ಇಥಿಯೋಪಿಯಾ | 10 ಸಾವಿರ ವರ್ಷಗಳ ನಂತರ ಜ್ವಾಲಾಮುಖಿ ಸ್ಫೋಟ: ಇಂಡಿಗೋ ಕಣ್ಣೂರು–ಅಬುಧಾಬಿ ವಿಮಾನ ಮಾರ್ಗ ಬದಲಾವಣೆ

Date:

ಇಥಿಯೋಪಿಯಾದಲ್ಲಿ ಸುಮಾರು 10 ಸಾವಿರ ವರ್ಷಗಳ ನಂತರ ಸಂಭವಿಸಿದ ಬೃಹತ್ ಜ್ವಾಲಾಮುಖಿ ಸ್ಫೋಟದಿಂದಾಗಿ ಕೇರಳದ ಕಣ್ಣೂರಿನಿಂದ ಅಬುಧಾಬಿಗೆ ತೆರಳುತ್ತಿದ್ದ ಇಂಡಿಗೋ ವಿಮಾನ 6E 1433 ಅನ್ನು ತುರ್ತಾಗಿ ಗುಜರಾತ್‌ನ ಅಹಮದಾಬಾದ್‌ ಕಡೆಗೆ ಮಾರ್ಗ ಬದಲಾಯಿಸಲಾಯಿತು. ವಿಜ್ಞಾನಿಗಳು ಜ್ವಾಲಾಮುಖಿಯನ್ನು ಈ ಪ್ರದೇಶದಲ್ಲಿ ದಾಖಲಾದ ಅತ್ಯಂತ ಅಸಮಾನ್ಯ ಘಟನೆಗಳಲ್ಲಿ ಒಂದೆಂದು ತಿಳಿಸಿದ್ದಾರೆ.

ಏರ್‌ಬಸ್ ವಿಮಾನವು ಅಹಮದಾಬಾದ್‌ನಲ್ಲಿ ಸಂಪೂರ್ಣ ಸುರಕ್ಷಿತವಾಗಿ ಇಳಿದಿದೆ. ಇಂಡಿಗೋ ಕಂಪನಿಯು ತನ್ನ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುತ್ತಿದ್ದು, ಅವರನ್ನು ಮತ್ತೆ ಕಣ್ಣೂರಿಗೆ ವಾಪಸ್ ಕಳುಹಿಸಲು ವಿಶೇಷ ವ್ಯವಸ್ಥೆ ಮಾಡುವುದಾಗಿ ತಿಳಿಸಿದೆ.

ಸುಮಾರು 10 ಸಾವಿರ ವರ್ಷಗಳಲ್ಲಿ ಮೊದಲ ಬಾರಿಗೆ ಭಾನುವಾರ ಸ್ಫೋಟಗೊಂಡ ಇಥಿಯೋಪಿಯಾದ ಹೈಲಿ ಗುಬ್ಬಿ ಜ್ವಾಲಾಮುಖಿಯ ಬೂದಿಯ ದೊಡ್ಡ ಮೋಡಗಳು ಗಾಳಿಯೊಂದಿಗೆ ಈಗ ಉತ್ತರ ಭಾರತದ ಕಡೆಗೆ ಬರುವ ಸಾಧ್ಯತೆ ಇದೆ. ಹೀಗಾಗಿ ಆ ಭಾಗದಲ್ಲಿ ಹಾರಾಟ ನಡೆಸುವ ವಿಮಾನಗಳಿಗೆ ತೊಂದರೆಯಾಗಬಹುದು ಎಂಬ ಆತಂಕ ಇದ್ದು, ಅನೇಕ ವಿಮಾನಗಳ ಮಾರ್ಗವನ್ನು ಬದಲಾಯಿಸಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮಾಧ್ಯಮಗಳ ವಿರುದ್ಧ ಡಿಸಿಎಂ ಡಿ.ಕೆ. ಶಿವಕುಮಾರ್ ಸಿಟ್ಟಿಗೆದ್ದದ್ದು ಏಕೆ?

