ಗಾಜಾದಲ್ಲಿ ಮಾನವೀಯ ಬಿಕ್ಕಟ್ಟು: ತುರ್ತಾಗಿ ನೆರವು ಹೆಚ್ಚಿಸಲು ವಿಶ್ವಸಂಸ್ಥೆಯಲ್ಲಿ ಭಾರತದ ರಾಯಭಾರಿ ಆಗ್ರಹ

Date:

ಕಳೆದ ಐದು ತಿಂಗಳಿಂದ ಗಾಜಾ ದಲ್ಲಿ ನಡೆಯುತ್ತಿರುವ ಸಂಘರ್ಷದ ಬಗ್ಗೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದೆ. ವಿಶ್ವಸಂಸ್ಥೆಯಲ್ಲಿ ಮಾತನಾಡಿರುವ ಭಾರತದ ರಾಯಭಾರಿ, ನಾಗರಿಕರ ಸಾವಿನ ನಷ್ಟ ಹಾಗೂ ಮಾನವೀಯ ಬಿಕ್ಕಟ್ಟನ್ನು ಸ್ಪಷ್ಟವಾಗಿ ಸ್ವೀಕಾರ್ಹವಲ್ಲ ಎಂದು ಪ್ರತಿಪಾದಿಸಿದ್ದಾರೆ.

ವಿಶ್ವಸಂಸ್ಥೆಯಲ್ಲಿ ಶಾಶ್ವತ ಪ್ರತಿನಿಧಿಯಾಗಿರುವ ಭಾರತದ ರಾಯಭಾರಿ ರುಚಿಕಾ ಕಾಂಬೋಜ್ ಅವರು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಕಾರ್ಯಕ್ರಮವೊಂದರಲ್ಲಿ ಮಾತನಾಡುವಾಗ ಗಾಜಾದ ಪರಿಸ್ಥಿತಿ ಬಗ್ಗೆ ವಿಟೋ ಅಧಿಕಾರ ಬಳಸುವಂತೆ ತಿಳಿಸಿದರು.

“ಇಸ್ರೇಲ್ ಹಾಗೂ ಹಮಸ್‌ ಹೋರಾಟಗಾರರ ನಡುವೆ ನಡೆಯುತ್ತಿರುವ ಸಂಘರ್ಷದಲ್ಲಿ ದೊಡ್ಡ ಸಂಖ್ಯೆಯಲ್ಲಿ ನಾಗರಿಕರು ಮೃತಪಟ್ಟಿದ್ದಾರೆ. ಮುಖ್ಯವಾಗಿ ಮಹಿಳೆಯರು ಹಾಗೂ ಮಕ್ಕಳು ಸಾವೀಗಿಡಾಗಿದ್ದಾರೆ. ಇದು ಮಾನವೀಯ ಬಿಕ್ಕಟ್ಟಿನ ಎಚ್ಚರಿಕೆ ಗಂಟೆಯಾಗಿದೆ. ಇದು ಸ್ಪಷ್ಟವಾಗಿ ಸ್ವೀಕಾರ್ಹವಲ್ಲ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಳೆದ ಐದು ತಿಂಗಳಿನಿಂದ ಗಾಜಾದಲ್ಲಿ ನಡೆಯುತ್ತಿರುವ ಸಂಘರ್ಷವು ಭಾರತದ ತೀವ್ರ ಕಳವಳಕ್ಕೆ ಕಾರಣವಾಗಿದೆ. ಗಾಜಾ ಹಾಗೂ ಅದರಿಂದಾಚೆ ನಾವು ನೋಡುತ್ತಿರುವ ಅಸ್ಥಿರತೆಯ ಮಾನವೀಯ ಬಿಕ್ಕಟ್ಟು ತೀವ್ರವಾಗಿದೆ” ಎಂದು ಭಾರತದ ಶಾಶ್ವತ ಪ್ರತಿನಿಧಿ ಆತಂಕ ವ್ಯಕ್ತಪಡಿಸಿದರು.

ಕಳೆದ ತಿಂಗಳು ಅಮೆರಿಕವು ವಿಟೊ ಅಧಿಕಾರ ಬಳಸಿದ ನಂತರ ಗಾಜಾ ಯುದ್ಧದಲ್ಲಿ ಮಾನವೀಯ ಬಿಕ್ಕಟ್ಟಿನಡಿ ಕದನ ವಿರಾಮ ಘೋಷಿಸುವುದಕ್ಕೆ ನಿರ್ಣಯ ಕೈಗೊಳ್ಳಲು ಮಂಡಳಿ ವಿಫಲವಾಗಿತ್ತು.   ನಂತರ ಸಾಮಾನ್ಯಸಭೆಯು ವಿಟೋ ಅಧಿಕಾರ ಬಳಸುವ ಬಗ್ಗೆ ಸಮಗ್ರ ಚರ್ಚೆ ಹಮ್ಮಿಕೊಂಡಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸುಳ್ಳು ಸೃಷ್ಟಿಸಿ, ಬೆಂಕಿ ಹಚ್ಚಿ, ಭಯ ಬಿತ್ತುವವರು ಯಾರು?

