ಗಾಝಾ ಮೇಲೆ ಇಸ್ರೇಲ್ ದಾಳಿ: 50 ಸಾವಿರ ಗರ್ಭಿಣಿಯರ ವೈದ್ಯಕೀಯ ಆರೈಕೆಯ ಲಭ್ಯತೆ ಬಗ್ಗೆ ವಿಶ್ವಸಂಸ್ಥೆ ಕಳವಳ

Date:

ಗಾಝಾದಲ್ಲಿ ಇಸ್ರೇಲ್‌ ದಾಳಿಯಿಂದ ಯುದ್ಧದ ಕಾನೂನುಗಳು ಮತ್ತು ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಕಾನೂನಿನ ದೈನಂದಿನ ಉಲ್ಲಂಘನೆಯಾಗುತ್ತಿರುವ ಬಗ್ಗೆ ವಿಶ್ವಸಂಸ್ಥೆ ಮಾನವ ಹಕ್ಕುಗಳ ಆಯೋಗ ಆತಂಕ ವ್ಯಕ್ತಪಡಿಸಿದೆ.

ಇಸ್ರೇಲ್ – ಹಮಾಸ್ ಯುದ್ಧ ಆರಂಭಗೊಂಡು ಹತ್ತು ದಿನದಲ್ಲಿ ಎರಡೂ ಕಡೆಯಿಂದ 4,200 ಮಂದಿ ಸಾವನ್ನಪ್ಪಿದ್ದು, ಹತ್ತು ಲಕ್ಷಕ್ಕೂ ಹೆಚ್ಚು ಮಂದಿ ಸ್ಥಳಾಂತರಗೊಂಡಿದ್ದಾರೆ. ಗಾಜಾ ಪಟ್ಟಿಯ ಹಲವು ಪ್ರದೇಶಗಳು ನಾಶವಾಗಿ ಸ್ಮಶಾನ ಮೌನ ಆವರಿಸಿದ್ದು, ಮುಂಬರುವ ದಿನಗಳಲ್ಲಿ ನಾಗರಿಕರ ಮೇಲೆ ಗಂಭೀರವಾದ ಅಪಾಯವಿದೆ ಎಂದು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈಕಮಿಷನರ್ ಆಘಾತ ವ್ಯಕ್ತಪಡಿಸಿದ್ದಾರೆ.

ಸಾವಿಗೀಡಾದವರಲ್ಲಿ ಮಹಿಳೆಯರು ಮತ್ತು ಮಕ್ಕಳು ಹೆಚ್ಚಿದ್ದಾರೆ. ಕನಿಷ್ಠ 11 ಪ್ಯಾಲೆಸ್ತೀನ್  ಪತ್ರಕರ್ತರು, 28 ವೈದ್ಯಕೀಯ ಸಿಬ್ಬಂದಿ ಮತ್ತು 14 ವಿಶ್ವಸಂಸ್ಥೆ ಸಿಬ್ಬಂದಿ ಸೇರಿದ್ದಾರೆ. ಅವಶೇಷಗಳಡಿಯಲ್ಲಿ ಇನ್ನೂ ಎಷ್ಟು ಶವಗಳಿರಬಹುದು ಎಂಬುದು ಸ್ಪಷ್ಟವಾಗಿಲ್ಲ. ಅನೇಕ ಕುಟುಂಬಗಳು ಪ್ರೀತಿಪಾತ್ರರನ್ನು ಕಳೆದುಕೊಂಡಿವೆ. ಅವರು ಮುಂದಿನ ಭವಿಷ್ಯದ ಬಗ್ಗೆ ಭಯಭೀತರಾಗಿದ್ದಾರೆ ಎಂದು ವಿಶ್ವಸಂಸ್ಥೆ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ ಮಿಲಿಟರಿ ಕಾರ್ಯಾಚರಣೆಗಳು ಕಡಿಮೆಯಾಗುವ ಲಕ್ಷಣಗಳು ತೋರುತ್ತಿಲ್ಲ. ಗಾಝಾದ ಮೇಲಿನ ದಾಳಿಯಿಂದ ನೀರು ಸರಬರಾಜು, ಆಹಾರ, ಔಷಧ ಮತ್ತು ಇತರ ಮೂಲಭೂತ ಅಗತ್ಯಗಳ ಮೇಲೆ ಪರಿಣಾಮ ಬೀರುತ್ತಿದೆ. ಹಲವಾರು ಆರೋಗ್ಯ ಸೇವೆಗಳ ಘಟಕಗಳು ಬಾಂಬ್ ದಾಳಿಯಿಂದ ಹಾನಿಗೊಳಗಾಗಿವೆ. ಆರೋಗ್ಯ ಸೇವಾ ಘಟಕಗಳು ಬಾಂಬ್‌ ದಾಳಿಯಿಂದ ಹಾನಿಗೊಳಗಾಗಿರುವ ಕಾರಣದಿಂದ ಮುಂದಿನ ದಿನಗಳಲ್ಲಿ ವೈದ್ಯಕೀಯ ಆರೈಕೆಯ ಲಭ್ಯತೆಯ ಬಗ್ಗೆ ಗಂಭೀರ ಆತಂಕವುಂಟಾಗಿದೆ.

