ಗಾಜಾ ಮೇಲೆ ಇಸ್ರೇಲ್ ದಾಳಿಯನ್ನು ಜನಾಂಗೀಯ ಹತ್ಯೆ ಎಂದು ಖಂಡಿಸಿದ ಅಮೆರಿಕದ ಮುಸ್ಲಿಂ ನರ್ಸ್ ಕೆಲಸದಿಂದ ವಜಾ

Date:

ಗಾಜಾದಲ್ಲಿ ಇಸ್ರೇಲ್‌ನ ದಾಳಿಯನ್ನು “ಜನಾಂಗೀಯ ಹತ್ಯೆ” ಎಂದು ಖಂಡಿಸಿದ ಮುಸ್ಲಿಂ ಸಮುದಾಯದ ನರ್ಸ್‌ ಒಬ್ಬರನ್ನು ಕೆಲಸದಿಂದ ವಜಾ ಮಾಡಿದ ಘಟನೆ ಅಮೆರಿಕದ ನ್ಯೂಯಾರ್ಕ್‌ನಲ್ಲಿ ನಡೆದಿದೆ.

ಹಸನ್‌ ಜಬರ್‌ ಎಂಬ ನರ್ಸ್‌ಗೆ ಈ ತಿಂಗಳ ಆರಂಭದಲ್ಲಿ, ನ್ಯೂಯಾರ್ಕ್‌ನಲ್ಲಿನ ಎನ್‌ವೈಯು ಲ್ಯಾಂಗೋನ್ ಹೆಲ್ತ್ ಎಂಬ ಆಸ್ಪತ್ರೆಯಲ್ಲಿ ಶಿಶುಗಳನ್ನು ಕಳೆದುಕೊಂಡ ತಾಯಂದಿಯರಿಗೆ ಸಹಾನುಭೂತಿಯ ಆರೈಕೆಯನ್ನು ಒದಗಿಸುವುದಕ್ಕಾಗಿ ಪ್ರಶಸ್ತಿಯನ್ನು ನೀಡಿತ್ತು. ಈ ಪ್ರಶಸ್ತಿಯನ್ನು ಸ್ವೀಕರಿಸುವ ಸಂದರ್ಭದಲ್ಲಿ ಗಾಜಾದಲ್ಲಿ ಇಸ್ರೇಲ್‌ನ ದಾಳಿಯನ್ನು “ಜನಾಂಗೀಯ ಹತ್ಯೆ” ಎಂದು ಖಂಡಿಸಿದರು.

ಭಾಷಣ ಮಾಡಿದ ನಂತರ ಹಸನ್‌ ಜಬರ್‌ ಅವರನ್ನು ಎನ್‌ವೈಯು ಲ್ಯಾಂಗೋನ್ ಹೆಲ್ತ್ ಆಸ್ಪತ್ರೆ ಮಂಡಳಿ ಕೆಲಸದಿಂದ ವಜಾ ಮಾಡಿದೆ. ತಾವು ವಜಾಗೊಂಡಿರುವ ಬಗ್ಗೆ ಹಸನ್‌ ಜಬರ್‌ ಅವರು ಇನ್‌ಸ್ಟಾಗ್ರಾಂ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಸ್ತುತ ಗಾಜಾದಲ್ಲಿ ನಡೆಯುತ್ತಿರುವ ನರಮೇಧದ ಸಮಯದಲ್ಲಿ ನನ್ನ ದೇಶದ ಮಹಿಳೆಯರು ಊಹಿಸಲಾಗದ ನಷ್ಟವನ್ನು ಅನುಭವಿಸುತ್ತಿರುವುದನ್ನು ನೋಡುವುದು ನನಗೆ ನೋವುಂಟುಮಾಡುತ್ತದೆ” ಎಂದು ಜಬರ್ ಅವರು ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡಿದ ತಮ್ಮ ಭಾಷಣದ ವಿಡಿಯೊದಲ್ಲಿ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹೋರಾಟಗಳನ್ನು ಹತ್ತಿಕ್ಕಿದ ಗೌಡರ ಹಾಸನದಲ್ಲಿ ಮತ್ತೆ ಮೊಳಗಿದ ಹೋರಾಟದ ಕೂಗು

ಗಾಜಾದ ಮೇಲೆ ಇಸ್ರೇಲ್‌ ದಾಳಿಯನ್ನು ಖಂಡಿಸಿದ್ದಕ್ಕಾಗಿ ಇದೇ ಅಸ್ಪತ್ರೆಯ ಕ್ಯಾನ್ಸರ್ ಸಂಶೋಧಕರೊಬ್ಬರನ್ನು ಕೆಲಸದಿಂದ ವಜಾ ಮಾಡಲಾಗಿತ್ತು. ಈ ಸಂಶೋಧಕರು ಹಮಾಸ್ ವಿರೋಧಿ ರಾಜಕೀಯ ಕಾರ್ಟೂನ್‌ಗಳನ್ನು ಪೋಸ್ಟ್ ಮಾಡಿದ ನಂತರ ಕೆಲಸದಿಂದ ತೆಗೆದುಹಾಕಲಾಗಿತ್ತು. ವ್ಯಂಗ್ಯಚಿತ್ರವು ಕೆಲವು ಅರಬ್ ಜನರ ಆಕ್ಷೇಪಾರ್ಹ ಚಿತ್ರಗಳನ್ನು ಒಳಗೊಂಡಿತ್ತು.

ಆಸ್ಪತ್ರೆಯ ವಕ್ತಾರರು ಇಮೇಲ್‌ನಲ್ಲಿ ಹಸನ್‌ ಜಬರ್‌ ಅವರಿಗೆ ಡಿಸೆಂಬರ್‌ನಲ್ಲಿ ಎಚ್ಚರಿಕೆ ನೀಡಿದ್ದರು. ಹಿಂದಿನ ಘಟನೆಯನ್ನು ಅನುಸರಿಸಿ, ನಿಮ್ಮ ವೈಯಕ್ತಿಕ ಅಭಿಪ್ರಾಯಗಳನ್ನು ಕೆಲಸದ ಸ್ಥಳಕ್ಕೆ ತರಬೇಡಿ ಎಂದು ತಿಳಿಸಲಾಗಿತ್ತು. ಪುನಃ ಭಾಷಣ ಮಾಡಿದ್ದಕ್ಕಾಗಿ ಕೆಲಸದಿಂದ ವಜಾ ಮಾಡಲಾಗಿದೆ ಎಂದು ಆಸ್ಪತ್ರೆ ಮಂಡಳಿ ತಿಳಿಸಿದೆ.

ಗಾಜಾದ ಮೇಲೆ ಇಸ್ರೇಲ್ ನಡೆಸುತ್ತಿರುವ ದಾಳಿಯಿಂದ ಕಳೆದ ಎಂಟು ತಿಂಗಳಲ್ಲಿ 36,000 ಕ್ಕೂ ಹೆಚ್ಚು ಅಮಾಯಕರು ಮೃತರಾಗಿದ್ದಾರೆ ಎಂದು ಸ್ಥಳೀಯ ಆರೋಗ್ಯ ಸಚಿವಾಲಯ ಹೇಳಿದೆ. ದಾಳಿಯಿಂದ 20 ಲಕ್ಷಕ್ಕೂ ಹೆಚ್ಚು ಮಂದಿ ತಮ್ಮ ನೆಲೆ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...