ವಿಶ್ವಸಂಸ್ಥೆಯ ಸಾಮಾನ್ಯಸಭೆಯಲ್ಲಿ ಮಾತನಾಡಿದ ರುಚಿಕಾ ಕಾಂಬೋಜ್, ಸಂಘರ್ಷದ ಬಗ್ಗೆ ಭಾರತದ ನಿಲುವು ಸ್ಪಷ್ಟವಾಗಿದೆ. ಕೇಂದ್ರ ಸರ್ಕಾರವು ಸಂಘರ್ಷದಲ್ಲಿನ ನಾಗರಿಕರ ಸಾವನ್ನು ತೀವ್ರವಾಗಿ ಖಂಡಿಸುತ್ತದೆ. ಗಲಭೆ ಹಾಗೂ ದ್ವೇಷಗಳ ಹೆಚ್ಚಳವನ್ನು ತಡೆಯುವುದು ತುರ್ತು ಅಗತ್ಯವಾಗಿದೆ. ಯಾವುದೇ ಸಂಘರ್ಷದ ಸನ್ನಿವೇಷದಲ್ಲಿ ನಾಗರಿಕರ ಸಾವಿನ ನಷ್ಟವನ್ನು ಕಡಿಮೆಗೊಳಿಸುವುದು ಪ್ರಾಮುಖ್ಯವಾಗಿದೆ ಎಂದು ಹೇಳಿದರು.

ಪ್ರಸ್ತುತ ಸಂಘರ್ಷದ ಸನ್ನಿವೇಷದಲ್ಲಿ ಗಾಜಾದ ಜನರಿಗೆ ತತ್‌ಕ್ಷಣದಲ್ಲಿ ಹೆಚ್ಚಿನ ರೀತಿಯ ಮಾನವೀಯ ನೆರವನ್ನು ಒದಗಿಸುವುದು ಅತ್ಯವಶ್ಯಕವಾಗಿದೆ ಎಂದು ಕಾಂಬೋಜ್ ಅವರು ಒತ್ತಿ ಹೇಳಿದರು.

ಈ ತುರ್ತು ಸನ್ನಿವೇಷದಲ್ಲಿ ಎಲ್ಲ ದೇಶಗಳು ಒಟ್ಟಾಗಬೇಕೆಂದು ಆಗ್ರಹಿಸಿದ ಅವರು ಅಂತಾರಾಷ್ಟ್ರೀಯ ಸಮುದಾಯದಲ್ಲಿ ವಿಶ್ವಸಂಸ್ಥೆ ಪ್ರಯತ್ನಸುತ್ತಿರುವುದನ್ನು ಸ್ವಾಗತಿಸಿದರು.

“ಭಾರತ ಪ್ಯಾಲಿಸ್ತೀನ್‌ ಜನರಿಗೂ ಮಾನವೀಯ ನೆರವನ್ನು ಒದಗಿಸುತ್ತಿದೆ ಹಾಗೂ ಇದು ಮುಂದುವರೆಯುತ್ತದೆ. ಭಾರತವು ಎಲ್ಲ ರೀತಿಯ ಭಯೋತ್ಪಾದನಾ ವಿರುದ್ಧದ ತನ್ನ ದೀರ್ಘಕಾಲೀನ ನಿಲುವಿಗೆ ಬದ್ಧವಾಗಿದೆ. ಭಯೋತ್ಪಾದನೆಯನ್ನು ಸಮರ್ಥಿಸಿಕೊಳ್ಳುವುದಿಲ್ಲ. ನಾವು ಎಲ್ಲ ಒತ್ತೆಯಾಳುಗಳನ್ನು ತಕ್ಷಣ ಹಾಗೂ ಯಾವುದೇ ಷರತ್ತಿಲ್ಲದೆ ಬಿಡುಗಡೆ ಮಾಡುವಂತೆ ಆಗ್ರಹಿಸುತ್ತೇವೆ. ಎರಡು ಕಡೆಯವರು ಅರ್ಥಪೂರ್ಣವಾದ ಒಪ್ಪಂದಕ್ಕೆ ಬಂದು ಸಮಸ್ಯೆ ಪರಿಹರಿಸಿಕೊಂಡು ಶಾಂತಿ ಸಂದೇಶ ಸಾರಬೇಕೆಂದು ಕಾಂಬೋಜ್ ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...