ಕದನ ವಿರಾಮ ಉಲ್ಲಂಘಿಸಿ ಗಾಜಾ ಮೇಲೆ ಇಸ್ರೇಲ್ ವ್ಯಾಪಕ ದಾಳಿ: ಕನಿಷ್ಠ 200 ಸಾವು

Date:

ಕೇಂದ್ರೀಯ ಗಾಜಾ ಮೇಲೆ ಮಂಗಳವಾರ ನಸುಕಿನಲ್ಲಿ ಇಸ್ರೇಲ್ ನಡೆಸಿದ ವಾಯು ದಾಳಿಯಲ್ಲಿ 200ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ದಾಳಿಯ ಮೂಲಕ ಇಸ್ರೇಲ್‌ ಕದನ ವಿರಾಮವನ್ನು ಉಲ್ಲಂಘಿಸಿದೆ.

ಸಿರಿಯಾ ಮತ್ತು ಲೆಬನಾನ್ ಮೇಲೆ ಕೂಡಾ ದಾಳಿ ನಡೆದಿರುವುದನ್ನು ಸ್ಥಳೀಯ ಅಧಿಕಾರಿಗಳು ದೃಢಪಡಿಸಿದ್ದು, ಈ ಪ್ರದೇಶಗಳಲ್ಲಿಯೂ ವ್ಯಾಪಕ ಸಾವುನೋವುಗಳು ಉಂಟಾಗಿದೆ.

“ಗಾಜಾಪಟ್ಟಿಯ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 200ಕ್ಕೂ ಹೆಚ್ಚಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ” ಎಂದು ಏಜೆನ್ಸಿ ವಕ್ತಾರ ಮೊಹ್ಮದ್ ಬಸಾಲ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮ್ಮ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಹಮಾಸ್ ಪದೇ ಪದೇ ನಿರಾಕರಿಸಿರುವ ಹಿನ್ನೆಲೆಯಲ್ಲಿ ದಾಳಿ ಮಾಡಲಾಗಿದೆ” ಎಂದು ಇಸ್ರೇಲ್ ಸಮರ್ಥಿಸಿಕೊಂಡಿದೆ. ದಾಳಿಯ ಹಿನ್ನೆಲೆಯಲ್ಲಿ ಗಾಜಾಪಟ್ಟಿ ಪ್ರದೇಶದಲ್ಲಿ ಎಲ್ಲ ಶಾಲಾ ಕಾಲೇಜುಗಳನ್ನು ಮುಚ್ಚಲಾಗಿದೆ.

ಸಿರಿಯಾ ಮತ್ತು ಲೆಬನಾನ್‍ನ ವಸತಿ ಪ್ರದೇಶಗಳ ಮೇಲೂ ದಾಳಿ ನಡೆದಿದ್ದು, ದಾರಾ ಪ್ರದೇಶದಲ್ಲಿ ಮೂರು ಮಂದಿ ಮೃತಪಟ್ಟು ನಾಲ್ವರು ಮಕ್ಕಳು, ಮಹಿಳೆ, ರಕ್ಷಣಾ ಕಾರ್ಯಕರ್ತರು ಸೇರಿದಂತೆ 19 ಮಂದಿ ಗಾಯಗೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮುಸ್ಲಿಮರಿಗೆ ಗುತ್ತಿಗೆಯಲ್ಲಿ ಮೀಸಲಾತಿ; ಬಿಜೆಪಿ ವಿರೋಧವೇ ಅಸಾಂವಿಧಾನಿಕ

ಗಾಜಾದಲ್ಲಿ ಇನ್ನೂ ಬಂಧಿಸಲ್ಪಟ್ಟಿರುವ ಉಳಿದ 59 ಒತ್ತೆಯಾಳುಗಳ ಭವಿಷ್ಯದ ಕುರಿತು ಇಸ್ರೇಲ್ ಮತ್ತು ಹಮಾಸ್ ಸಂಘಟನೆಯ ನಡುವೆ ಹಲವು ದಿನಗಳ ಕಾಲ ನಡೆದ ಮಾತುಕತೆ ವಿಫಲವಾದ ನಂತರ ಈ ದಾಳಿಗಳು ನಡೆದಿವೆ. ಅಮೆರಿಕದ ಬೆಂಬಲದೊಂದಿಗೆ ಈಜಿಪ್ಟ್ ಮತ್ತು ಕತಾರ್ ನೇತೃತ್ವದ ಮಧ್ಯಸ್ಥಿಕೆ ಸಭೆಯ ಪ್ರಯತ್ನಗಳ ಹೊರತಾಗಿಯೂ ಹಮಾಸ್ ಸಂಘಟನೆ “ನಮ್ಮ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಪದೇ ಪದೇ ನಿರಾಕರಿಸುತ್ತಿದೆ” ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕಚೇರಿ ಆರೋಪಿಸಿದೆ.

ಇದಕ್ಕೆ ಹಮಾಸ್ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿದ್ದು, ಇಸ್ರೇಲ್ ಏಕಪಕ್ಷೀಯವಾಗಿ ಕದನ ವಿರಾಮವನ್ನು ರದ್ದುಗೊಳಿಸಿದ್ದಕ್ಕಾಗಿ ಆಕ್ರೋಶ ವ್ಯಕ್ತಪಡಿಸಿದ್ದು, ಪರಿಸ್ಥಿತಿ ಮತ್ತಷ್ಟು ನಿಯಂತ್ರಣ ತಪ್ಪಬಹುದು ಎಂದು ಎಚ್ಚರಿಸಿದ್ದಾರೆ.

ಜನವರಿ 19 ರಂದು ನಡೆದ ಮಧ್ಯಸ್ಥಿಕೆ ಸಭೆಯ ಒಪ್ಪಂದವು, ಸುಮಾರು 2,000 ಪ್ಯಾಲೇಸ್ತೀನ್‌ ಕೈದಿಗಳನ್ನು ವಿನಿಮಯ ಮಾಡಿಕೊಳ್ಳುವ ಸಲುವಾಗಿ 33 ಇಸ್ರೇಲಿ ಮತ್ತು ಐದು ಥಾಯ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲಾಗಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...