ವಿಮಾನ ಪತನವಾಗಿ 40 ದಿನಗಳ ಬಳಿಕ ದಟ್ಟ ಕಾಡಿನಲ್ಲಿ 1 ವರ್ಷ ವಯಸ್ಸಿನ ಮಗು ಸೇರಿದಂತೆ  4 ಮಕ್ಕಳು ಜೀವಂತವಾಗಿ ಪತ್ತೆ!

Date:

ಅಮೆಜಾನ್ ದಟ್ಟ ಕಾಡಿನಲ್ಲಿ ಮೇ1 ರಂದು ಪತನಗೊಂಡಿದ್ದ ವಿಮಾನದಲ್ಲಿದ್ದ1 ವರ್ಷ ವಯಸ್ಸಿನ ಮಗು ಸೇರಿದಂತೆ ನಾಲ್ವರು ಮಕ್ಕಳು, 40 ದಿನಗಳ ಬಳಿಕ ಜೀವಂತವಾಗಿ ಪತ್ತೆಯಾಗಿದ್ದಾರೆ ಎಂದು ಕೊಲಂಬಿಯಾದ ಅಧ್ಯಕ್ಷ ಗುಸ್ಟಾವೊ ಪೆಟ್ರೋ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

ಅಮೆಜಾನ್‌ ಪ್ರಾಂತ್ಯದ ಅರರಾಕುವಾರಾದಿಂದ ಸ್ಯಾನ್ ಜೋಸ್ ಡೆಲ್ ಗುವಿಯಾರ್‌ಗೆ ಮೇ 1 ರಂದು ಪ್ರಯಾಣ ಬೆಳೆಸಿದ್ದ ಒಂದೇ ಕುಟುಂಬದ  7 ಮಂದಿ ಮತ್ತು ಒಬ್ಬ ಪೈಲಟ್ ಇದ್ದ ʻಸೆಸ್ನಾ 206ʼ ಸಣ್ಣ ವಿಮಾನವೊಂದು ಎಂಜಿನ್ ವೈಫಲ್ಯದಿಂದಾಗಿ ದಟ್ಟ ಕಾಡಿನಲ್ಲಿ ಪತನವಾಗಿತ್ತು. ಘಟನೆಯಲ್ಲಿ ತಾಯಿ ಮತ್ತು ವಿಮಾನದ ಪೈಲಟ್ ಸ್ಥಳದಲ್ಲೇ ಸಾವನ್ನಪ್ಪಿದ್ದರು. ‌

ಅಪಘಾತ ನಡೆದು 2 ವಾರಗಳ ಬಳಿಕ ಅಮೆಜಾನ್ ದಟ್ಟ ಕಾಡಿನಲ್ಲಿ ಪತನವಾಗಿದ್ದ ವಿಮಾನದ ಅವಶೇಷಗಳಡಿಯಲ್ಲಿ ಮೂರು ಮೃತದೇಹಗಳನ್ನು ಕೊಲಂಬಿಯಾದ ಸೇನಾಪಡೆ ಪತ್ತೆಹಚ್ಚಿತ್ತು. ಆದರೆ ವಿಮಾನದಲ್ಲಿದ್ದ1 ವರ್ಷ ಮತ್ತು 13, 9, 4  ವಯಸ್ಸಿನ 4 ಮಕ್ಕಳು ನಾಪತ್ತೆಯಾಗಿದ್ದರು. ಬದುಕುಳಿದವರಿಗಾಗಿ ತೀವ್ರ ಹುಡುಕಾಟ ನಡೆಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಾಚರಣೆ ವೇಳೆ ಕಾಡಿನಲ್ಲಿ ಮಕ್ಕಳ ಹೆಜ್ಜೆ ಗುರುತು, ಅರ್ಧ ತಿಂದ ಹಣ್ಣುಗಳು ಸೇರಿದಂತೆ ಹಲವು ಕುರುಹುಗಳು ಪತ್ತೆಯಾಗಿತ್ತು. ಹೀಗಾಗಿ ಮಕ್ಕಳು ಬದುಕಿರುವ ನಿರೀಕ್ಷೆಯಲ್ಲಿ ಹುಡುಕಾಟವನ್ನು ತೀವ್ರಗೊಳಿಸಲಾಯಿತು.

ಮಕ್ಕಳನ್ನು ಪತ್ತೆಹಚ್ಚಲು ಕಾಡಿನಲ್ಲಿ 150 ಸೈನಿಕರು ಹುಡುಕಾಟ ನಡೆಸಿದ್ದರು. ನಾಯಿಗಳನ್ನು ಸಹಾಯಕ್ಕೆ ಸೇನೆ ಬಳಸಿಕೊಂಡಿತ್ತು. ಸ್ಥಳೀಯ ಬುಡಕಟ್ಟಿನ ಹತ್ತಾರು ಸ್ವಯಂಸೇವಕರೂ ಕಾರ್ಯಾಚರಣೆಯಲ್ಲಿ ಕೈ ಜೋಡಿಸಿದ್ದರು. ಹಸಿವಿನಿಂದ ಮಕ್ಕಳು ಸಾಯಬಾರದು ಎಂಬ ಕಾರಣಕ್ಕೆ ಆಹಾರ, ನೀರಿನ ಬಾಟಲಿಗಳನ್ನು ಹೆಲಿಕಾಪ್ಟರ್ ಮೂಲಕ ಮೇಲಿನಿಂದ ಕಾಡಿನೊಳಗಡೆ ಎಸೆಯಲಾಗಿತ್ತು.

ಇದೊಂದು ವಿಸ್ಮಯಕಾರಿ ಘಟನೆಯಾಗಿದೆ ಎಂದಿರುವ ಅಧ್ಯಕ್ಷ ಗುಸ್ತಾವೊ ಪೆಟ್ರೋ , ʻ 40 ದಿನಗಳ ಹುಡುಕಾಟದ ಬಳಿಕ ಸೇನಾಪಡೆ ಮತ್ತು ಸ್ಥಳೀಯ ಜನರು ಮಕ್ಕಳನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಕಷ್ಟದ ಪರಿಸ್ಥಿತಿಯಲ್ಲಿಯೂ ದೈರ್ಯದಿಂದ ಬದುಕುಳಿಯುವ ಮಾರ್ಗಗಳನ್ನು ಮಕ್ಕಳು ಕಂಡುಹಿಡಿದಿರುವುದನ್ನು ಇತಿಹಾಸ ನೆನಪಿನಲ್ಲಿಟ್ಟುಕೊಳ್ಳುತ್ತದೆ. ಮಕ್ಕಳು ನಿಶ್ಯಕ್ತರಾಗಿದ್ದು, ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾಡು ಅವರನ್ನು ರಕ್ಷಿಸಿದೆ ಮತ್ತು ಈಗ ಅವರು ಕೊಲಂಬಿಯಾದ ಮಕ್ಕಳು’ ಎಂದು ಪೆಟ್ರೋ ಟ್ವೀಟ್‌ ಮಾಡಿದ್ದಾರೆ.

ಪವಾಡ ಎಂಬಂತೆ ಬದುಕುಳಿದಿರುವ ಮಕ್ಕಳನ್ನು ಶನಿವಾರ ರಾಜಧಾನಿ ಬೊಗೋಟಾ ಸೇನಾ ವಿಮಾನ ನಿಲ್ದಾಣಕ್ಕೆ ಕರೆತರಲಾಯಿತು. ಬಳಿಕ ಆಂಬುಲೆನ್ಸ್‌ನಲ್ಲಿ ಕರೆದೊಯ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...