ಮಾಲ್ಡೀವ್ಸ್‌| ಸೇತುವೆ ದುರಸ್ತಿ ವೇಳೆ ಭಾರತೀಯ ಕಾರ್ಮಿಕ ಸಾವು; ಎರಡು ತಿಂಗಳಲ್ಲಿ 2ನೇ ಪ್ರಕರಣ

Date:

ಮಾಲ್ಡೀವ್ಸ್‌ನ ರಾಜಧಾನಿಯಲ್ಲಿನ ಪ್ರಮುಖ ಸೇತುವೆ ದುರಸ್ತಿ ಸಮಯದಲ್ಲಿ ಕುಸಿದುಬಿದ್ದ ಭಾರತೀಯ ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಮೇ ಮತ್ತು ಜೂನ್ ತಿಂಗಳಲ್ಲಿ ಭಾರತೀಯ ಕಾರ್ಮಿಕ ಸಾವನ್ನಪ್ಪಿದ ಎರಡನೇ ಪ್ರಕರಣ ಇದಾಗಿದೆ. ಪೊಲೀಸರು ಮೃತರನ್ನು ಭಾರತೀಯ ಪ್ರಜೆ ಎಂದು ಗುರುತಿಸಿದ್ದಾರೆ. ಆದರೆ ಅಧಿಕ ಮಾಹಿತಿಯನ್ನು ಬಹಿರಂಗಪಡಿಸಿಲ್ಲ.

ಸುದ್ದಿ ಪೋರ್ಟಲ್ ಸನ್‌.ಎಂವಿ ಪ್ರಕಾರ, ಸೋಮವಾರ ರಾತ್ರಿ ಸಿನಮಲೆ ಸೇತುವೆಯ ಮೇಲೆ ದುರಸ್ತಿ ಕೆಲಸ ಮಾಡುತ್ತಿದ್ದಾಗ ಕಾರ್ಮಿಕನಿಗೆ ತಲೆಸುತ್ತು ಬಂದು ಕುಸಿದು ಬಿದ್ದಿದ್ದಾನೆ. ಕಾರ್ಮಿಕನನ್ನು ಹುಲ್‌ಹುಮಲೆಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದುವಷ್ಟರಲ್ಲಿ ಕಾರ್ಮಿಕ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಮೋದಿ ಪ್ರಮಾಣ ವಚನ ಸಮಾರಂಭಕ್ಕೆ ಮಾಲ್ಡೀವ್ಸ್ ಅಧ್ಯಕ್ಷ ಮುಯಿಝುಗೆ ಆಹ್ವಾನ

ಸಿನಮಲೆ ಸೇತುವೆಯು ಮಲೆ ನಗರವನ್ನು ಹುಲ್ಹುಲೆಗೆ ಸಂಪರ್ಕಿಸುತ್ತದೆ. ಹುಲ್ಹುಲೆಯಲ್ಲಿ ವೆಲನಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣವಿದೆ. ಇನ್ನು ಈ ಸೇತುವೆಯ ಕೆಲಸವನ್ನು ಚೀನಾ ಕಮ್ಯುನಿಕೇಶನ್ಸ್ ಕನ್ಸ್ಟ್ರಕ್ಷನ್ ಕಂಪನಿ (ಸಿಸಿಸಿಸಿ) ನಡೆಸುತ್ತಿದೆ ಎಂದು ಸನ್‌.ಎಂವಿ ವರದಿ ಮಾಡಿದೆ.

ಇದಕ್ಕೂ ಮುನ್ನ ಮೇ 3ರಂದು 30 ವರ್ಷದ ಭಾರತೀಯ ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದರು. ಹುಲ್ಹುಮಲೆ ಆವೃತದಲ್ಲಿ ಅಗೆಯುವ ಕೆಲಸ ಮಾಡುವಾಗ ಭಾರತೀಯ ಯುವಕ ಗಾಯಗೊಂಡಿದ್ದು ಬಳಿಕ ಸಾವನ್ನಪ್ಪಿದ್ದಾನೆ. ಈ ಪ್ರಕರಣದಲ್ಲಿಯೂ ಹೆಚ್ಚಿನ ಮಾಹಿತಿಯನ್ನು ಪೊಲೀಸರು ಬಹಿರಂಗಪಡಿಸಿಲ್ಲ.

ಇದನ್ನು ಓದಿದ್ದೀರಾ?  ಹೆಚ್ಚಿನ ಪ್ರವಾಸಿಗರನ್ನು ಕಳುಹಿಸಿ: ಚೀನಾಕ್ಕೆ ಮಾಲ್ಡೀವ್ಸ್ ಅಧ್ಯಕ್ಷ ಮನವಿ

ಸ್ಥಳೀಯ ಮಾಧ್ಯಮ ವರದಿಗಳು ಘಟನೆಯ ಹೆಚ್ಚಿನ ತನಿಖೆ ಪೊಲೀಸರು ನಡೆಸುತ್ತಿದ್ದಾರೆ. ಸರಿಯಾದ ಸುರಕ್ಷತಾ ಮಾನದಂಡಗಳು ಇಲ್ಲದ ಕಾರಣ ಈ ಘಟನೆ ನಡೆದಿದೆ ಎಂದು ಉಲ್ಲೇಖಿಸಿದೆ.

ಮಾಲ್ಡೀವ್ಸ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯ ಪ್ರಕಾರ, ಮಾಲ್ಡೀವ್ಸ್‌ನಲ್ಲಿ 27,000 ಭಾರತೀಯ ವಲಸಿಗರು ಇದ್ದಾರೆ. ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚಿನವರು ಸೇವೆ ಸಲ್ಲಿಸುತ್ತಿದ್ದಾರೆ. ಹೆಚ್ಚಿನ ಜನರು ನಿರ್ಮಾಣ ಕ್ಷೇತ್ರದಲ್ಲಿಯೂ ತೊಡಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...