ಹವಾಯಿ ಕಾಳ್ಗಿಚ್ಚು: ಮೃತರ ಸಂಖ್ಯೆ 53ಕ್ಕೆ ಏರಿಕೆ

Date:

ಹವಾಯಿ ದ್ವೀಪದ ಐತಿಹಾಸಿಕ ಪಟ್ಟಣವನ್ನು ಅಕ್ಷರಶಃ ಭಸ್ಮಗೊಳಿಸಿರುವ ಭೀಕರ ಕಾಳ್ಗಿಚ್ಚಿಗೆ ಸಾವಿಗೀಡಾದವರ ಸಂಖ್ಯೆ 53ಕ್ಕೇರಿದೆ. ಅಮೆರಿಕದ ರಾಜ್ಯವಾದ ಬಳಿಕ ಈ ಪುಟ್ಟ ದ್ವೀಪ ರಾಜ್ಯದ ಇತಿಹಾಸದಲ್ಲೇ ಸಂಭವಿಸಿದ ಅತಿದೊಡ್ಡ ಕಾಳ್ಗಿಚ್ಚು ದುರಂತ ಇದಾಗಿದೆ.

ಹವಾಯಿಯ ಮೌವ್ವಿ ದ್ವೀಪದ ಪಶ್ಚಿಮ ಕರಾವಳಿಯಲ್ಲಿ ಆರಂಭವಾದ ಕಾಳ್ಗಿಚ್ಚು, ಪಕ್ಕದಲ್ಲಿ ಹಾದುಹೋಗುತ್ತಿದ್ದ ಬಿರುಗಾಳಿಯಿಂದಾಗಿ ಕಡಲ ಕಿನಾರೆಯ ಲಹೈನಾ ನಗರವನ್ನು ವ್ಯಾಪಿಸಿತು. ಬೆಂಕಿಯ ಜ್ವಾಲೆ ಎಷ್ಟು ಶೀಘ್ರವಾಗಿ ವ್ಯಾಪಿಸಿತು ಎಂದರೆ ಹಲವು ಮಂದಿ ಯಾವುದೇ ರಕ್ಷಣೆ ಪಡೆಯಲು ಸಾಧ್ಯವಾಗದೇ ಬೀದಿಯಲ್ಲಿ ಬೆಂಕಿಯ ಕೆನ್ನಾಲಿಗೆಯಲ್ಲಿ ಸಿಲುಕಿಕೊಂಡರು ಅಥವಾ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಸಮುದ್ರಕ್ಕೆ ಹಾರಿದರು ಎಂದು ಉನ್ನತ ಮೂಲಗಳು ಹೇಳಿವೆ.

“1960ರಲ್ಲಿ ದೊಡ್ಡ ದ್ವೀಪಕ್ಕೆ ಬೃಹತ್ ಅಲೆ ಅಪ್ಪಳಿಸಿ 61 ಮಂದಿ ಮೃತಪಟ್ಟಿದ್ದರು” ಎಂದು ಗವರ್ನರ್ ಜೋಶ್ ಗ್ರೀನ್ ಹೇಳಿದ್ದಾರೆ. ಹವಾಯಿ ದ್ವೀಪ ಅಮೆರಿಕದ 50ನೇ ರಾಜ್ಯವಾಗಿ ಸೇರ್ಪಡೆಯಾದ ಒಂದು ವರ್ಷದಲ್ಲೇ ಈ ದುರಂತ ಸಂಭವಿಸಿತ್ತು ಎಂದು ನೆನಪಿಸಿಕೊಂಡಿದ್ದಾರೆ. “ಈ ಬಾರಿ ಸಾವಿನ ಸಂಖ್ಯೆ ಅದನ್ನು ಮೀರುವ ಎಲ್ಲ ಸಾಧ್ಯತೆಯೂ ಇದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಲೋಕಸಭೆಯಿಂದ ಅಧೀರ್ ರಂಜನ್ ಅಮಾನತು; ಕಾಂಗ್ರೆಸ್ ಸಂಸದರ ಸಭೆ ಕರೆದ ಸೋನಿಯಾ ಗಾಂಧಿ

ಗುರುವಾರ 53 ಮಂದಿ ಬೆಂಕಿ ದುರಂತದಲ್ಲಿ ಮೃತಪಟ್ಟಿರುವುದನ್ನು ಮೌವ್ವಿ ಕೌಂಟಿ ಅಧಿಕಾರಿಗಳು ದೃಢಪಡಿಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಿಯಂತ್ರಿಸುವ ಕಾರ್ಯಾಚರಣೆ ಮುಂದುವರಿಸಿದ್ದಾರೆ.

ಲಹೈನಾ ಪಟ್ಟಣ ಗುರುವಾರ ಸಂಪೂರ್ಣ ಸುಟ್ಟು ಕರಕಲಾಗಿರುವ ದೃಶ್ಯ ಕಾಣಿಸುತ್ತಿದ್ದು, ಹೊಗೆಯಾಡುತ್ತಿರುವ ಅವಶೇಷಗಳು ಎಲ್ಲೆಂದರಲ್ಲಿ ಕಾಣಿಸುತ್ತಿವೆ. ಪಟ್ಟಣದ ಶೇ 80ರಷ್ಟು ಭಾಗ ನಾಶವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಲಹೈನಾ ಪಟ್ಟಣಕ್ಕೆ ಬಾಂಬ್ ಬಿದ್ದಂತೆ ಕಾಣಿಸುತ್ತಿದೆ ಎಂದು ವಿವರಿಸುವುದು ನಿಸ್ಸಂಶಯ ಎಂದು ಅವರು ಹೇಳಿದ್ದಾರೆ. “ಇದು ಸಂಪೂರ್ಣ ವಿನಾಶ. ನಾವು ದಶಕಗಳಿಂದ ಸಂತೋಷದಿಂದ ಕಳೆದ, ಸಂಭ್ರಮಿಸಿದ, ತಲೆಮಾರುಗಳನ್ನು ಕಳೆದ ಕಟ್ಟಡಗಳು ಸಂಪೂರ್ಣವಾಗಿ ನಾಶವಾಗಿವೆ” ಎಂದು ಅವರು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...