ್ರೀರಿಸಿದ ಹಂಚಿಕೊಂಡ ವಿಡಿಯೋ ಚರ್ಚೆಗೆ ನಾಂದಿ ಹಾಡಿದೆ. ಅವರು ಸಿಂಗಾಪುರದಲ್ಲಿ ನಡುರಾತ್ರಿಯಲ್ಲೂ ಭಯವಿಲ್ಲದೆ ರಸ್ತೆಯಲ್ಲಿ ಓಡಾಡಬಹುದಾದ ಮತ್ತು ಮಹಿಳೆಯರಿಗೆ ಇರುವ ಸುರಕ್ಷತೆಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಾತ್ರಿಯಲ್ಲಿ ಮಹಿಳೆಯರು ಒಂಟಿಯಾಗಿ ನಡೆಯುವುದು ಅಸಮಾನ್ಯವಾದುದ್ದಲ್ಲ ಎಂದು ಹೇಳಿದ್ದಾರೆ.

ಭಾರತದ ಮೂಲದ ಮಹಿಳೆ ಕೃತಿಕಾ ಜೈನ್ ಅವರು ತಾವು ಬೆಳಗಿನ ಜಾವ 3 ಗಂಟೆಯ ಸಮಯದಲ್ಲಿ ಖಾಲಿ ರಸ್ತೆಯಲ್ಲಿ ಒಂಟಿಯಾಗಿ ನಡೆದುಕೊಂಡು ಹೋಗುತ್ತಿರುವ ವಿಡಿಯೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ; ಶಾಂತ ಮತ್ತು ನಿರ್ಜನ ಬೀದಿಗಳು, ಶಾಂತಿಯುತ ವಾತಾವರಣ ಹಾಗೂ ಜೈನ್‌ ಅವರು ಯಾವುದೇ ಭಯದ ಗೋಚರತೆ ಇಲ್ಲದೆ ನಡೆದುಕೊಂಡು ಹೋಗುತ್ತಿರುವುದನ್ನು ತೋರಿಸುತ್ತದೆ.

“ಸಿಂಗಾಪುರದಲ್ಲಿ, ತಾನು ಬೆಳಗಿನ ಜಾವ 3 ಗಂಟೆಗೆ ಒಂಟಿಯಾಗಿ ನಡೆದುಕೊಂಡು ಮನೆಗೆ ಬರಲು ಸಾಧ್ಯವಾಯಿತು. ಭಯ ಅಥವಾ ಹಿಂಜರಿಕೆಯಿಲ್ಲದೆ ಆರಾಮದಾಯವಾಗಿ ನಡೆದುಕೊಂಡು ಬಂದಿದ್ದೇನೆ. ಭಯದಿಂದ ಹಿಂತಿರುಗಿ ನೋಡುವ ಅಗತ್ಯವಿರಲಿಲ್ಲ. ಆದರೆ, ಭಾರತದಲ್ಲಿ ಇಷ್ಟು ತಡರಾತ್ರಿಯಲ್ಲಿ ಒಂಟಿಯಾಗಿ ಹೊರಗೆ ಹೋಗುವುದನ್ನು ಊಹಿಸಲೂ ಸಾಧ್ಯವಿಲ್ಲ” ಎಂದು ಅವರು ವಿಡಿಯೋದಲ್ಲಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜೈನ್ ಪ್ರಕಾರ, ರಾತ್ರಿಯಲ್ಲಿ ಒಂಟಿಯಾಗಿ ನಡೆಯುವುದು ಸಿಂಗಾಪುರದಲ್ಲಿ ಸಾಮಾನ್ಯ. ಅದನ್ನು ಒಂದು ಸವಲತ್ತು ಎಂದು ನೋಡಲಾಗುವುದಿಲ್ಲ. ಬದಲಿಗೆ, ಇದು ದೈನಂದಿನ ಜೀವನದ ನೈಸರ್ಗಿಕ ಭಾಗವಾಗಿದೆ. ಈ ಭದ್ರತಾ ಪ್ರಜ್ಞೆಯು ಮಹಿಳೆಯರಿಗೆ ತುಂಬಾ ಮುಖ್ಯ. ಇದನ್ನು ಎಂದಿಗೂ ಹಗುರವಾಗಿ ಪರಿಗಣಿಸಲಾಗದು. ಸಿಂಗಾಪುರದ ಮೇಲಿನ ಪ್ರೀತಿಯು ಅದರ ಎತ್ತರದ ಕಟ್ಟಡಗಳ ಕಾರಣಕ್ಕಾಗಿಯಲ್ಲ, ಅಲ್ಲಿನ ಸುರಕ್ಷಿತ ಪರಿಸರದಿಂದ ಕಾರಣಕ್ಕಾಗಿ ಬೆಳೆಯುತ್ತದೆ.

ಅವರ ಪೋಸ್ಟ್‌ಗೆ ನೆಟ್ಟಿಗರು ಮಿಶ್ರ ಪ್ರತಿಕ್ರಿಯೆ ನೀಡಿದ್ದಾರೆ. “ನಾನು ಅಲ್ಲಿ 1 ತಿಂಗಳು ವಾಸಿಸುತ್ತಿದ್ದೇನೆ. ಇದು ಅದ್ಭುತವಾದ ಸ್ಥಳವಾಗಿದ್ದರೂ ದುಬಾರಿಯೂ ಆಗಿದೆ. ಆದರೆ, ಅಲ್ಲಿನ ಜನರ ನಾಗರಿಕ ಪ್ರಜ್ಞೆ ಅದ್ಭುತವಾಗಿದೆ” ಎಂದು ಕಾಮೆಂಟ್ ಮಾಡಿದ್ದಾರೆ.

ಮತ್ತೊಬ್ಬ ಬಳಕೆದಾರರು, “ಇದು ನಿಜ. ನಾನು ಮಧ್ಯರಾತ್ರಿಯಲ್ಲಿ ಅನಾರೋಗ್ಯದ ಕಾರಣಕ್ಕಾಗಿ ಆಸ್ಪತ್ರೆಗೆ ಹೋಗುತ್ತಿದ್ದೆ… ಸಿಂಗಾಪುರ ರಾತ್ರಿಯಲ್ಲಿ ಸಂಪೂರ್ಣವಾಗಿ ಸುರಕ್ಷಿತವಾಗಿದೆ ಎಂಬ ಅನುಭವ ನನಗೂ ಆಯಿತು” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...