ಇಸ್ರೇಲ್ ‘ಆತ್ಮ ರಕ್ಷಣೆ’ಯ ವ್ಯಾಪ್ತಿ ಮೀರಿ ವರ್ತಿಸುತ್ತಿದೆ: ಚೀನಾ

Date:

ಗಾಜಾದಲ್ಲಿ ಇಸ್ರೇಲ್‌ನ ಧೋರಣೆ ಮತ್ತು ಕ್ರಮಗಳು ‘ಆತ್ಮ ರಕ್ಷಣೆ’ಯ ವ್ಯಾಪ್ತಿ ಮೀರಿ ಹೋಗಿವೆ. ಇಸ್ರೇಲಿ ಸರ್ಕಾರವು ‘ಗಾಜಾದ ಜನರನ್ನು ಸಾಮೂಹಿಕವಾಗಿ ಶಿಕ್ಷಿಸುತ್ತಿರುವುದನ್ನು ನಿಲ್ಲಿಸಬೇಕು’ ಎಂದು ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಹೇಳಿದ್ದಾರೆ.

ಶನಿವಾರ ಸೌದಿ ಅರೇಬಿಯಾದ ವಿದೇಶಾಂಗ ಸಚಿವ ಪ್ರಿನ್ಸ್ ಫೈಸಲ್ ಬಿನ್ ಫರ್ಹಾನ್ ಅವರಿಗೆ ಕರೆ ಮಾಡಿ ವಾಂಗ್ ಅವರು ಮಾತನಾಡಿದ್ದಾರೆ. “ಗಾಜಾದಲ್ಲಿ ಹಮಾಸ್ ವಿರುದ್ಧ ಇಸ್ರೇಲ್ ಮತ್ತಷ್ಟು ಆಕ್ರಮಣಕ್ಕೆ ಸಜ್ಜಾಗುತ್ತಿರುವುದು ಕಂಡುಬಂದಿದೆ” ಎಂದು ಅವರು ಹೇಳಿದ್ದಾರೆ.

ಸೌದಿ ಅರೇಬಿಯಾ ಮತ್ತು ಹಮಾಸ್ ಬೆಂಬಲಿಗ ರಾಷ್ಟ್ರ ಇರಾನ್ ನಡುವೆ ಮಾರ್ಚ್‌ನಲ್ಲಿ ಸಂಬಂಧಗಳನ್ನು ಮರುಸ್ಥಾಪಿಸುವಲ್ಲಿ ಚೀನಾ ಮಧ್ಯವರ್ತಿಯಾಗಿ ಸ್ಥಾನ ಪಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇಸ್ರೇಲ್‌ನ ಕ್ರಮಗಳು ಆತ್ಮರಕ್ಷಣೆಯ ವ್ಯಾಪ್ತಿಯನ್ನು ಮೀರಿವೆ. ಅಂತರಾಷ್ಟ್ರೀಯ ಸಮುದಾಯ ಮತ್ತು ಯುಎನ್ ಸೆಕ್ರೆಟರಿ ಜನರಲ್  ಕರೆಗಳನ್ನು ಇಸ್ರೇಲ್‌ ಶ್ರದ್ಧೆಯಿಂದ ಆಲಿಸಬೇಕು. ಗಾಜಾದ ಜನರ ಸಾಮೂಹಿಕ ಶಿಕ್ಷೆಯನ್ನು ನಿಲ್ಲಿಸಬೇಕು” ಎಂದು ವಾಂಗ್ ಹೇಳಿದ್ದಾರೆ.

ಗಾಜಾದ ಜನನಿಬಿಡ ಎನ್‌ಕ್ಲೇವ್‌ನ ಉತ್ತರ ಭಾಗದಲ್ಲಿ 10 ಲಕ್ಷಕ್ಕೂ ಹೆಚ್ಚು ಮಂದಿ ಇದ್ದಾರೆ. ಅವರೆಲ್ಲರಿಗೂ ನಿರೀಕ್ಷಿತ ದಾಳಿಯ ಕಾರಣಕ್ಕಾಗಿ ಅಲ್ಲಿಂದ ಪಲಾಯನ ಮಾಡಲು ಆದೇಶಿಸಲಾಗಿದೆ. ಆದರೆ, ಇಸ್ರೇಲ್‌ ನಿರ್ಮಿಸಿರುವ ಬೇಲಿ, ರಸ್ತೆಗಳ ನಾಶದ ಕಾರಣಕ್ಕಾಗಿ ಜನರು ಎಲ್ಲಿಯೂ ಹೋಗಲಾಗದೆ ಅಲ್ಲಿಯೇ ಸಿಲುಕಿಕೊಂಡಿದ್ದಾರೆ. ಹೊರ ಹೋಗಲು ಹರಸಾಹಸ ಪಡುತ್ತಿದ್ದಾರೆ.

23 ಲಕ್ಷಕ್ಕೂ ಹೆಚ್ಚು ಜನರು ವಾಸಿಸುತ್ತಿರುವ ಗಾಜಾ ಪ್ರದೇಶವು 2006ರಿಂದ ಭೂಮಿ, ವಾಯು ಮತ್ತು ಸಮುದ್ರ ಮಾರ್ಗಗಳ ದಿಗ್ಬಂಧನದಲ್ಲಿದೆ.

