ರಾಯಚೂರು ಜಿಲ್ಲೆಯ ಸಿಂಧನೂರಿನ ಸಹನಾ ಆಸ್ಪತ್ರೆಯ ಮಕ್ಕಳ ತಜ್ಞ ಡಾ. ಕೆ ಶಿವರಾಜ ಹಾಗೂ ಅವರ ಪತ್ನಿ ಜ್ಯೋತಿಯವರು ಇರಾನ್ ಹಾಗೂ ಇಸ್ರೇಲ್ ನಡುವೆ ಉದ್ಭವಿಸಿರುವ ಯುದ್ಧ ಪರಿಸ್ಥಿತಿಯ ಪರಿಣಾಮವಾಗಿ ದುಬೈನಲ್ಲಿ ಸಿಲುಕಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
‘ವಿಜಯರತ್ನ ಇಂಟರ್ ನ್ಯಾಷನಲ್ ಅವಾರ್ಡ್’ ಪ್ರಶಸ್ತಿ ಸ್ವೀಕರಿಸುವ ಉದ್ದೇಶದಿಂದ ಅವರು ಫೆಬ್ರವರಿ 24ರಂದು ಬಳ್ಳಾರಿಯಿಂದ ದುಬೈಗೆ ಪ್ರಯಾಣಿಸಿದ್ದರು. ಫೆಬ್ರವರಿ 28ರಂದು ಭಾರತಕ್ಕೆ ಮರಳಬೇಕಾಗಿತ್ತು. ಆದರೆ ಇಸ್ರೇಲ್-ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ದಾಳಿ ನಡೆಸಿರುವ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ವಿಮಾನ ಸೇವೆಗಳು ಅಸ್ತವ್ಯಸ್ತಗೊಂಡಿವೆ.
ಈ ಸುದ್ದಿ ಓದಿದ್ದೀರಾ? ಇರಾನ್ನ ಅಯತೊಲ್ಲಾ ಅಲಿ ಖಮೇನಿ ಹತ್ಯೆ; ಚಿಕ್ಕಬಳ್ಳಾಪುರದ ಗ್ರಾಮದಲ್ಲಿ 3 ದಿನಗಳ ಶೋಕಾಚರಣೆ
ಹಾಗಾಗಿ ದುಬೈಗೆ ಪ್ರವಾಸಕ್ಕೆ ತೆರಳಿದ್ದ ರಾಜ್ಯದ ವೈದ್ಯ ದಂಪತಿ ಭಾರತಕ್ಕೆ ವಾಪಸ್ಸಾಗಲು ಸಾಧ್ಯವಾಗಿಲ್ಲ ಎನ್ನಲಾಗಿದೆ.





