ಗಾಜಾದ ಮಕ್ಕಳಿಗೆ ಲಸಿಕೆ ಹಾಕಲು ಅಗತ್ಯವಿರುವ 16 ಲಕ್ಷ ಸಿರಿಂಜ್‌ಗಳಿಗೆ ಇಸ್ರೇಲ್ ನಿರ್ಬಂಧ

Date:

ಮಕ್ಕಳಿಗೆ ಲಸಿಕೆ ಹಾಕಲು ಅಗತ್ಯವಿರುವ ಸಿರಿಂಜ್‌ಗಳು, ನವಜಾತ ಶಿಶುಗಳಿಗೆ ಹಾಲು ಕುಡಿಸಲು ಬಳಸುವ ಬಾಟಲಿಗಳು ಸೇರಿದಂತೆ ಅಗತ್ಯದ ವಸ್ತುಗಳು ಗಾಝಾಕ್ಕೆ ಪ್ರವೇಶಿಸುವುದನ್ನು ಇಸ್ರೇಲ್ ತಡೆಯುತ್ತಿದೆ ಎಂದು ವಿಶ್ವಸಂಸ್ಥೆಯ ಮಕ್ಕಳ ನಿಧಿ(ಯುನಿಸೆಫ್) ಕಳವಳ ವ್ಯಕ್ತಪಡಿಸಿದೆ.

ಯುದ್ಧದಿಂದ ಜರ್ಜರಿತಗೊಂಡ ಪ್ರದೇಶದಲ್ಲಿ ಅಗತ್ಯವಿರುವವರಿಗೆ ನೆರವುಗಳು ತಲುಪುವುದಕ್ಕೆ ಇಸ್ರೇಲ್ ತಡೆಯೊಡ್ಡಿದೆ. ಗಾಜಾದಲ್ಲಿ ಅಸ್ಥಿರ ಕದನ ವಿರಾಮ ಜಾರಿಯಲ್ಲಿರುವಂತೆಯೇ ಯುನಿಸೆಫ್ ಮಕ್ಕಳ ಸಾಮೂಹಿಕ ಲಸಿಕಾ ಅಭಿಯಾನ ಕೈಗೊಂಡಿದೆ. ಆದರೆ 16 ಲಕ್ಷ ಸಿರಿಂಜ್ ಗಳು ಹಾಗೂ ಲಸಿಕೆ ಬಾಟಲಿಗಳನ್ನು ಸಂಗ್ರಹಿಸಲು ಅಗತ್ಯವಿರುವ ಸೌರಶಕ್ತಿ ಚಾಲಿತ ಫ್ರಿಜ್ ಗಳನ್ನು ಗಾಜಾಕ್ಕೆ ಸಾಗಿಸುವುದಕ್ಕೆ ಗಂಭೀರ ಸವಾಲು ಎದುರಾಗಿದೆ. ಸಿರಿಂಜ್‌ಗಳು ಕಸ್ಟಮ್ಸ್ ಕ್ಲಿಯರೆನ್ಸ್ಗಾಗಿ ಆಗಸ್ಟ್ನಿಂದ ಕಾಯುತ್ತಿವೆ . ಸಿರಿಂಜ್‌ಗಳು ಹಾಗೂ ರೆಫ್ರಿಜರೇಟರ್‌ಗಳನ್ನು ಇಸ್ರೇಲ್ ದ್ವಿ-ಬಳಕೆ ಎಂದು ಪರಿಗಣಿಸುತ್ತಿರುವುದರಿಂದ ಈ ವಸ್ತುಗಳು ಕಸ್ಟಮ್ಸ್ ಕ್ಲಿಯರೆನ್ಸ್ ಮತ್ತು ತಪಾಸಣೆಯ ಹಂತವನ್ನು ದಾಟಲು ತೊಡಕಾಗಿದೆ. ಆದರೆ ಇವು ಅತ್ಯಂತ ತುರ್ತು ಅಗತ್ಯದ ವಸ್ತುಗಳಾಗಿವೆ ಎಂದು ಯುನಿಸೆಫ್‌ ವಕ್ತಾರ ರಿಕಾರ್ಡೊ ಪಿರೆಸ್ ಹೇಳಿದ್ದಾರೆ.

