ಹಾರ್ಮುಜ್ ಜಲಸಂಧಿ ಇರಾನ್ ಸೇನೆ ವಶಕ್ಕೆ; ಲೆಬನಾನ್, ಕುವೈತ್, ಇರಾಕ್‌ನಲ್ಲೂ ಮುಂದುವರಿದ ಸಂಘರ್ಷ

Date:

ಅಮೆರಿಕ ಮತ್ತು ಇಸ್ರೇಲ್ ಪಡೆಗಳು ಇರಾನ್ ಮೇಲೆ ಭಾರಿ ದಾಳಿ ನಡೆಸುತ್ತಿದ್ದು, ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಭೀತಿ ಮತ್ತಷ್ಟು ತೀವ್ರಗೊಂಡಿದೆ. ಇರಾನ್‌ನ ಉನ್ನತ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರನ್ನು ಹತ್ಯೆ ಮಾಡಿರುವ ಇಸ್ರೇಲ್, ಇದೀಗ ಅವರ ಉತ್ತರಾಧಿಕಾರಿಯಾಗಿ ಆಯ್ಕೆಯಾಗುವ ಯಾವುದೇ ನಾಯಕನಿಗೂ ಹತ್ಯೆಯ ಎಚ್ಚರಿಕೆ ನೀಡಿದೆ. ಇಸ್ರೇಲ್ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ಈ ಕುರಿತು ‘ಎಕ್ಸ್’ (X) ನಲ್ಲಿ ಪ್ರತಿಕ್ರಿಯಿಸಿದ್ದು, “ಇಸ್ರೇಲ್ ನಾಶಕ್ಕೆ ಸಂಚು ರೂಪಿಸುವ, ಅಮೆರಿಕ ಹಾಗೂ ಮುಕ್ತ ಪ್ರಪಂಚಕ್ಕೆ ಬೆದರಿಕೆ ಒಡ್ಡುವ ಯಾವುದೇ ವ್ಯಕ್ತಿಯಾದರೂ, ಆತ ಎಲ್ಲೇ ಅಡಗಿದ್ದರೂ ನಮ್ಮ ನಿಶ್ಚಿತ ಗುರಿಯಾಗಲಿದ್ದಾನೆ” ಎಂದು ಗುಡುಗಿದ್ದಾರೆ.

​ಮತ್ತೊಂದೆಡೆ, ಇಸ್ರೇಲ್ ಸೇನೆಯು ಇರಾನ್ ರಾಜಧಾನಿ ಟೆಹರಾನ್‌ನಾದ್ಯಂತ ಇರುವ ಹತ್ತಾರು ಭದ್ರತಾ ಕಮಾಂಡ್ ಕೇಂದ್ರಗಳು ಹಾಗೂ ಅರೆಸೈನಿಕ ಪಡೆ ನೆಲೆಗಳ ಮೇಲೆ ತಾನು ಯಶಸ್ವಿಯಾಗಿ ವೈಮಾನಿಕ ದಾಳಿಗಳನ್ನು ಪೂರ್ಣಗೊಳಿಸಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದೆ. ಈ ಭಾರಿ ದಾಳಿಯಲ್ಲಿ ಮೃತಪಟ್ಟ ಉನ್ನತ ನಾಯಕ ಖಮೇನಿ ಅವರ ಅಂತಿಮ ದರ್ಶನಕ್ಕೆ ಇರಾನ್ ಸಿದ್ಧತೆ ನಡೆಸಿದೆ. ಬುಧವಾರ ರಾತ್ರಿ 10 ಗಂಟೆಗೆ ಟೆಹರಾನ್‌ನ ಇಮಾಮ್ ಖೊಮೇನಿ ಪ್ರಾರ್ಥನಾ ಮೈದಾನದಲ್ಲಿ ಅಂತಿಮ ನಮನ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದ್ದು, ಸತತ ಮೂರು ದಿನಗಳ ಕಾಲ ನಡೆಯಲಿದೆ ಎಂದು ಅಲ್ಲಿನ ಸರ್ಕಾರಿ ಮಾಧ್ಯಮಗಳು ವರದಿ ಮಾಡಿವೆ.

