‘ಯೆಲ್ಲೋ ಲೈನ್‌’ ದಾಟಿದ ಗಾಜಾ ಬಸ್‌ ಮೇಲೆ ಇಸ್ರೇಲ್‌ ದಾಳಿ; ಒಂದೇ ಕುಟುಂಬದ 9 ಮಂದಿ ಹತ್ಯೆ

Date:

ಕಳೆದ ಎರಡು ವರ್ಷಗಳಿಂದ ಗಾಜಾ ಮೇಲೆ ಇಸ್ರೇಲ್ ನಿರಂತರ ಕ್ರೌರ್ಯ ಎಸಗುತ್ತಿದೆ. ಇದೀಗ, ಉಭಯ ರಾಷ್ಟ್ರಗಳ ನಡುವೆ ಕದನ ವಿರಾಮ ಘೋಷಿಸಲಾಗಿದೆ ಎಂದು ಟ್ರಂಪ್ ಬಹಿರಂಗವಾಗಿ ಹೇಳಿದ್ದರು. ಆದರೆ, ಇಸ್ರೇಲ್-ಪ್ಯಾಲೆಸ್ತೀನ್ ನಡುವೆ ಗುರುತಿಸಲಾಗದ ಗಡಿಯಲ್ಲಿ ಹಳದಿ ರೇಖೆ (ಯೆಲ್ಲೋ ಲೈನ್) ದಾಟಿದ ಬಸ್‌ ಮೇಲೆ ಇಸ್ರೇಲ್‌ ಅಕ್ರಮಣಕಾರಿ ಗುಂಡಿನ ದಾಳಿ ನಡೆಸಿದೆ. ಬಸ್‌ನಲ್ಲಿದ್ದ ಒಂದೇ ಕುಟುಂಬದ 9 ಮಂದಿಯನ್ನು ಹತ್ಯೆಗೈದಿದೆ.

ಘಟನೆ ಬಗ್ಗೆ ಗಾಜಾದ ನಾಗರಿಕ ರಕ್ಷಣಾ ಏಜೆನ್ಸಿ ವಕ್ತಾರ ಮಹ್ಮೂದ ಬಸ್ಸಾಲ್ ಮಾಹಿತಿ ನೀಡಿದ್ದಾರೆ. ಗಾಜಾದ ನಾಗರಿಕ ರಕ್ಷಣಾ ಪಡೆಯ ಸಿಬ್ಬಂದಿಗಳು ಮೃತದೇಹಗಳನ್ನು ಬಸ್‌ನಿಂದ ಹೊರತೆಗಿದ್ದಾರೆ ಎಂದು ತಿಳಿಸಿದ್ದಾರೆ.

ಮೃತರನ್ನು ಅಬು ಶಾಬಾನ್ ಮತ್ತು ಅವರ ಕುಟುಂಬಸ್ಥರು ಎಂದು ಗುರುತಿಸಲಾಗಿದೆ. ಅವರು ಜೈತುನ್ ಪ್ರದೇಶದಲ್ಲಿ ತಮ್ಮ ಮನೆಯನ್ನು ಹುಡುಕಲು ಪ್ರಯತ್ನಿಸುತ್ತಿದ್ದಾಗ, ಅವರ ಮೇಲೆ ಇಸ್ರೇಲ್ ದಾಳಿ ನಡೆಸಿದೆ ಎಂದು ಬಸ್ಸಾಲ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆ ಬಗ್ಗೆ ಪ್ರಕ್ರಿಯಿಸಿರುವ ಇಸ್ರೇಲ್ ಮಿಲಿಟರಿ, “ಕದನ ವಿರಾಮ ಘೋಷಣೆಯ ಬಳಿಕ ಗಡಿಪ್ರದೇಶದ ‘ಹಳದಿ ರೇಖೆ’ ಬಳಿ ಇಸ್ರೇಲಿ ಪಡೆಗಳು ಬೀಡುಬಿಟ್ಟಿದ್ದಾರೆ. ಆ ಪ್ರದೇಶದಲ್ಲಿ ಬಸ್‌ವೊಂದು ‘ಹಳದಿ ರೇಖೆ’ಯನ್ನು ದಾಟಿದೆ. ಅನುಮಾನಸ್ಪದವಾಗಿ ಬರುತ್ತಿದ್ದ ಬಸ್‌ಗೆ ಎಚ್ಚರಿಕೆ ನೀಡಲು ಸೇನೆಯು ಗುಂಡು ಹಾರಿಸಿದೆ. ಆದರೂ, ವಾಹನವು ಬೆದರಿಕೆಯೊಡ್ಡವ ರೀತಿಯಲ್ಲಿ ಸೈನಿಕರತ್ತ ಬರುತ್ತಲೇ ಇತ್ತು. ಹೀಗಾಗಿ, ಸೈನಿಕರು ತಮ್ಮ ರಕ್ಷಣೆಗಾಗಿ ಬಸ್‌ ಮೇಲೆ ದಾಳಿ ನಡೆಸಿದ್ದಾರೆ” ಎಂದು ಹೇಳಿಕೊಂಡಿದೆ.

ಕದನ ವಿರಾಮ ಘೋಷಣೆಯಾದ ಬಳಿಕ, ಲಕ್ಷಾಂತರ ಪ್ಯಾಲೆಸ್ತೀನಿಯರು ತಮ್ಮ ಪ್ರದೇಶಗಳಿಗೆ ಮರಳುತ್ತಿದ್ದಾರೆ. ಅಲ್ಲಿದ್ದ ತಮ್ಮ ಮನೆಗಳನ್ನು ಹುಡುಕುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...