ಈ ಸುದ್ದಿ ಓದಿದ್ದೀರಾ? ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಒಬ್ಬ ರಾಕ್ಷಸ, ಕ್ರೂರಿ: ಅಸಾದುದ್ದೀನ್ ಓವೈಸಿ ಕಿಡಿ

ಯುದ್ಧದಲ್ಲಿ ಸಾವಿರಾರು ಜನರು ಗಾಯಗೊಂಡಿದ್ದಾರೆ. ಅಂದಾಜು 50,000 ಗರ್ಭಿಣಿ ಮಹಿಳೆಯರಿಗೆ, ಹಾಗೆಯೇ ದೀರ್ಘಕಾಲದ ದೈಹಿಕ ಮತ್ತು ಮಾನಸಿಕ ಆರೋಗ್ಯ ಸಮಸ್ಯೆಗಳಿರುವ ಜನರಿಗೆ ವೈದ್ಯಕೀಯ ಆರೈಕೆಯ ಲಭ್ಯತೆಯ ಕೊರತೆ ಎದುರಾಗಿದೆ. ಯುದ್ಧದ ಹಗೆತನದಿಂದ ಗಾಝಾದಲ್ಲಿ ವೈದ್ಯಕೀಯ ಹಾಗೂ ಮೂಲಸೌಕರ್ಯಗಳ ಮೇಲೆ ದಿಗ್ಬಂಧನ ವಿಧಿಸಿರುವ ಪರಿಣಾಮವಾಗಿ ಆರೋಗ್ಯ ಹಕ್ಕಿನ ಸೇವೆಗಳ ಕೊರತೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಹೆಚ್ಚಿದೆ. ವೈದ್ಯಕೀಯ ಸೌಲಭ್ಯಗಳು, ವೈದ್ಯಕೀಯ ಸಿಬ್ಬಂದಿ, ಗಾಯಗೊಂಡವರು ಮತ್ತು ರೋಗಿಗಳ ವಿರುದ್ಧದ ದಾಳಿಯನ್ನು ಅಂತಾರಾಷ್ಟ್ರೀಯ ಮಾನವೀಯ ಕಾನೂನಿನ ಅಡಿಯಲ್ಲಿ ನಿಷೇಧಿಸಲಾಗಿದೆ ಎಂದು ವಿಶ್ವಸಂಸ್ಥೆ ಹೇಳಿದೆ.

ಅಮಾಯಕ ನಾಗರಿಕರ ಹತ್ಯೆ ತನಿಖೆಯಾಗಬೇಕು

ದಕ್ಷಿಣ ಗಾಜಾಕ್ಕೆ ಸ್ಥಳಾಂತರಿಸಲು ಪ್ರಯತ್ನಿಸುತ್ತಿರುವ ಪ್ಯಾಲೆಸ್ತೀನ್ ನಾಗರಿಕರು ಬಾಂಬ್‌ ಸ್ಫೋಟದಿಂದ ಕೊಲ್ಲಲ್ಪಟ್ಟರು ಎಂಬ ಆತಂಕ ಮೂಡಿಸುವ ವರದಿಗಳನ್ನು ಸ್ವತಂತ್ರವಾಗಿ ಮತ್ತು ಸಂಪೂರ್ಣವಾಗಿ ತನಿಖೆ ಮಾಡಬೇಕು. ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಗಂಭೀರ ಉಲ್ಲಂಘನೆಗಳ ಎಲ್ಲ ಆರೋಪಗಳನ್ನು ತನಿಖೆ ಮಾಡಬೇಕು ಎಂದು ವಿಶ್ವಸಂಸ್ಥೆ ತಿಳಿಸಿದೆ.

“ನಾಗರಿಕರನ್ನು ಗುರಿಯಾಗಿಸುವುದು ಅಥವಾ ಅವರ ಪ್ರದೇಶದ ಮೇಲೆ ಬಾಂಬ್ ಸ್ಫೋಟಗಳು, ವಿವೇಚನಾರಹಿತ ಅಥವಾ ಅಸಮಂಜಸವಾದ ದಾಳಿಗಳನ್ನು ನಡೆಸುವುದನ್ನು ತಪ್ಪಿಸಲು ನಾವು ಇಸ್ರೇಲಿ ಪಡೆಗಳನ್ನು ಒತ್ತಾಯಿಸುತ್ತೇವೆ. ಯಾವುದೇ ಸಂದರ್ಭದಲ್ಲಿ ನಾಗರಿಕರ ಪ್ರಾಣಹಾನಿ, ನಾಗರಿಕರಿಗೆ ಗಾಯ ಮತ್ತು ನಾಗರಿಕ ವಸ್ತುಗಳಿಗೆ ಹಾನಿಯಾಗದಂತೆ ತಡೆಯಲು ಹಾಗೂ ಕಡಿಮೆ ಮಾಡಲು ನಾವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುತ್ತೇವೆ” ಎಂದು ವಿಶ್ವಸಂಸ್ಥೆ ಪ್ರಕಟಣೆ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಜಾಗತಿಕ ಹಸಿವು ಸೂಚ್ಯಂಕ | ಹಸಿದವರ ದೇಶವಾದ ಭಾರತ; ಪಾಕಿಸ್ತಾನಕ್ಕಿಂತ ಕೆಳಕ್ಕೆ ಕುಸಿತ

