ಇರಾನ್ ಪ್ರತಿಭಟನೆ : ಭದ್ರತಾ ಸಿಬ್ಬಂದಿ ಸೇರಿದಂತೆ 2000 ಜನರ ಸಾವು

Date:

ಕಳೆದ ಎರಡು ವಾರಗಳಿಂದ ಇರಾನ್ ನಲ್ಲಿ ನಡೆಯುತ್ತಿರುವ ದೇಶವ್ಯಾಪಿ ಪ್ರತಿಭಟನೆಯಲ್ಲಿ ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 2,000 ಜನರು ಸಾವನ್ನಪ್ಪಿದ್ದಾರೆ ಎಂದು ಇರಾನ್ ಅಧಿಕಾರಿಯೊಬ್ಬರು ಮಂಗಳವಾರ (ಜ.13) ತಿಳಿಸಿದ್ದಾರೆ.

“ಎರಡು ವಾರಗಳ ಕಾಲ ಇರಾನ್ ನಲ್ಲಿ ನಡೆದ ಗಲಭೆಯ ಪರಿಣಾಮ ಹೆಚ್ಚಿನ ಸಾವು-ನೋವುಗಳು ಸಂಭವಿಸಿವೆ ಎಂದು ಅಧಿಕಾರಿಗಳು ಇದೇ ಮೊದಲ ಬಾರಿಗೆ ಒಪ್ಪಿಕೊಂಡಿದ್ದಾರೆ” ಎಂದು ರಾಯಿಟರ್ಸ್ ವರದಿ ಮಾಡಿದೆ. ಯಾರು ಕೊಲ್ಲಲ್ಪಟ್ಟರು ಎಂಬುದರ ಕುರಿತು ಮಾಹಿತಿ ನೀಡಿಲ್ಲ. ಆದರೆ ಭದ್ರತಾ ಸಿಬ್ಬಂದಿಗಳ ಸಾವಿನ ಹಿಂದೆ ‘ಭಯೋತ್ಪಾದಕ’ರಿದ್ದಾರೆ ಎಂದು ಆರೋಪಿಸಲಾಗಿದೆ.

ಇರಾನ್ ನ ಪರಮೊಚ್ಚ ನಾಯಕ ಆಯತೊಲ್ಲಾ ಖಮೇನಿ ಆಡಳಿತದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳು ಆಂದೋಲನದ ಸ್ವರೂಪ ಪಡೆದುಕೊಂಡಿವೆ. ಪ್ರತಿಭಟನೆಗಳನ್ನು ತಡೆಯಲು ವಿದ್ಯುತ್ ಕಡಿತ, ಇಂಟರ್ನೆಟ್ ಕಡಿತ ಸೇರಿದಂತೆ ಸಾಧ್ಯವಿರುವ ಎಲ್ಲಾ ಪ್ರಯತ್ನಗಳನ್ನು ಮಾಡಲಾಗಿದೆ. ರಾಜಧಾನಿ ಟೆಹ್ರಾನ್, ಮಶಾದ್ ಸೇರಿದಂತೆ ದೇಶದ ಎಲ್ಲಾ 31 ಪ್ರಾಂತ್ಯದಲ್ಲೂ ಪ್ರತಿಭಟನೆಗಳು ತೀವ್ರಸ್ವರೂಪ ಪಡೆದುಕೊಂಡಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿ : ಇರಾನ್‌ನಲ್ಲಿ ಭುಗಿಲೆದ್ದ ಪ್ರತಿಭಟನೆ

ರಾಜಕೀಯ ಸ್ವಾತಂತ್ರ್ಯದ ಕೊರತೆ, ಆರ್ಥಿಕತೆಯ ಕುಸಿತ, ಭ್ರಷ್ಟಾಚಾರವು ಪ್ರತಿಭಟನೆಗೆ ಕಾರಣಗಳು ಎನ್ನಲಾಗುತ್ತಿದ್ದು, ಸರ್ವೋಚ್ಚ ನಾಯಕ ಖಮೇನಿ ಅವರ ಸರ್ಕಾರವನ್ನು ಕಿತ್ತೊಗೆಯಲು ಪ್ರತಿಭಟನಕಾರರು ತೀರ್ಮಾನಿಸಿದ್ದಾರೆ. ಇರಾನ್ ದೇಶದ ಜನರು ಸ್ವಾತಂತ್ರ್ಯವನ್ನು ಬಯಸಿದರೆ, ಅವರ ಬಂಬಲಕ್ಕೆ ಸಂಪೂರ್ಣ ಸಿದ್ಧ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಇರಾನ್ ದೇಶವನ್ನು ರಕ್ಷಿಸಲು ಮಿಲಿಟರಿ ಕ್ರಮಕ್ಕೆ ಅಮೆರಿಕ ಸಿದ್ಧ ಎಂದ ಟ್ರಂಪ್, ತೈಲ ರಫ್ತುದಾರ ರಾಷ್ಟ್ರವಾದ ಇರಾನ್‌ನೊಂದಿಗೆ ವ್ಯವಹಾರ ನಡೆಸುವ ಯಾವುದೇ ದೇಶದ ಉತ್ಪನ್ನಗಳ ಮೇಲೆ ಶೇ.25 ರಷ್ಟು ಆಮದು ಸುಂಕವನ್ನು ಘೋಷಿಸಿದ್ದಾರೆ.

“ಇರಾನ್ ನಲ್ಲಿರುವ ಸರ್ಕಾರ ಕೆಲವೇ ದಿನಗಳಲ್ಲಿ ಅಧಿಕಾರ ಕಳೆದುಕೊಳ್ಳಲಿದೆ. ಖಮೇನಿ ಆಡಳಿತದ ಅಂತಿಮ ದಿನಗಳನ್ನು ನಾವು ಕಾಣುತ್ತಿದ್ದೇವೆ” ಎಂದು ಜರ್ಮನ್ ಚಾನ್ಸೆಲರ್ ಫ್ರೆಡ್ರಿಕ್ ಮೆರ್ಜ್ ಅಭಿಪ್ರಾಯಪಟ್ಟಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...