​ಈ ಉದ್ವಿಗ್ನತೆಯ ನಡುವೆ, ಆಯಕಟ್ಟಿನ ಪ್ರದೇಶವಾದ ‘ಹಾರ್ಮುಜ್ ಜಲಸಂಧಿ’ಯನ್ನು ಸಂಪೂರ್ಣವಾಗಿ ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿರುವುದಾಗಿ ಇರಾನ್‌ನ ರೆವಲ್ಯೂಷನರಿ ಗಾರ್ಡ್ಸ್ ಘೋಷಿಸಿದೆ. ಈ ಜಲಮಾರ್ಗದಲ್ಲಿ ಸಂಚರಿಸುವ ಯಾವುದೇ ಹಡಗುಗಳು ಡ್ರೋನ್ ಅಥವಾ ಕ್ಷಿಪಣಿ ದಾಳಿಗೆ ತುತ್ತಾಗುವ ಅಪಾಯವಿದೆ ಎಂದು ನೌಕಾಪಡೆ ಅಧಿಕಾರಿ ಮೊಹಮ್ಮದ್ ಅಕ್ಬರ್ಜಾದೆ ಎಚ್ಚರಿಕೆ ನೀಡಿದ್ದಾರೆ. ಗಲ್ಫ್ ರಾಷ್ಟ್ರಗಳಲ್ಲಿ ಇರಾನ್ ನಡೆಸಿದ ಪ್ರತಿದಾಳಿಯಿಂದಾಗಿ ಕುವೈತ್‌ನಲ್ಲಿ ಸಿಡಿತಲೆಯ ಚೂರುಗಳು ತಗುಲಿ 11 ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ. ಇದಲ್ಲದೆ, ಕುವೈತ್‌ನಲ್ಲಿರುವ 4 ಅಮೆರಿಕನ್ ಯೋಧರು ಮೃತಪಟ್ಟಿದ್ದು, ಅಮೆರಿಕದ ರಾಯಭಾರಿ ಕಚೇರಿ ಹಾಗೂ ಇಂಧನ ಮೂಲಸೌಕರ್ಯಗಳ ಮೇಲೆ ಡ್ರೋನ್ ದಾಳಿ ನಡೆದಿದೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಫಿಫಾ ವಿಶ್ವಕಪ್ 2026 | ಯುದ್ಧಗಳ ಕಾರ್ಮೋಡದ ನಡುವೆ ಫುಟ್‌ಬಾಲ್ ಹಬ್ಬಕ್ಕೆ 100 ದಿನಗಳ ಕ್ಷಣಗಣನೆ

​ಈ ಸಂಘರ್ಷವು ಲೆಬನಾನ್ ಮತ್ತು ಇರಾಕ್‌ಗೂ ವ್ಯಾಪಿಸಿದೆ. ಇಸ್ರೇಲ್ ಸೇನೆಯು ಮುನ್ನೆಚ್ಚರಿಕೆ ನೀಡಿದ ಬೆನ್ನಲ್ಲೇ ದಕ್ಷಿಣ ಬೈರುತ್‌ನಲ್ಲಿರುವ ಹಿಜ್ಬುಲ್ಲಾ ನೆಲೆಯ ಮೇಲೆ ಭಾರಿ ವೈಮಾನಿಕ ದಾಳಿ ನಡೆದಿದೆ. ಈ ಹಿಂದೆ ಲೆಬನಾನ್‌ನ ಬೈರುತ್ ಅಧ್ಯಕ್ಷೀಯ ಅರಮನೆ ಸಮೀಪ ಹಾಗೂ ಬಾಲ್ಬೆಕ್ ನಗರದ ಮೇಲೆ ನಡೆದ ಸರಣಿ ದಾಳಿಯಲ್ಲಿ 11 ಮಂದಿ ಸಾವನ್ನಪ್ಪಿದ್ದರು.

ಇತ್ತ ಅಮೆರಿಕದ ರಾಜತಾಂತ್ರಿಕ ಕಚೇರಿ ಹಾಗೂ ಮಿಲಿಟರಿ ನೆಲೆಯನ್ನು ಹೊಂದಿರುವ ಇರಾಕ್‌ನ ಬಾಗ್ದಾದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ಒಂದನ್ನು ಹೊಡೆದುರುಳಿಸಲಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಪಶ್ಚಿಮ ಏಷ್ಯಾದಲ್ಲಿ ಭುಗಿಲೆದ್ದಿರುವ ಈ ಒಟ್ಟಾರೆ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ, ಪರಿಸ್ಥಿತಿಯನ್ನು ನಿಭಾಯಿಸಲು ಹಾಗೂ ಭಾರತೀಯರ ನೆರವಿಗಾಗಿ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು (MEA) ವಿಶೇಷ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....