ಇಲ್ಲಿಯವರೆಗೆ ತಮ್ಮ ಸ್ವಂತ ಸೂರುಗಳಿಂದ ನಿರಾಶ್ರಿತರಾದ ಸುಮಾರು 4 ಲಕ್ಷ ಮಂದಿ ವಿವಿಧ ಸ್ಥಳಗಳಲ್ಲಿ ಆಶ್ರಯ ಪಡೆದಿದ್ದಾರೆ. ಇವರಲ್ಲಿ ಹಲವರು ವಿಶ್ವಸಂಸ್ಥೆಯ ನಿರಾಶ್ರಿತ ಶಿಬಿರಗಳಲ್ಲಿದ್ದಾರೆ. ಇಸ್ರೇಲ್ ಆಡಳಿತವು ಜನರ ಸುರಕ್ಷತೆ ಅಥವಾ ಕಡ್ಡಾಯ ಮಿಲಿಟರಿ ಕಾರಣಗಳ ಆಧಾರದ ಮೇಲೆ ಆಕ್ರಮಣಕ್ಕೀಡಾದ ಪ್ರದೇಶಗಳ ಜನರನ್ನು ಕಾನೂನುಬದ್ಧವಾಗಿ ಸುರಕ್ಷಿತ ಸ್ಥಳಗಳಲ್ಲಿ ನೆಲೆ ಹಾಗೂ ಮೂಲ ಸೌಕರ್ಯ ಕಲ್ಪಿಸಬೇಕೆಂದು ಅಂತಾರಾಷ್ಟ್ರೀಯ ಕಾನೂನು ಬಯಸುತ್ತದೆ. ಆದರೆ ನಿರಾಶ್ರಿರಗೊಂಡ 10 ಲಕ್ಷ ಜನರಿಗೆ ಇಸ್ರೇಲ್ ಈ ರೀತಿಯ ಯಾವುದೇ ಸೌಲಭ್ಯ ಕಲ್ಪಿಸಿಲ್ಲ. ಮಾನವ ಹಕ್ಕುಗಳ ಎಲ್ಲ ಕಾನೂನುಗಳನ್ನು ಇಸ್ರೇಲ್ ಉಲ್ಲಂಘಿಸಿದೆ ಎಂದು  ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ನೆರವು ವಿತರಣೆಯನ್ನು ಸಕ್ರಿಯಗೊಳಿಸಲು ಮತ್ತು ಗಾಜಾದಲ್ಲಿ ಈಗಾಗಲೇ ಹೆಚ್ಚು ತೊಂದರೆಗೀಡಾದ ನಾಗರಿಕರಿಗೆ ಮತ್ತಷ್ಟು ನೋವು ಮತ್ತು ಸಾವುಗಳನ್ನು ತಡೆಗಟ್ಟಿ ಯುದ್ಧ ವಿರಾಮ ಘೋಷಿಸಬೇಕೆಂದು ವಿಶ್ವಸಂಸ್ಥೆ ಕರೆ ನೀಡುತ್ತದೆ.

ಇದಲ್ಲದೆ ಸುಮಾರು 199 ಇಸ್ರೇಲಿ ಪ್ರಜೆಗಳನ್ನು ಗಾಝಾದಲ್ಲಿ ಹಮಾಸ್ ಹೋರಾಟಗಾರರು ಒತ್ತೆಯಾಳುಗಳಾಗಿ ಇರಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ನಾವು ಮತ್ತೊಮ್ಮೆ ಹಮಾಸ್ ಹೋರಾಟಗಾರರಿಗೆ ತಕ್ಷಣವೇ ಬೇಷರತ್ತಾಗಿ ಎಲ್ಲ ನಾಗರಿಕ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಮತ್ತು ಇಸ್ರೇಲ್ ವಿರುದ್ಧ ವಿವೇಚನಾರಹಿತ ಸ್ಪೋಟಕಗಳ ಬಳಕೆಯನ್ನು ನಿಲ್ಲಿಸುವಂತೆ ಒತ್ತಾಯಿಸುತ್ತೇವೆ ಎಂದು ತಿಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...