ಇಸ್ರೇಲ್ ದಾಳಿಗೆ ಇರಾನ್ ಪ್ರತ್ಯುತ್ತರ, ರಾಜಧಾನಿ ಟೆಲ್‌ ಅವೀವ್‌ ಮೇಲೆ ಕ್ಷಿಪಣಿ ದಾಳಿ

Date:

ಶುಕ್ರವಾರ ಇಸ್ರೇಲ್‌ ನಡೆಸಿದ ಮಾರಣಾಂತಿಕ ದಾಳಿಗೆ ಇರಾನ್‌ ಪ್ರತ್ಯುತ್ತರ ನೀಡಿದೆ. ಶನಿವಾರ ಬೆಳಗ್ಗೆ ಇಸ್ರೇಲ್ ಮೇಲೆ ಇರಾನ್ ಹೊಸದಾಗಿ ಕ್ಷಿಪಣಿ ದಾಳಿಯನ್ನು ಆರಂಭಿಸಿದೆ. ‌

ವಿಶೇಷವಾಗಿ, ಯಹೂದಿ ರಾಷ್ಟ್ರದ ಉತ್ತರ ಭಾಗವನ್ನು ಗುರಿಯಾಗಿಸಿಕೊಂಡು ಇರಾನ್‌ ಈ ದಾಳಿ ನಡೆಸುತ್ತಿದೆ. ಇಸ್ರೇಲ್‌ ರಾಜಧಾನಿ ಟೆಲ್‌ ಅವೀವ್‌ನಲ್ಲಿ ನಡೆದ ಡ್ರೋನ್‌ ಹಾಗೂ ಕ್ಷಿಪಣಿ ದಾಳಿಯಲ್ಲಿ ಹಲವಾರು ನಾಗರಿಕರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.

ದಾಳಿ ಕುರಿತು ಮಾಹಿತಿ ನೀಡಿರುವ ಇರಾನ್‌ ಸೇನೆ, ‘ಇಸ್ರೇಲ್ ತನ್ನ ಪರಮಾಣು ನೆಲೆಗಳ ಮೇಲೆ ನೇರ ದಾಳಿ ನಡೆಸಿದೆ. ಇದರಲ್ಲಿ ಪರಮಾಣು ತಜ್ಞರು ಸೇರಿದಂತೆ ಪ್ರಮುಖರು ಹತ್ಯೆಗೆ ಈಡಾಗಿದ್ದಾರೆ. ಇದು ನಮಗೆ ಆಘಾತ ಉಂಟುಮಾಡಿದೆ. ಇದಕ್ಕೆ ನಾವು ಪ್ರತಿಕಾರ ತೀರಿಸಿಕೊಳ್ಳುತ್ತೇವೆ. ಈಗಾಗಲೇ ಇಸ್ರೇಲ್‌ನ ಹಲವು ನಗರಗಳ ಮೇಲೆ ನೂರಾರು ಕ್ಷಿಪಣಿಗಳನ್ನು ಹಾರಿಸಲಾಗಿದೆ’ ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇರಾನ್ ವಿರುದ್ಧ ಇಸ್ರೇಲ್ ವೈಮಾನಿಕ ದಾಳಿ ನಡೆಸಿದ ನಂತರ ಪಶ್ಚಿಮ ಏಷ್ಯಾ ಸಂಘರ್ಷದತ್ತ ಸಾಗಿದೆ. ಶುಕ್ರವಾರ ಇರಾನ್‌ನ ಪರಮಾಣು ಘಟಕ ಮತ್ತು ಮಿಲಿಟರಿ ಕೇಂದ್ರಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದಾಳಿ 78 ಜನ ಮೃತಪಟ್ಟಿದ್ದು, 320ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿಗೆ ಇರಾನ್ ರಾಯಭಾರಿ ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಇಸ್ರೇಲ್ ಮತ್ತು ಅಮೆರಿಕಾದ ದುಷ್ಕೃತ್ಯ: ಜಗತ್ತನ್ನು ಮೂರನೇ ಮಹಾಯುದ್ಧದತ್ತ ದೂಡುವ ಅಪಾಯ

ಇಸ್ರೇಲ್ ನಡೆಸಿರುವ ವೈಮಾನಿಕ ದಾಳಿಯಲ್ಲಿ ಇರಾನ್‌ನ ಸೇನಾಪಡೆಗಳ ಮುಖ್ಯಸ್ಥನ ಹತ್ಯೆಗೈಯಲಾಗಿದೆ ಎಂದು ವರದಿಯಾಗಿದೆ. ಈ ಕುರಿತು ಇಸ್ರೇಲ್ ಸೇನೆ ತಿಳಿಸಿದ್ದು, ವೈಮಾನಿಕ ದಾಳಿಯಲ್ಲಿ ಇರಾನ್‌ನ ಸೇನಾಪಡೆಗಳ ಮುಖ್ಯಸ್ಥ ಮೊಹಮ್ಮದ್ ಬಘೇರಿ ಹತ್ಯೆಗೀಡಾಗಿದ್ದಾನೆ ಎಂದು ಹೇಳಿದೆ. ಇರಾನ್‌ ಪರಮಾಣು ಯೋಜನೆಯ ಇಬ್ಬರು ವಿಜ್ಞಾನಿಗಳು ಹತರಾಗಿರುವ ಸಾಧ್ಯತೆಯಿದೆ ಎಂದೂ ಸಹ ಇಸ್ರೇಲ್ ಸೇನೆ ಹೇಳಿದೆ.

ಹಾಗೆಯೇ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್‌ ಕಾರ್ಪ್ಸ್ ಮುಖ್ಯಸ್ಥ ಜನರಲ್ ಹುಸೇನ್ ಸಲಾಮಿ ಸಾವನ್ನಪ್ಪಿದ್ದಾರೆ ಎಂದು ಇರಾನ್ ಸರ್ಕಾರಿ ಟಿವಿ ದೃಢಪಡಿಸಿದೆ. ರೆವಲ್ಯೂಷನರಿ ಗಾರ್ಡ್ಸ್, ಇರಾನ್ ದೇಶದ ಶಕ್ತಿಕೇಂದ್ರ ಎಂದು ಬಿಂಬಿತವಾಗಿದೆ. ಹಾಗಾಗಿ, ಇದನ್ನೇ ಕೇಂದ್ರೀಕರಿಸಿ ಇಸ್ರೇಲ್ ದಾಳಿ ನಡೆಸಿದ್ದು, ಇರಾನ್ ದೇಶದ ಸ್ವಾಭಿಮಾನಕ್ಕೆ ದೊಡ್ಡ ಪೆಟ್ಟು ಕೊಟ್ಟಂತಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...