ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಮುಳುಗಡೆ: 140ಕ್ಕೂ ಹೆಚ್ಚು ಮಂದಿ ನಾಪತ್ತೆ ಶಂಕೆ

Date:

ಭಾರತದಿಂದ ಹಿಂದಿರುಗುತ್ತಿದ್ದ ಇರಾನ್ ನೌಕಾಪಡೆಗೆ ಸೇರಿದ ‘ಐಆರ್‌ಐಎಸ್ ಡೆನಾ’ ಯುದ್ಧನೌಕೆಯೊಂದು ಶ್ರೀಲಂಕಾ ಕರಾವಳಿ ಸಮೀಪ ಬುಧವಾರ ಮುಳುಗಡೆಯಾಗಿದ್ದು, ಹಡಗಿನಲ್ಲಿದ್ದ ಸುಮಾರು 140ಕ್ಕೂ ಹೆಚ್ಚು ಸಿಬ್ಬಂದಿ ನಾಪತ್ತೆಯಾಗಿದ್ದಾರೆ ಎಂದು ಶಂಕಿಸಲಾಗಿದೆ. ಹಡಗಿನಿಂದ ತುರ್ತು ಸಂದೇಶ ಸ್ವೀಕರಿಸಿದ ಬೆನ್ನಲ್ಲೇ ಕಾರ್ಯಾಚರಣೆ ನಡೆಸಿದ ಶ್ರೀಲಂಕಾ ನೌಕಾಪಡೆ 32 ಜನರನ್ನು ರಕ್ಷಿಸಿದೆ.

​ಸುಮಾರು 180 ಸಿಬ್ಬಂದಿಯನ್ನು ಒಳಗೊಂಡಿದ್ದ ಮೌಡ್ಜ್-ಕ್ಲಾಸ್ ಶ್ರೇಣಿಯ ಈ ಯುದ್ಧನೌಕೆಯು, ಶ್ರೀಲಂಕಾದ ದಕ್ಷಿಣಕ್ಕೆ ಸುಮಾರು 40 ನಾಟಿಕಲ್ ಮೈಲಿ ದೂರದಲ್ಲಿರುವ ಅಂತಾರಾಷ್ಟ್ರೀಯ ಜಲಪ್ರದೇಶದಲ್ಲಿ ಮುಳುಗಡೆಯಾಗಿದೆ. ಹಡಗು ಮುಳುಗಡೆಗೆ ನಿಖರ ಕಾರಣ ತಿಳಿದುಬಂದಿಲ್ಲ. ದಾಳಿ, ತಾಂತ್ರಿಕ ದೋಷ ಅಥವಾ ಸಮುದ್ರದಲ್ಲಿನ ಬೇರಾವುದೇ ಅವಘಡದಿಂದ ಈ ದುರಂತ ಸಂಭವಿಸಿದೆಯೇ ಎಂಬುದರ ಬಗ್ಗೆ ಅಧಿಕಾರಿಗಳು ಇನ್ನೂ ಸ್ಪಷ್ಟನೆ ನೀಡಿಲ್ಲ.

“ಮುಳುಗಡೆಯಾದ ಹಡಗಿನಿಂದ ಈವರೆಗೆ 32 ಜನರನ್ನು ರಕ್ಷಿಸಲಾಗಿದ್ದು, ದಕ್ಷಿಣದ ಬಂದರು ನಗರವಾದ ಗಾಲೆಯಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸಮುದ್ರದಿಂದ ಕೆಲವು ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಗುರುತು ಪತ್ತೆ ಹಚ್ಚುವ ಕಾರ್ಯ ಪ್ರಗತಿಯಲ್ಲಿದೆ” ಎಂದು ಶ್ರೀಲಂಕಾ ನೌಕಾಪಡೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಟಿ20 ವಿಶ್ವಕಪ್ | ಶ್ರೀಲಂಕಾ ಸೋಲಿನ ಬೆನ್ನಲ್ಲೇ ಮುಖ್ಯ ಕೋಚ್‌ ಹುದ್ದೆ ತೊರೆದ ಸನತ್‌ ಜಯಸೂರ್ಯ

​ಶ್ರೀಲಂಕಾದ ಜಲಗಡಿಯಾಚೆ ಈ ಘಟನೆ ನಡೆದಿದ್ದರೂ, ತುರ್ತು ಸಂದೇಶ ಬಂದ ತಕ್ಷಣವೇ ಶ್ರೀಲಂಕಾ ನೆರವಿಗೆ ಧಾವಿಸಿದೆ ಎಂದು ವಿದೇಶಾಂಗ ಸಚಿವ ವಿಜಿತಾ ಹೆರಾತ್ ಸಂಸತ್ತಿಗೆ ಮಾಹಿತಿ ನೀಡಿದ್ದಾರೆ. ಶ್ರೀಲಂಕಾ ನೌಕಾಪಡೆ ಹಾಗೂ ವಾಯುಪಡೆ ಜಂಟಿಯಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿವೆ.

ಭಾರತದಲ್ಲಿ ಇತ್ತೀಚೆಗೆ ನಡೆದ ‘ಇಂಟರ್‌ನ್ಯಾಷನಲ್ ಫ್ಲೀಟ್ ರಿವ್ಯೂ 2026’ ದಲ್ಲಿ ಪಾಲ್ಗೊಂಡು ತಾಯ್ನಾಡಿಗೆ ಮರಳುತ್ತಿದ್ದಾಗ ಈ ಘಟನೆ ನಡೆದಿದೆ. ಮುಳುಗಡೆಯಾಗುವ ಎರಡು ವಾರಗಳ ಹಿಂದಷ್ಟೇ ಭಾರತದ ಪೂರ್ವ ನೌಕಾ ಕಮಾಂಡ್ ಈ ಇರಾನ್ ನೌಕೆಯನ್ನು ಸ್ವಾಗತಿಸಿತ್ತು.

ಜಲಾಂತರ್ಗಾಮಿ ನೌಕೆಯೊಂದು ದಾಳಿ ಮಾಡಿದ್ದರಿಂದ ಹಡಗು ಮುಳುಗಡೆಯಾಗಿದೆ ಮತ್ತು 101 ಜನರು ನಾಪತ್ತೆಯಾಗಿದ್ದಾರೆ ಎಂಬ ವರದಿಗಳನ್ನು ಶ್ರೀಲಂಕಾ ನೌಕಾಪಡೆಯ ವಕ್ತಾರರು ತಳ್ಳಿಹಾಕಿದ್ದಾರೆ. “ಹಡಗು ಮುಳುಗಡೆಗೆ ಕಾರಣಗಳ ಕುರಿತು ಹರಿದಾಡುತ್ತಿರುವ ವರದಿಗಳನ್ನು ನಾವು ನಿರಾಕರಿಸುತ್ತೇವೆ. ಪ್ರಸ್ತುತ ನಮ್ಮ ಮೊದಲ ಆದ್ಯತೆ ಜೀವ ರಕ್ಷಣೆಯಾಗಿದೆ. ಘಟನಾ ಸ್ಥಳದ ಆಸುಪಾಸಿನಲ್ಲಿ ಯಾವುದೇ ಬೇರೆ ಹಡಗು ಅಥವಾ ವಿಮಾನಗಳ ಹಾರಾಟ ಕಂಡುಬಂದಿಲ್ಲ” ಎಂದು ವಕ್ತಾರರು ಸ್ಪಷ್ಟಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...