‘ಭಾರತ-ಪಾಕ್ ಯುದ್ಧ ತಡೆದಿದ್ದು ನಾನೇ’: ಗಾಜಾ ಹಂತಕನ ಜೊತೆ ಟ್ರಂಪ್ ಹಳೆಯ ರಾಗ

Date:

ಅಮೆರಿಕದ ಫ್ಲೋರಿಡಾದಲ್ಲಿ ನಡೆದ ಇಬ್ಬರು ವಿವಾದಾತ್ಮಕ ನಾಯಕರ ಈ ಸಮಾಗಮದಲ್ಲಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ತಮ್ಮ ಹಳೆಯ ರಾಗ ಹಾಡಿದ್ದಾರೆ.

“ನಾನಿಲ್ಲದಿದ್ದರೆ ಜಗತ್ತು ಸರ್ವನಾಶವಾಗುತ್ತಿತ್ತು,” ಎಂದು ಬಡಾಯಿ ಕೊಚ್ಚಿಕೊಂಡಿರುವ ಟ್ರಂಪ್, “ನನ್ನ ಮಧ್ಯಸ್ಥಿಕೆಯಿಂದಲೇ ಭಾರತ ಮತ್ತು ಪಾಕಿಸ್ತಾನದ ನಡುವಿನ ಭೀಕರ ಅಣುಯುದ್ಧ ತಪ್ಪಿತು. ಇಲ್ಲದಿದ್ದರೆ ಲಕ್ಷಾಂತರ ಜನ ಸಾಯುತ್ತಿದ್ದರು,” ಎಂದು ಹೇಳಿದ್ದಾರೆ.

ಈ ಭೇಟಿಯು ಕೇವಲ ಟ್ರಂಪ್ ಅವರ ಬಡಾಯಿಗೆ ಸೀಮಿತವಾಗಿರಲಿಲ್ಲ. ಗಾಜಾದಲ್ಲಿ ಸಾವಿರಾರು ಅಮಾಯಕ ಮಕ್ಕಳ ಸಾವಿಗೆ ಕಾರಣರಾಗಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ‘ಯುದ್ಧಾಪರಾಧಿ’ ಎಂಬ ಹಣೆಪಟ್ಟಿ ಹೊತ್ತಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಿಗೆ ಟ್ರಂಪ್ ಕೆಂಪು ಹಾಸಿನ ಸ್ವಾಗತ ಕೋರಿದ್ದು ಪ್ರಜಾಪ್ರಭುತ್ವವಾದಿಗಳಿಗೆ ಆಘಾತ ತಂದಿದೆ. ಜಗತ್ತೇ ಛೀಮಾರಿ ಹಾಕುತ್ತಿರುವ ನಾಯಕನನ್ನು ಟ್ರಂಪ್ ಅಪ್ಪಿಕೊಂಡು, “ಇಸ್ರೇಲ್ ಉಳಿದಿದ್ದೇ ಇವರಿಂದ” ಎಂದು ಹೊಗಳಿದ್ದು ವಿಪರ್ಯಾಸವೇ ಸರಿ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಇನ್ನಾದರೂ ಪ್ರೀತಿ ಬಿತ್ತೋಣ, ಮಾನವೀಯತೆ ಮೆರೆಯೋಣ…

ಗಾಜಾದಲ್ಲಿ ರಕ್ತದೋಕುಳಿ ಹರಿಸುತ್ತಿರುವ ನೆತನ್ಯಾಹು, ತಮ್ಮ ಅಧಿಕಾರ ಉಳಿಸಿಕೊಳ್ಳಲು ಟ್ರಂಪ್ ಅವರಂತಹ ‘ಅಹಂಕಾರದ ಮೂರ್ತಿ’ಯ ಮೊರೆ ಹೋಗಿದ್ದಾರೆ. ಇತ್ತ ಟ್ರಂಪ್, ಇರಾನ್ ಮೇಲೆ ಯುದ್ಧದ ಭೀತಿ ಹುಟ್ಟುಹಾಕುವ ಮೂಲಕ ಮತ್ತೊಂದು ಸಂಘರ್ಷಕ್ಕೆ ನಾಂದಿ ಹಾಡಲು ಪ್ರಚೋದಿಸುತ್ತಿದ್ದಾರೆ. ಶಾಂತಿಯ ಬಗ್ಗೆ ಮಾತನಾಡಬೇಕಾದ ನಾಯಕರು, ಕೇವಲ ತಮ್ಮ ವೈಯಕ್ತಿಕ ವರ್ಚಸ್ಸು ಮತ್ತು ಅಧಿಕಾರದ ದಾಹಕ್ಕಾಗಿ ಜಾಗತಿಕ ಭದ್ರತೆಯನ್ನೇ ಪಣಕ್ಕಿಡುತ್ತಿದ್ದಾರೆ ಎಂಬ ಆತಂಕ ವ್ಯಕ್ತವಾಗಿದೆ.

“ಭಾರತ-ಪಾಕ್ ಯುದ್ಧ ನಿಲ್ಲಿಸಿದೆ” ಎಂಬ ಟ್ರಂಪ್ ಅವರ ಬಾಲಿಶ ಹೇಳಿಕೆ ಮತ್ತು ನೆತನ್ಯಾಹು ಅವರೊಂದಿಗಿನ ಈ ಸ್ನೇಹ, ಜಗತ್ತನ್ನು ಶಾಂತಿಯ ಕಡೆಗಲ್ಲ, ಬದಲಿಗೆ ಮತ್ತಷ್ಟು ಅರಾಜಕತೆಯತ್ತ ತಳ್ಳುವ ಲಕ್ಷಣಗಳು ಸ್ಪಷ್ಟವಾಗಿ ಗೋಚರಿಸುತ್ತಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...