ಗಾಜಾ ಪಟ್ಟಿಯಲ್ಲಿ ಇಸ್ರೇಲ್‌ ನಿರ್ಮಿಸಿರುವ ಭದ್ರವಾದ ಬೇಲಿಯನ್ನು ಭೇದಿಸಿ ಹಮಾಸ್‌ ಹೋರಾಟಗಾರರು ಇಸ್ರೇಲ್‌ ವಿರುದ್ಧ ಸಮರಕ್ಕಿಳಿದಿದ್ದಾರೆ. ಗಾಜಾ ಪಟ್ಟಿಯ ಮೇಲೆ ಇಸ್ರೇಲ್‌ ಆತ್ಮ ರಕ್ಷಣೆಯ ಹೆಸರಿನಲ್ಲಿ ಪ್ರತಿಕಾರದ ಬಾಂಬ್‌ ದಾಳಿ ನಡೆಸುತ್ತಿದೆ. ಸಾವಿರಾರು ಮಂದಿ ಸಾವನ್ನಪ್ಪಿದ್ದಾರೆ.

“ಪರಿಸ್ಥಿತಿ ಉಲ್ಬಣಗೊಳ್ಳುವ ಯಾವುದೇ ಕ್ರಮಗಳನ್ನು ಎರಡೂ ಕಡೆಯವರು ತೆಗೆದುಕೊಳ್ಳಬಾರದು. ಸಾಧ್ಯವಾದಷ್ಟು ಬೇಗ ಮಾತುಕತೆಗೆ ಬರಬೇಕು” ಎಂದು ವಾಂಗ್ ಹೇಳಿದ್ದಾರೆ.

ವಾಂಗ್ ಅವರು ಯುಎಸ್‌ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ಅವರೊಂದಿಗೆ ಶನಿವಾರ ಪೋನ್‌ ಕರೆಯಲ್ಲಿ ಮಾತನಾಡಿದ್ದಾರೆ.  “ಶಾಂತಿ ಮತ್ತು ಒಮ್ಮತವನ್ನು ತರಲು ಸಾಧ್ಯವಾದಷ್ಟು ಬೇಗ ಅಂತರರಾಷ್ಟ್ರೀಯ ಶಾಂತಿ ಸಭೆಯನ್ನು ಕರೆಯಬೇಕು” ಎಂದು ವಾಂಗ್‌ ಒತ್ತಾಯಿಸಿದ್ದಾರೆ.

ಇಸ್ರೇಲ್-ಹಮಾಸ್ ಸಂಘರ್ಷದಲ್ಲಿ ಕದನ ವಿರಾಮಕ್ಕೆ ಒತ್ತಾಯಿಸಲು ಮತ್ತು ಶಾಂತಿ ಮಾತುಕತೆಗೆ ಕರೆಯಲು ಚೀನಾದ ವಿಶೇಷ ರಾಯಭಾರಿ ಝೈ ಜುನ್ ಮುಂದಿನ ವಾರ ಮಧ್ಯಪ್ರಾಚ್ಯಕ್ಕೆ ಭೇಟಿ ನೀಡಲಿದ್ದಾರೆ ಎಂದು ವರದಿಯಾಘಿದೆ.

“ಕದನ ವಿರಾಮಕ್ಕಾಗಿ ಎಲ್ಲರೊಂದಿಗೆ ಸಮನ್ವಯ ಸಾಧಿಸಲು, ನಾಗರಿಕರನ್ನು ರಕ್ಷಿಸಲು, ಪರಿಸ್ಥಿತಿಯನ್ನು ಸುಗಮಗೊಳಿಸಲು ಮತ್ತು ಶಾಂತಿ ಮಾತುಕತೆಗಳನ್ನು ನಡೆಸಲು ಮುಂದಿನ ವಾರ ಮಧ್ಯಪ್ರಾಚ್ಯಕ್ಕೆ ಝೈ ಜುನ್ ಭೇಟಿ ನೀಡಲಿದ್ದಾರೆ” ಎಂದು ಚೀನಾದ ಸಿಸಿಟಿವಿ ತನ್ನ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಪೋಸ್ಟ್‌ ಮಾಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

RSS, BJP ವಿರುದ್ಧ ಹೋರಾಡುವ ದೇಶದ ಏಕೈಕ ನಾಯಕ ರಾಹುಲ್‌ ಗಾಂಧಿ : RS MP ಕ್ರಿಸ್ಟೋಫರ್ ತಿಲಕ್

ಸೋನಿಯಾ ಗಾಂಧಿ ಅವರು ಕಂಡ ರಾಜಕೀಯದ ಪರಿಸ್ಥಿತಿಯೇ ಬೇರೆ, ರಾಹುಲ್‌ ಗಾಂಧಿ...

ಅಮೆರಿಕ ವಿಮಾನ ನಿಲ್ದಾಣ: ಏರ್ ಕೆನಡಾ ವಿಮಾನಕ್ಕೆ ಅಪ್ಪಳಿಸಿದ ಟ್ರಕ್

ಅಮೆರಿಕದ ನ್ಯೂಯಾರ್ಕ್‌ನಲ್ಲಿರುವ ಜನನಿಬಿಡ ಲಾ ಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಏರ್ ಕೆನಡಾ...

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...