ಪರಮಾಣು ಒಪ್ಪಂದ |ಅಮೆರಿಕ ನಿರ್ಬಂಧ ತೆರವುಗೊಳಿಸಿದರೆ ರಾಜಿ ಸಂಧಾನಕ್ಕೆ ಸಿದ್ಧ: ಇರಾನ್

Date:

ಅಮೆರಿಕವು ಆರ್ಥಿಕ ನಿರ್ಬಂಧಗಳನ್ನು ತೆಗೆದುಹಾಕುವ ವಿಷಯದಲ್ಲಿ ಮುಕ್ತ ಮನಸ್ಸು ಹೊಂದಿದ್ದರೆ, ಪರಮಾಣು ಒಪ್ಪಂದವನ್ನು ಅಂತಿಮಗೊಳಿಸುವ ನಿಟ್ಟಿನಲ್ಲಿ ರಾಜಿ ಮಾಡಿಕೊಳ್ಳಲು ತಾವು ಸಿದ್ಧರಿರುವುದಾಗಿ ಇರಾನ್ ತಿಳಿಸಿದೆ.

​ಈ ಕುರಿತು ಇರಾನ್‌ನ ಉಪ ವಿದೇಶಾಂಗ ಸಚಿವ ಮಜಿದ್ ತಖ್ತ್ ರವಾಂಚಿ ಅವರು ‘ಬಿಬಿಸಿ’ಗೆ ನೀಡಿದ ಸಂದರ್ಶನದಲ್ಲಿ ಮಹತ್ವದ ಹೇಳಿಕೆ ನೀಡಿದ್ದಾರೆ. ದೀರ್ಘಕಾಲದಿಂದ ನೆನೆಗುದಿಗೆ ಬಿದ್ದಿರುವ ಈ ಮಾತುಕತೆ ಪ್ರಕ್ರಿಯೆಗೆ ಇರಾನ್ ಕಾರಣ ಎಂದು ಅಮೆರಿಕದ ಅಧಿಕಾರಿಗಳು ಪದೇ ಪದೇ ಆರೋಪಿಸುತ್ತಿರುವ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಶನಿವಾರವಷ್ಟೇ ಹೇಳಿಕೆ ನೀಡಿದ್ದ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ, “ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಒಪ್ಪಂದ ಮಾಡಿಕೊಳ್ಳಲು ಆಸಕ್ತಿ ಹೊಂದಿದ್ದರೂ, ಇರಾನ್ ಜೊತೆಗಿನ ವ್ಯವಹಾರ ಕಠಿಣವಾಗಿದೆ” ಎಂದು ಅಭಿಪ್ರಾಯಪಟ್ಟಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

​ಇದಕ್ಕೆ ಪ್ರತ್ಯುತ್ತರ ನೀಡಿರುವ ಸಚಿವ ರವಾಂಚಿ “ಒಪ್ಪಂದ ಮಾಡಿಕೊಳ್ಳುವ ಇಚ್ಛೆಯನ್ನು ಸಾಬೀತುಪಡಿಸಬೇಕಿರುವುದು ಅಮೆರಿಕವೇ ಹೊರತು ಇರಾನ್ ಅಲ್ಲ. ಚೆಂಡು ಈಗ ಅಮೆರಿಕದ ಅಂಗಳದಲ್ಲಿದೆ. ಅವರ ನಡೆ ಪ್ರಾಮಾಣಿಕವಾಗಿದ್ದರೆ, ನಾವು ಒಪ್ಪಂದದ ಹಾದಿಗೆ ಮರಳಲಿದ್ದೇವೆ” ಎಂದು ತಿಳಿಸಿದ್ದಾರೆ.

ಒಂದು ವೇಳೆ ಪರಮಾಣು ಕಾರ್ಯಕ್ರಮವನ್ನು ತಡೆಯುವ ಒಪ್ಪಂದ ವಿಫಲವಾದರೆ, ಇರಾನ್ ಮೇಲೆ ದಾಳಿ ನಡೆಸುವುದಾಗಿ ಅಧ್ಯಕ್ಷ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ, ಕೊಲ್ಲಿ ಪ್ರಾಂತ್ಯದಲ್ಲಿ ಅಮೆರಿಕ ತನ್ನ ಮಿಲಿಟರಿ ಉಪಸ್ಥಿತಿಯನ್ನು ಹೆಚ್ಚಿಸುತ್ತಿದೆ. ಕಳೆದ ತಿಂಗಳು ಇರಾನ್‌ನಲ್ಲಿ ನಡೆದ ಸರ್ಕಾರಿ ವಿರೋಧಿ ಪ್ರತಿಭಟನೆಗಳನ್ನು ಬಲವಂತವಾಗಿ ಹತ್ತಿಕ್ಕಲಾಗಿತ್ತು ಮತ್ತು ಇದರಲ್ಲಿ ಸಾವಿರಾರು ಜನರು ಮೃತಪಟ್ಟಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ವರದಿ ಮಾಡಿವೆ. ಈ ಉದ್ವಿಗ್ನತೆಯ ನಡುವೆಯೂ ಮಾತುಕತೆ ಮುಂದುವರಿದಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಖರ್ಗೆ ಭಾಷಣ ಕಿತ್ತು ಹಾಕಿದ್ದು ಖಂಡನೀಯ; ಅಂದು ದ್ರೋಣಾಚಾರ್ಯ, ಇಂದು ಸಂಘಾಚಾರ್ಯ!

​ಫೆಬ್ರವರಿ ಆರಂಭದಲ್ಲಿ ಒಮನ್‌ನಲ್ಲಿ ಉಭಯ ದೇಶಗಳ ನಡುವೆ ಪರೋಕ್ಷ ಮಾತುಕತೆ ನಡೆದಿತ್ತು. ಮಂಗಳವಾರ ಜಿನೀವಾದಲ್ಲಿ ಎರಡನೇ ಸುತ್ತಿನ ಮಾತುಕತೆ ನಡೆಯಲಿದ್ದು, ಪ್ರಕ್ರಿಯೆ ಸಕಾರಾತ್ಮಕ ದಿಕ್ಕಿನಲ್ಲಿದೆ ಎಂದು ರವಾಂಚಿ ತಿಳಿಸಿದ್ದಾರೆ.

ಶೇ. 60ರಷ್ಟು ಶುದ್ಧೀಕರಿಸಿದ ಯುರೇನಿಯಂ ದಾಸ್ತಾನನ್ನು ಕಡಿಮೆ ಮಾಡಲು ಇರಾನ್ ಮುಂದಾಗಿರುವುದು ರಾಜಿ ಸಂಧಾನಕ್ಕೆ ಅದು ಸಿದ್ಧವಿರುವುದರ ಸಂಕೇತವಾಗಿದೆ. ಈ ಮಟ್ಟದ ಶುದ್ಧೀಕರಣವು ಅಣ್ವಸ್ತ್ರ ತಯಾರಿಕೆಗೆ ಅತ್ಯಂತ ಹತ್ತಿರವಾಗಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಆತಂಕ ಸೃಷ್ಟಿಸಿತ್ತು.

​ಆದರೆ, “ನಿರ್ಬಂಧಗಳ ಬಗ್ಗೆ ಚರ್ಚಿಸಲು ಅವರು ಸಿದ್ಧರಿದ್ದರೆ ಮಾತ್ರ ನಾವು ನಮ್ಮ ಕಾರ್ಯಕ್ರಮದ ಬಗ್ಗೆ ಚರ್ಚಿಸುತ್ತೇವೆ,” ಎಂದು ರವಾಂಚಿ ಷರತ್ತು ವಿಧಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...