ಇರಾನ್‌ನ ಸರ್ವೋಚ್ಚ ನಾಯಕನಾಗಿ ಖಮೇನಿ ಪುತ್ರ ಮೊಜ್ತಬಾ ನೇಮಕ

Date:

ಇರಾನ್‌ನ ಸರ್ವೋಚ್ಚ ನಾಯಕನಾಗಿ ಅಯತುಲ್ಲಾ ಅಲಿ ಖಮೇನಿ ಅವರ ಪುತ್ರ ಮೊಜ್ತಬಾ ಖಮೇನಿ ಅವರನ್ನು ನೇಮಕ ಮಾಡಲಾಗಿದೆ. ಇರಾನ್‌ನ ತಜ್ಞರ ಸಭೆಯು ಮೊಜ್ತಬಾ ಅವರನ್ನು ಉತ್ತರಾಧಿಕಾರಿಯಾಗಿ ಆಯ್ಕೆ ಮಾಡಿದೆ ಎಂದು ವರದಿಯಾಗಿದೆ.

‘ಇರಾನ್ ಇಂಟರ್‌ನ್ಯಾಷನಲ್’ ವರದಿ ಪ್ರಕಾರ, ಇರಾನ್‌ ಪಡೆ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್‌ (ಐಆರ್‌ಜಿಸಿ) ಒತ್ತಡದ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ.

ಶನಿವಾರ, ಇರಾನ್‌ ಮೇಲೆ ಅಮೆರಿಕ-ಇಸ್ರೇಲ್ ಜಂಟಿ ದಾಳಿ ಆರಂಭಿಸಿ, ಭಾನುವಾರ ಪರಮೋಚ್ಛ ನಾಯಕ ಅಲಿ ಖಮೇನಿ ಅವರನ್ನು ಹತ್ಯೆಗೈದಿವೆ. ಈ ಬಳಿಕ, ಇರಾನ್‌ನ ಸರ್ವೋಚ್ಛ ನಾಯಕನಾಗಿ ಯಾರು ಆಯ್ಕೆಯಾಗಲಿದ್ದಾರೆ. ಇರಾನ್‌ಅನ್ನು ಯಾರು ಮುನ್ನಡೆಸಲಿದ್ದಾರೆ ಎಂಬ ಚರ್ಚೆಗಳು ನಡೆಯುತ್ತಿದ್ದವು. ಇದೀಗ, ಅಲಿ ಖಮೇನಿ ಅವರ ಎರಡನೇ ಮಗ, 56 ವರ್ಷದ ಮೊಜ್ತಬಾ ಅವರನ್ನು ಇರಾನ್‌ ನಾಯಕನಾಗಿ ಆಯ್ಕೆ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೊಜ್ತಬಾ ಖಮೇನಿ ಅವರು ಹಲವು ವರ್ಷಗಳಿಂದ ಅಲಿ ಖಮೇನಿ ಅವರೊಂದಿಗೆ ತೆರೆಮರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಆದಾಗ್ಯೂ, ಅವರು ಇರಾನ್‌ನಲ್ಲಿ ತಮ್ಮ ಪ್ರಭಾವ ಬೆಳೆಸಿಕೊಂಡಿದ್ದರು. ಐಆರ್‌ಜಿಸಿ ಹಾಗೂ ಬಸಿಜ್ ಅರೆಸೈನಿಕ ಜಾಲಗಳಲ್ಲಿ ಅವರ ಪ್ರಭಾವ ಹೆಚ್ಚಿದೆ. ಇರಾನ್–ಇರಾಕ್ ಯುದ್ಧದ ಸಮಯದಲ್ಲಿಯೂ ಅವರು ಪ್ರಮುಖ ಪಾತ್ರ ವಹಿಸಿದ್ದರು ಎಂದು ವರದಿಗಳು ಹೇಳಿವೆ.

ಆದರೂ, ಕುಟುಂಬ ಉತ್ತರಾಧಿಕಾರದ ಕುರಿತು ಧರ್ಮಗುರುಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸರ್ವೋಚ್ಚ ನಾಯಕನ ಸ್ಥಾನ ಪಡೆಯಲು ಅಗತ್ಯವಿರುವ ಉನ್ನತ ಧಾರ್ಮಿಕ ಪದವಿ ಹಾಗೂ ಔಪಚಾರಿಕ ನಾಯಕತ್ವದ ಅನುಭವ ಇರಬೇಕು. ಅದು ಮೊಜ್ತಬಾ ಅವರಿಗಿಲ್ಲ ಎಂದು ಧರ್ಮಗುರುಗಳು ಹೇಳುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಸ್ರೇಲ್‌ ಮೇಲೆ ಇರಾನ್ ದಾಳಿ; 50ಕ್ಕೂ ಹೆಚ್ಚು ಸಾವು, ಇಂಟರ್‌ಸೆಪ್ಟರ್ ನಾಶ

ಇಸ್ರೇಲ್‌ನ ಪರಮಾಣು ಚಟುವಟಿಕೆಗಳ ಪ್ರಮುಖ ಕೇಂದ್ರವೆಂದೇ ಗುರುತಿಸಲ್ಪಟ್ಟಿರುವ ದಕ್ಷಿಣದ ಡಿಮೋನಾ ನಗರದ...

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮೋರ್ಬಿಗೆ ಯುದ್ಧದ ಬಿಸಿ: ಸೆರಾಮಿಕ್ ಟೈಲ್ಸ್ ಉದ್ಯಮ ಸ್ಥಗಿತ, 4 ಲಕ್ಷ ಕಾರ್ಮಿಕರ ಬದುಕಿಗೆ ಭಾರೀ ಹೊಡೆತ

ಯುದ್ಧ ಮುಂದುವ‌ರೆದರೆ ಮತ್ತು ಅನಿಲ ಹರಿವು ನಿರ್ಬಂಧಿತವಾದರೆ ಗುಜರಾತ್‌ನ ಅತ್ಯಂತ ಪ್ರಮುಖ...