ಅಮೆರಿಕ ದಾಳಿ ಮಾಡಿದರೆ ಪರಮಾಣು ಅಸ್ತ್ರ ಬಳಕೆ: ಇರಾನ್‌ ಎಚ್ಚರಿಕೆ

Date:

ಅಮೆರಿಕ ಅಥವಾ ಅಮೆರಿಕ ಬೆಂಬಲಿತ ರಾಷ್ಟ್ರಗಳು ನಮ್ಮ ಮೇಲೆ ದಾಳಿ ಮಾಡಿದರೆ, ನಮ್ಮ ರಕ್ಷಣೆಗೆ ಪರಮಾಣು ಅಸ್ತ್ರಗಳನ್ನು ಬಳಸದೆ ಬೇರೆ ದಾರಿಯಿಲ್ಲ ಎಂದು ಇರಾನ್‌ನ ಪರಮೋಚ್ಛ ನಾಯಕ ಆಯತ್ತೊಲ್ಲಾ ಅಲಿ ಖಮೇನಿ ಅವರ ಸಲಹೆಗಾರರು ತಿಳಿಸಿದ್ದಾರೆ.

ಇರಾನ್ ತನ್ನ ಪರಮಾಣು ಕಾರ್ಯಕ್ರಮದ ಕುರಿತು ವಾಷಿಂಗ್ಟನ್‌ನೊಂದಿಗೆ ಒಪ್ಪಂದಕ್ಕೆ ಬರದಿದ್ದರೆ ಬಾಂಬ್ ದಾಳಿ ಮತ್ತು ಎರಡು ಪಟ್ಟು ಸುಂಕಗಳನ್ನು ವಿಧಿಸುವುದಾಗಿ ಟ್ರಂಪ್‌ ಬೆದರಿಕೆ ಹಾಕಿದ ನಂತರ ಖಮೇನಿ ಅವರು ಕೂಡ ತಾವು ದಾಳಿ ನಡೆಸುವುದಾಗಿ ಹೇಳಿದ್ದರು.

“ನಾವು ಪರಮಾಣು ಅಸ್ತ್ರಗಳನ್ನು ಮೊದಲು ಬಳಸುವುದಿಲ್ಲ, ಆದರೆ ನೀವು ಇರಾನ್‌ನ ಪರಮಾಣು ವಿಷಯದಲ್ಲಿ ತಪ್ಪು ನಿರ್ಧಾರ ಕೈಗೊಂಡರೆ, ಇಲ್ಲವೆ ಇರಾನ್‌ ಮೇಲೆ ದಾಳಿ ನಡೆಸಿದರೆ ನಾವು ನಮ್ಮ ರಕ್ಷಣೆಯನ್ನು ಮಾಡಿಕೊಳ್ಳುತ್ತೇವೆ. ಇರಾನ್‌ಗೆ ಈ ರೀತಿ ಮುಂದಾಗುವುದು ಬೇಕಾಗಿಲ್ಲ, ಆದರೆ ಬೇರೆ ಆಯ್ಕೆಗಳಿಲ್ಲ. ನೀವು ಅಥವಾ ಇಸ್ರೇಲ್‌ ಮೂಲಕ ನಮ್ಮ ಮೇಲೆ ಬಾಂಬ್‌ ದಾಳಿ ಮಾಡಿದರೆ ಇರಾನ್‌ ನಿಮ್ಮ ಮೇಲೆ ಬೇರೆಯದೆ ನಿರ್ಧಾರ ಕೈಗೊಳ್ಳುತ್ತದೆ” ಎಂದು ಸುದ್ದಿ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಆಯತ್ತೊಲ್ಲಾ ಅಲಿ ಖಮೇನಿ ಅವರ ಸಲಹೆಗಾರರಾದ ಲರಿಜಾನಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕೆನಡಾ ಸಂಸದ ಕನ್ನಡಿಗ ಚಂದ್ರ ಆರ್ಯಗೆ ಚುನಾವಣೆಗೆ ಸ್ಪರ್ಧಿಸದಂತೆ ನಿಷೇಧ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ ಬಾಂಬ್ ಬೆದರಿಕೆಗೆ ಮಣಿಯಲು ಇರಾನ್ ನಿರಾಕರಿಸಿದ್ದು, ಅಗತ್ಯವಿದ್ದರೆ ಅಮೆರಿಕ ಸಂಬಂಧಿತ ಸ್ಥಳಗಳಲ್ಲಿ ದಾಳಿ ಮಾಡಲು ತನ್ನ ಭೂಗತ ಕ್ಷಿಪಣಿ ಶಸ್ತ್ರಾಗಾರವನ್ನು ಸಿದ್ಧಪಡಿಸುತ್ತಿದೆ ಎಂದು ಇರಾನ್‌ ಪರಮೋಚ್ಛ ನಾಯಕ ತಿಳಿಸಿದ್ದರು.

ಟ್ರಂಪ್ ಅವರ ಬೆದರಿಕೆಯ ನಂತರ, ಇರಾನ್ ತನ್ನ ಕ್ಷಿಪಣಿಗಳನ್ನು ದೇಶಾದ್ಯಂತವಿರುವ ತನ್ನ ಭೂಗತ ಸ್ಥಳಗಳಲ್ಲಿ ಉಡಾವಣೆಗೆ ಸಿದ್ಧವಾದ ಸ್ಥಿತಿಯಲ್ಲಿ ಇರಿಸಿದೆ. ಇವು ವೈಮಾನಿಕ ದಾಳಿಗಳನ್ನು ತಡೆದುಕೊಳ್ಳುವಂತೆ ವಿನ್ಯಾಸಗೊಳಿಸಲಾಗಿದೆ ಎಂದು ಇರಾನ್‌ ರಾಜಕೀಯ ನಾಯಕರು ತಿಳಿಸಿದ್ದರು.

ಇಸ್ಲಾಮಿಕ್ ಗಣರಾಜ್ಯವು ತನ್ನ ಯುರೇನಿಯಂ ಪುಷ್ಟೀಕರಣ ಕಾರ್ಯಕ್ರಮವನ್ನು ಹೆಚ್ಚಿಸುವಲ್ಲಿ ನಿರತವಾಗಿದೆ. ಒಪ್ಪಂದ ಮಾಡಿಕೊಳ್ಳಿ, ಇಲ್ಲವೇ ಮಿಲಿಟರಿ ಪರಿಣಾಮಗಳನ್ನು ಎದುರಿಸಿ ಎಂಬ ಟ್ರಂಪ್ ಎಚ್ಚರಿಕೆಯನ್ನು ನಿರ್ಲಕ್ಷಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...