ಜಪಾನ್‌ನಲ್ಲಿ ಮತ್ತೆ ಭೂಕಂಪ: ಸುನಾಮಿಯ ಆತಂಕವಿಲ್ಲ ಎಂದ ಸರ್ಕಾರ

Date:

ಕೇಂದ್ರ ಜಪಾನ್‌ನಲ್ಲಿ ಮತ್ತೆ ಪ್ರಬಲವಾಗಿ ಭೂಕಂಪ ಉಂಟಾಗಿದ್ದು, ಆದರೆ ಈ ಬಾರಿ ಸುನಾಮಿ ಉಂಟಾಗುವ ಯಾವುದೇ ಆತಂಕವಿಲ್ಲ ಎಂದು ಸರ್ಕಾರ ತಿಳಿಸಿದೆ.

ಜಪಾನಿನ ಕಡಲ ತೀರದಲ್ಲಿ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.0 ಭೂಮಿ ಕಂಪಿಸಿದೆ. ಇದೇ ಸ್ಥಳದಲ್ಲಿ ಜನವರಿ 1ರಂದು ಪ್ರಬಲ ಭೂಕಂಪನ ಸಂಭವಿಸಿ ಹಲವು ಸಾವುನೋವುಗಳಿಗೆ ಕಾರಣವಾಗಿತ್ತು. ಕಳೆದ ವಾರ ಸಂಭವಿಸಿದ ಭೂಕಂಪನದಲ್ಲಿ ಸಾವಿನ ಪ್ರಮಾಣ 200ಕ್ಕೆ ಏರಿಕೆಯಾಗಿದ್ದು, 100 ಮಂದಿಯ ಮೃತದೇಹ ಪತ್ತೆಯಾಗಿರಲಿಲ್ಲ ಎಂದು ಸ್ಥಳೀಯ ಆಡಳಿತಾಧಿಕಾರಿಗಳು ತಿಳಿಸಿದ್ದರು.

ಹೊಸ ವರ್ಷದ ದಿನದಂದು 7.5ರ ತೀವ್ರತೆಯಲ್ಲಿ ಸಂಭವಿಸಿದ ಕಂಪನದಿಂದ ನೋಟೋ ಪೆನಿನ್ಸುಲಾದಲ್ಲಿ ಹಲವು ಕಟ್ಟಡಗಳು ಉರುಳಿಬಿದ್ದು ಸುಮಾರು ಪ್ರಮಾಣದ ಆಸ್ತಿಪಾಸ್ತಿಗಳು ನಷ್ಟ ಉಂಟಾಗಿದ್ದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭೂಕಂಪನದಿಂದಾಗಿ ಇಶಿಕೋವಾ ಪ್ರದೇಶದ ಅವಶೇಷಗಳಡಿ 3,500 ಕ್ಕೂ ಹೆಚ್ಚು ಮಂದಿ ಸಿಲುಕಿದ್ದರು. ಸಾವಿನ ಪ್ರಮಾಣ 200 ದಾಟಿದೆ ಎಂದು ಹೇಳಲಾದರೂ 100ಕ್ಕೂ ಹೆಚ್ಚು ಮೃತದೇಹ ಪತ್ತೆಯಾಗಿಲ್ಲ. ಪರಿಹಾರ ಕಾರ್ಯಾಚರಣೆ ಇನ್ನೂ ಮುಂದುವರೆಯುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಡವರ ಭೂಮಿ ಮತ್ತು ನೈಸ್‌ ರಾಜಕಾರಣ

ವಾಜಿಮಾ ಪ್ರದೇಶದಲ್ಲಿ 1,200ಕ್ಕೂ ಹೆಚ್ಚು ಕಂಪನಗಳು ಉಂಟಾಗಿತ್ತು. ಇದರಿಂದ ಸಾವಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಶಂಕಿಸಲಾಗಿದೆ.

ಭಾರಿ ಹಿಮ ಬೀಳುತ್ತಿರುವುದರಿಂದ ಭೂಕಂಪ ಉಂಟಾದ ಪ್ರದೇಶದಲ್ಲಿ ಪರಿಹಾರ ಕಾರ್ಯ ಕೈಗೊಳ್ಳುವುದು ಕಷ್ಟವಾಗುತ್ತಿದೆ. 30 ಸಾವಿರ ಮಂದಿ ಸರ್ಕಾರಿ ಆಶ್ರಯ ಪ್ರದೇಶಗಳಲ್ಲಿ ಉಳಿದುಕೊಂಡಿದ್ದಾರೆ. ಅಲ್ಲದೆ ಈ ಪ್ರದೇಶದ 60 ಸಾವಿರ ಮಂದಿಗೆ ನೀರಿನ ಸಮಸ್ಯೆ ಉಂಟಾಗಿದ್ದರೆ, 15 ಸಾವಿರ ಮಂದಿ ವಿದ್ಯುತ್ ಇಲ್ಲದೆ ಪರದಾಡುತ್ತಿದ್ದಾರೆ.

ವಿಪತ್ತು ಪರಿಹಾರ ಸಭೆಯಲ್ಲಿ ಮಾತನಾಡಿದ ಜಪಾನ್ ಪ್ರಧಾನಿ ಫುಮಿಯೊ ಕಿಶಿ, ಭೂಕಂಪನ ಪ್ರದೇಶದಲ್ಲಿ ಎಲ್ಲ ರೀತಿಯ ಪರಿಹಾರ ಕಾರ್ಯಾಚರಣೆ ಕೈಗೊಂಡು ಸಮಸ್ಯೆಯನ್ನು ಪರಿಹರಿಸುವಂತೆ ಸಚಿವರಿಗೆ ಸೂಚನೆ ನೀಡಿದ್ದಾರೆ. ತೊಂದರೆಗೊಳಗಾಗಿರುವ ಸಂತ್ರಸ್ತರನ್ನು ಭೂಕಂಪ ಪೀಡಿತ ಪ್ರದೇಶದಿಂದ ದೂರದ ಪ್ರದೇಶಕ್ಕೆ ಸ್ಥಳಾಂತರಿಸುವಂತೆ ಸೂಚನೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...