ಸಚಿವೆ ಸುಯೆಲ್ಲಾ ವಜಾ ಪ್ರಕರಣ | ರಿಷಿ ಸುನಕ್ ವಿರುದ್ಧ ಮೊದಲ ಅವಿಶ್ವಾಸ ಪತ್ರ

Date:

ಸೋಮವಾರ ನಡೆದ ಸಂಪುಟ ಪುನಾರಚನೆಯಲ್ಲಿ ಗೃಹ ಸಚಿವೆ ಸುಯೆಲ್ಲಾ ಬ್ರವರ್‌ಮನ್ ಅವರನ್ನು ವಜಾಗೊಳಿಸಿದ ನಂತರ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು ತಮ್ಮ ಮೊದಲ ಅವಿಶ್ವಾಸ ಪತ್ರವನ್ನು ಎದುರಿಸುತ್ತಿದ್ದಾರೆ. ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಅವರ ನಿಷ್ಠಾವಂತ ಟೋರಿ ಸಂಸದೆ ಆಂಡ್ರಿಯಾ ಜೆಂಕಿನ್ಸ್, ಸುನಕ್ ಅವರ ಬದಲಿಗೆ “ನಿಜವಾದ ಕನ್ಸರ್ವೇಟಿವ್ ಪಕ್ಷದ ನಾಯಕ”ನಿಗಾಗಿ ಕರೆ ನೀಡಿದ್ದಾರೆ.

“ಸಾಕು ಸಾಕು… ರಿಷಿ ಸುನಕ್ ಹೋಗುವ ಸಮಯ ಬಂದಿದೆ…” ಎಂದು ಎಕ್ಸ್‌ನಲ್ಲಿ ಅವರು ಬರೆದು ತಮ್ಮ ಅವಿಶ್ವಾಸ ಪತ್ರವನ್ನು ಹಂಚಿಕೊಂಡಿದ್ದಾರೆ.

ಸ್ವಂತ ಪಕ್ಷದ ಸಂಸದೆಯೇ ಪ್ರಧಾನಿ ವಿರುದ್ಧ ಅವಿಶ್ವಾಸ ಪತ್ರ ಕಳಿಸಿರುವುದು ಬ್ರಿಟನ್‌ನಲ್ಲಿ ಭಾರೀ ಚರ್ಚೆಯ ವಿಷಯವಾಗಿದೆ. ಹೌಸ್ ಆಫ್ ಕಾಮನ್ಸ್ ವ್ಯವಹಾರಗಳನ್ನು ನೋಡಿಕೊಳ್ಳುವ 1992 ಸಮಿತಿ ಅಧ್ಯಕ್ಷ ಗ್ರಹಾಂ ಬ್ರಾಡ್‌ಗೆ ಆಕೆ ಪತ್ರವನ್ನು ಕಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅವಿಶ್ವಾಸ ಪತ್ರ

ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಅವರ ನಿಷ್ಠಾವಂತರಾದ ಟೋರಿ, ಸಂಪುಟದಿಂದ ಸುಯೆಲ್ಲಾ ಅವರನ್ನು ವಜಾಗೊಳಿಸಿದ್ದನ್ನು ತೀವ್ರವಾಗಿ ವಿರೋಧಿಸಿದ್ದಾರೆ. ‘ರಿಷಿ ಸುನಕ್ ತನ್ನ ಸಂಪುಟದಲ್ಲಿ ಸತ್ಯ ಮಾತನಾಡುತ್ತಿದ್ದ ಏಕೈಕ ವ್ಯಕ್ತಿಯ ಮೇಲೆ ಪ್ರಹಾರ ಮಾಡಿದ್ದಾರೆ. ಅದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ರಿಷಿ ಸುನಕ್ ಹುದ್ದೆಯಿಂದ ಇಳಿಯುವ ಸಮಯ ಬಂದಿದೆ’ ಎಂದಿರುವ ಆಂಡ್ರಿಯಾ, ಪ್ರಧಾನಿ ವಿರುದ್ಧ ಅವಿಶ್ವಾಸ ಪತ್ರ ಬರೆಯುವಂತೆ ಇತರ ಸಂಸದರಿಗೂ ಕರೆ ನೀಡಿದ್ದಾರೆ.

ರಿಷಿ ಸುನಕ್ ಪ್ರಧಾನಿಯಾದ ನಂತರ ಸಂಸದರೊಬ್ಬರು ಅವಿಶ್ವಾಸ ಪತ್ರ ಬರೆದಿರುವುದು ಇದೇ ಮೊದಲ ಬಾರಿ. ಆದರೆ, ಇದರಿಂದ ರಿಷಿ ಸುನಕ್ ಸಂಸತ್‌ನಲ್ಲಿ ಅವಿಶ್ವಾಸ ನಿರ್ಣಯ ಎದುರಿಸುವ ಅಗತ್ಯವಿಲ್ಲ. ಆಡಳಿತ ಪಕ್ಷದ ಒಟ್ಟು ಸಂಸದರ ಪೈಕಿ ಶೇ.15ರಷ್ಟು ಮಂದಿ ಅವಿಶ್ವಾಸ ವ್ಯಕ್ತಪಡಿಸಿದರೆ, ಆಗ ಪ್ರಧಾನಿ ವಿಶ್ವಾಸ ಮತವನ್ನು ಗೆಲ್ಲಬೇಕಾಗುತ್ತದೆ.

ಈ ಸುದ್ದಿ ಓದಿದ್ದೀರಾ: ಆಧುನಿಕ ಭಾರತ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದವರು ನೆಹರೂ: ಸಿಎಂ ಸಿದ್ದರಾಮಯ್ಯ

ಹಲವು ಬಾರಿ ವಿವಾದಗಳಿಗೆ ಗುರಿಯಾಗಿದ್ದ ಸುಯೆಲ್ಲಾ ಬ್ರವರ್‌ಮನ್ ಅವರನ್ನು ಸಂಪುಟದಿಂದ ವಜಾಗೊಳಿಸುತ್ತಿರುವುದಾಗಿ ರಿಷಿ ಸುನಕ್ ಸರ್ಕಾರ ಸೋಮವಾರ ಪ್ರಕಟಿಸಿತ್ತು. ಆ ಸ್ಥಾನವನ್ನು ವಿದೇಶಾಂಗ ಸಚಿವ ಜೇಮ್ಸ್‌ ಕ್ಲೆವರ್ಲಿ ಅವರಿಗೆ ನೀಡಲಾಗಿದೆ. ಮಾಜಿ ಪ್ರಧಾನಿ ಡೇವಿಡ್ ಕ್ಯಾಮರೂನ್‌ಗೂ ಸಂಪುಟದಲ್ಲಿ ಸ್ಥಾನ ನೀಡಲಾಗಿದ್ದು, ಅವರಿಗೆ ವಿದೇಶಾಂಗ, ಕಾಮನ್‌ವೆಲ್ತ್, ಅಭಿವೃದ್ಧಿ ಖಾತೆಗಳನ್ನು ನೀಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...