ದ್ವಿ-ಬಳಕೆ ವಸ್ತುಗಳು ಎಂದರೆ ಮಿಲಿಟರಿ ಮತ್ತು ನಾಗರಿಕರ ಬಳಕೆಗೆ ಲಭಿಸುವ ವಸ್ತುಗಳು ಎಂದು ಇಸ್ರೇಲ್ ಪರಿಗಣಿಸುತ್ತದೆ. ಹಮಾಸ್ ಮಾನವೀಯ ನೆರವಿನ ಪೂರೈಕೆಗಳನ್ನು ಲೂಟಿ ಮಾಡುತ್ತಿರುವುದರಿಂದ ಆಹಾರ, ನೀರು, ವೈದ್ಯಕೀಯ ಸರಬರಾಜು ಹಾಗೂ ಡೇರೆ ಮತ್ತಿತರ ವಸ್ತುಗಳು ಸೀಮಿತ ಪ್ರಮಾಣದಲ್ಲಿ ಗಾಜಾಕ್ಕೆ ಪ್ರವೇಶಿಸಲು ಅವಕಾಶ ನೀಡುತ್ತಿರುವುದಾಗಿ ಗಾಜಾಕ್ಕೆ ನೆರವು ಪೂರೈಕೆಯ ಮೇಲುಸ್ತುವಾರಿ ವಹಿಸಿರುವ ಇಸ್ರೇಲ್ ಮಿಲಿಟರಿಯ ವಿಭಾಗ `ಕೊಗ್ಯಾಟ್’ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿಯಡಿ ದೇಶ ಸುರಕ್ಷಿತವೆಂಬ ಸುಳ್ಳುಗುಳ್ಳೆಯ ಒಡೆದ ಸ್ಫೋಟ

ಗಾಜಾದಲ್ಲಿ ಎರಡು ವರ್ಷಗಳ ಯುದ್ಧದ ಹಿನ್ನೆಲೆಯಲ್ಲಿ ಪೋಲಿಯೊ, ದಡಾರ ಮತ್ತು ನ್ಯುಮೋನಿಯಾದ ವಿರುದ್ಧದ ವಾಡಿಕೆಯ ಲಸಿಕೆಗಳಿಂದ ವಂಚಿತರಾಗಿರುವ ಗಾಜಾದ 40,000ಕ್ಕೂ ಅಧಿಕ ಮಕ್ಕಳಿಗೆ(3 ವರ್ಷದೊಳಗಿನವರು) ಲಸಿಕೆ ಹಾಕುವ ಮೂರು ಹಂತದ ಕಾರ್ಯಕ್ರಮಕ್ಕೆ ಯುನಿಸೆಫ್ ಭಾನುವಾರ ಚಾಲನೆ ನೀಡಿದೆ.

ಪ್ರಥಮ ದಿನದ ಅಭಿಯಾನದಲ್ಲಿ 2,400 ಮಕ್ಕಳಿಗೆ ಲಸಿಕೆ ನೀಡಲಾಗಿದೆ. ಲಸಿಕೆ ಹಾಕುವ ಅಭಿಯಾನಕ್ಕೆ ಚಾಲನೆ ನೀಡಿದ್ದು ಇನ್ನೂ ಎರಡು ಸುತ್ತಿನ ಪ್ರಕ್ರಿಯೆ ಬಾಕಿಯಿರುವುದರಿಂದ ಇನ್ನಷ್ಟು ಲಸಿಕೆ, ಸಿರಿಂಜ್ ಗಳ ತುರ್ತು ಅಗತ್ಯವಿದೆ.

ಅಕ್ಟೋಬರ್ 10ರಂದು ಜಾರಿಗೆ ಬಂದಿರುವ ಕದನ ವಿರಾಮ ಒಪ್ಪಂದವು ಗಾಜಾ ಪ್ರದೇಶದಾದ್ಯಂತ ಹೆಚ್ಚಿನ ಪ್ರಮಾಣದಲ್ಲಿ ನೆರವು ಪೂರೈಸುವ ಅಂಶವನ್ನು ಒಳಗೊಂಡಿದೆ. ಆದರೆ ಸ್ಥಳಾಂತರಗೊಂಡಿರುವ ಮತ್ತು ಅಪೌಷ್ಠಿಕತೆಯಿಂದ ಬಳಲುತ್ತಿರುವ ಸುಮಾರು 2 ದಶಲಕ್ಷ ಜನರಿಗೆ ಅಗತ್ಯವಿರುವ ನೆರವು ಸಾಕಷ್ಟು ಪ್ರಮಾಣದಲ್ಲಿ ಪೂರೈಕೆಯಾಗುತ್ತಿಲ್ಲ ಎಂದು ನೆರವು ಪೂರೈಸುವ ಸಂಸ್ಥೆಗಳು ಕಳವಳ ವ್ಯಕ್ತಪಡಿಸಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...