ಮ್ಯಾಚ್ ಫಿಕ್ಸಿಂಗ್ ಆರೋಪ; ಮೂವರು ಮಾಜಿ ಕ್ರಿಕೆಟಿಗರ ಬಂಧನ

Date:

2015-16ರಲ್ಲಿ ನಡೆದಿದ್ದ ಟಿ20 ‘ರಾಮ್ ಸ್ಲಾಮ್ ಚಾಲೆಂಜ್‌’ ಕ್ರಿಕೆಟ್‌ ಪಂದ್ಯಾವಳಿ ವೇಳೆ ಮ್ಯಾಚ್‌ ಫಿಕ್ಸಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಆಫ್ರಿಕಾದ ಮೂವರು ಮಾಜಿ ಕ್ರಿಕೆಟಿಗರಾದ ಥಾಮಿ ತ್ಸೊಲೆಕಿಲೆ, ಲೋನ್‌ವಾಬೊ ತ್ಸೊಟ್ಸೊಬೆ ಮತ್ತು ಎಥಿ ಎಂಬಾಲಾಟಿ ಅವರನ್ನು ಬಂಧಿಸಲಾಗಿದೆ.

ಹಗರಣದ ಬಗ್ಗೆ ತನಿಖೆ ನಡೆಸಲಾಗಿದ್ದು, ಇತ್ತೀಚಗೆ ತನಿಖಾ ವರದಿ ಬಂದಿದೆ. ಈ ಬೆನ್ನಲ್ಲೇ, ಮೂವರು ಮಾಜಿ ಕ್ರಿಕೆಟಿಗರ ವಿರುದ್ಧವೂ ದಕ್ಷಿಣ ಆಫ್ರಿಕಾದ ‘ಭ್ರಷ್ಟ ಚಟುವಟಿಕೆಗಳ ತಡೆ ಮತ್ತು ಹೋರಾಟ ಕಾಯ್ದೆ-2004’ರ ಸೆಕ್ಷನ್ 15ರ ಅಡಿಯಲ್ಲಿ ಐದು ಭ್ರಷ್ಟಾಚಾರ ಪ್ರಕರಣಗಳನ್ನು ದಾಖಲಿಸಲಾಗಿದೆ ಮತ್ತು ಬಂಧಿಸಲಾಗಿದೆ.

2016ರಲ್ಲಿ ಮಾಜಿ ಆಟಗಾರ ಗುಲಾಮ್ ಬೋಡಿಗೆ ಸಂಬಂಧಿಸಿದಂತೆ ಕೆಲವು ಅನುಮಾನಾಸ್ಪದ ಚಟುವಟಿಕೆಗಳ ವರದಿಗಳು ಪ್ರಕಟವಾಗಿದ್ದವು. ಆ ಬಗ್ಗೆ ಗಮನಿಸಿದ್ದ ‘ಕ್ರಿಕೆಟ್ ದಕ್ಷಿಣ ಆಫ್ರಿಕಾ’ದ (CSA) ಭ್ರಷ್ಟಾಚಾರ-ವಿರೋಧಿ ಘಟಕವು ತನಿಖೆ ಆರಂಭಿಸಿತ್ತು. ಮೂರು ಸ್ಥಳೀಯ T20 ಪಂದ್ಯಗಳಿಗೆ ಸಂಬಂಧಿಸಂತೆ ಫಿಕ್ಸಿಂಗ್‌ ಮಾಡಲು ಅವರು ಹಲವು ಆಟಗಾರರನ್ನು ಸಂಪರ್ಕಿಸಿದ್ದಾರೆ ಎಂದು ತನಿಖೆಯಲ್ಲಿ ಬಹಿರಂಗವಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಗರಣದಲ್ಲಿ ಬೋಡಿ ಅವರೊಂದಿಗೆ ಆರೋಪಿತ ಮೂವರು ಆಟಗಾರರು ಮ್ಯಾಚ್‌ ಫಿಕ್ಸಿಂಗ್‌ನಲ್ಲಿ ಭಾಗಿಯಾಗಿದ್ದಾರೆ. ಅದಕ್ಕಾಗಿ, ಉಡುಗೊರೆಯನ್ನೂ ಪಡೆದಿದ್ದಾರೆ. ತ್ಸೊಲೆಕಿಲ್ ಮತ್ತು ತ್ಸೊಟ್ಸೊಬೆ ವಿರುದ್ಧ ಐದು ಭ್ರಷ್ಟಾಚಾರದ ಆರೋಪಗಳನ್ನು ಹೊರಿಸಲಾಗಿದೆ. ಅವರಿಬ್ಬರೂ ಶನಿವಾರ ಪ್ರಿಟೋರಿಯಾದ ವಿಶೇಷ ವಾಣಿಜ್ಯ ಅಪರಾಧಗಳ ನ್ಯಾಯಾಲಯದ ಎದುರು ಹಾಜರಾಗಿದ್ದಾರೆ. ಇನ್ನು, ಎಥಿ ಎಂಬಾಲಾಟಿ ಅವರು ಈ ಹಿಂದೆಯೇ ನ್ಯಾಯಾಲಯದ ಎದುರು ಹಾಜರಾಗಿದ್ದರು. ಸದ್ಯ, ಮೂವರನ್ನೂ ಬಂಧಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...