ಸೋಮವಾರ ಸಂಜೆಯಿಂದ ದೆಹಲಿ ಮತ್ತು ಜೈಪುರದಲ್ಲಿ ವಿಮಾನ ಕಾರ್ಯಾಚರಣೆಗಳ ಮೇಲೆ ಉಂಟಾಗುವ ಸಂಭಾವ್ಯ ಪರಿಣಾಮವನ್ನು ಭಾರತೀಯ ವಿಮಾನಯಾನ ಅಧಿಕಾರಿಗಳು ಮತ್ತು ವಿಮಾನಯಾನ ಸಂಸ್ಥೆಗಳು ಗಮನಿಸುತ್ತಿವೆ. ಕೆಲವು ವಿಮಾನಗಳು ಈಗಾಗಲೇ ಜ್ವಾಲಾಮುಖಿ ಬೂದಿಯ ಮೋಡಗಳನ್ನು ತಪ್ಪಿಸಲು ಪರ್ಯಾಯ ಮಾರ್ಗಗಳನ್ನು ಅನುಸರಿಸುತ್ತಿವೆ.

ಆಕಾಶ್ ಏರ್ ವಿಮಾನ ಕಂಪನಿಯು ತಿಳಿಸಿರುವಂತೆ, ಜ್ವಾಲಾಮುಖಿ ಸ್ಫೋಟದ ಚಟುವಟಿಕೆಯನ್ನು ಅಂತಾರಾಷ್ಟ್ರೀಯ ನಿಯಮಗಳಂತೆ ನಿಕಟವಾಗಿ ಗಮನಿಸಲಾಗುತ್ತಿದೆ. ಪ್ರಯಾಣಿಕರ ಸುರಕ್ಷತೆ ಯಾವಾಗಲೂ ತಮ್ಮ ಮೊದಲ ಮತ್ತು ಅತ್ಯಂತ ಮುಖ್ಯ ಆದ್ಯತೆ ಎಂದು ಕಂಪನಿಯು ತಿಳಿಸಿದೆ.

ಇಥಿಯೋಪಿಯಾದ ಎರ್ಟಾ ಅಲೆ ಶ್ರೇಣಿಯಲ್ಲಿರುವ ಹೈಲಿ ಗುಬ್ಬಿ ಜ್ವಾಲಾಮುಖಿ ಭಾನುವಾರ ಬೆಳಿಗ್ಗೆ ಸ್ಫೋಟಗೊಂಡಿತು. ಟೌಲೌಸ್ ಜ್ವಾಲಾಮುಖಿ ಬೂದಿ ಸಲಹಾ ಕೇಂದ್ರದ ಮಾಹಿತಿ ಪ್ರಕಾರ, ಈ ಬೂದಿ 10 ರಿಂದ 15 ಕಿಲೋಮೀಟರ್ ಎತ್ತರಕ್ಕೆ ತಲುಪಿ, ಕೆಂಪು ಸಮುದ್ರದ ಕಡೆಗೆ ಸಾಗುತ್ತಿದೆ. ಬೂದಿಯ ಮೋಡವು ಈಗಾಗಲೇ ಒಮಾನ್ ಮತ್ತು ಯೆಮೆನ್ ಪ್ರದೇಶಗಳ ಮೇಲೆ ಪರಿಣಾಮ ಬೀರಿದ್ದು, ಪರಿಸರ ಮತ್ತು ವಾಯುಯಾನ ಸಲಹೆಗಳನ್ನು ನೀಡಲಾಗಿದೆ.

ಖಲೀಜ್ ಟೈಮ್ಸ್ ಪ್ರಕಾರ, ಒಮಾನ್‌ನ ಪರಿಸರ ಪ್ರಾಧಿಕಾರವು ಜ್ವಾಲಾಮುಖಿ ಅನಿಲ ಮತ್ತು ಬೂದಿಯಿಂದ ಉಂಟಾಗುವ ಸಂಭಾವ್ಯ ಪರಿಣಾಮಗಳ ಬಗ್ಗೆ ಎಚ್ಚರಿಕೆ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...