ಕೇರಳದ ನರ್ಸ್ ಗಲ್ಲು ತಪ್ಪಿಸಲು ಅಂತಿಮ ಪ್ರಯತ್ನ: ತಲಾಲ್ ಕುಟುಂಬದೊಂದಿಗೆ ಇಂದು ಯೆಮನ್‌ನಲ್ಲಿ ನಿರ್ಣಾಯಕ ಮಾತುಕತೆ

Date:

ಯೆಮನ್‌ನ ಜೈಲಿನಲ್ಲಿ ಮರಣದಂಡನೆ ಎದುರಿಸುತ್ತಿರುವ ಕೇರಳದ ನರ್ಸ್ ನಿಮಿಷಪ್ರಿಯ ಅವರ ಬಿಡುಗಡೆ ಸಂಬಂಧದ ಪ್ರಯತ್ನಗಳು ತೀವ್ರಗೊಂಡಿವೆ. ಪ್ರಸಿದ್ಧ ಸೂಫಿ ಗುರು ಶೇಖ್ ಹಬೀಬ್ ಉಮರ್ ಬಿನ್ ಹಫೀಲ್ ನೇತೃತ್ವದಲ್ಲಿ ತುರ್ತು ಮಾತುಕತೆಗಳು ತಡರಾತ್ರಿವರೆಗೆ ಮುಂದುವರೆದಿದ್ದು, ನಿರ್ಣಾಯಕ ಹಂತಕ್ಕೆ ಪ್ರವೇಶಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಅವರ ತಕ್ಷಣದ ಹಸ್ತಕ್ಷೇಪದ ಬಳಿಕ ಶೇಖ್ ಹಬೀಬ್ ಉಮರ್ ಅವರ ನಿಯೋಗವು ಉತ್ತರ ಯೆಮನ್‌ ನ ದಮಾರ್ ನಲ್ಲಿರುವ ತಲಾಲ್ ಕುಟುಂಬದ ತವರು ಪ್ರದೇಶಕ್ಕೆ ಭೇಟಿ ನೀಡಿ ಮಾತುಕತೆ ಆರಂಭಿಸಿದೆ. ದಮಾರ್‌ನ ಬುಡಕಟ್ಟು ಮುಖಂಡರು, ತಲಾಲ್ ಅವರ ಕುಟುಂಬ ಸದಸ್ಯರು ಮತ್ತು ಕಾನೂನು ಸಮಿತಿಯೊಂದಿಗೆ ಇಂದು ಮತ್ತಷ್ಟು ಮಾತುಕತೆ ನಡೆಯಲಿದೆ ಎಂದು ತಿಳಿದು ಬಂದಿದೆ.

ನಿಯೋಗದ ಮೂಲಗಳ ಪ್ರಕಾರ, ಮಾತುಕತೆಗಳು ಆಶಾದಾಯಕವಾಗಿ ಸಾಗುತ್ತಿದ್ದು, ನಾಳೆಯ ಸಂವಹನದಲ್ಲಿ ಸಮಾಧಾನ ತರಿಸುವ ಅಂತಿಮ ನಿರ್ಧಾರ ಕೈಗೊಳ್ಳಲಾಗಬಹುದೆಂಬ ನಿರೀಕ್ಷೆಯಿದೆ. ಪ್ರಕರಣವು ಗಂಭೀರವಾಗಿರುವ ಹಿನ್ನೆಲೆಯಲ್ಲಿ, ಸ್ಥಳೀಯ ಕುಟುಂಬಗಳು ಅದನ್ನು ಭಾವನಾತ್ಮಕವಾಗಿ ನೋಡುತ್ತಿದೆ. ಆದುದರಿಂದ ಇದುವರೆಗೆ ನೇರ ಸಂವಾದ ಸಾಧ್ಯವಾಗಿರಲಿಲ್ಲ.ಕಾಂತಪುರಂ ಎ ಪಿ ಅಬೂಬಕರ್ ಮುಸ್ಲಿಯರ್ ಅವರ ಮಧ್ಯಪ್ರವೇಶದಿಂದ ಮಾತ್ರ ಈ ಸಮಾಲೋಚನೆ ಸಾಧ್ಯವಾಗಿದೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ದ್ವೀಪದ ಜನರ ಬದುಕನ್ನು ಪ್ರತಿನಿಧಿಸಲಿ ‘ತೂಗು ಸೇತುವೆ’

ಈ ನಡುವೆ, ನಿಮಿಷಪ್ರಿಯ ಅವರ ಮರಣದಂಡನೆಯನ್ನು ಜುಲೈ 16 ರಂದು ಜಾರಿಗೊಳಿಸಲಾಗುವುದೆಂಬ ವರದಿಗಳು ಬಂದಿದೆ. ಈ ಹಿನ್ನೆಲೆಗಳಲ್ಲಿ ಮುಂದಿನ ಮಾತುಕತೆಗಳು ನಿರ್ಣಾಯಕವಾಗಿದ್ದು, ತಲಾಲ್ ಕುಟುಂಬದಿಂದ ಕ್ಷಮೆ ಅಥವಾ ಶಿಕ್ಷಾ ಮುಂದೂಡಿಕೆಗೆ ಒಪ್ಪಿಗೆ ಪಡೆಯುವ ನಿರೀಕ್ಷೆಯಿದೆ.

ಇಡೀ ದೇಶವು ಈ ಘಟನೆಯನ್ನು ಕುತೂಹಲದಿಂದ ನೋಡುತ್ತಿದೆ. ಎ ಪಿ ಉಸ್ತಾದರ ಮಧ್ಯಪ್ರವೇಶದಿಂದ ಮಾನವೀಯ ನೆಲೆಯಲ್ಲಿ ಈ ಪ್ರಕರಣವು ಇತ್ಯರ್ಥವಾಗಬಹುದು ಎಂಬ ನಿರೀಕ್ಷೆಯಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...