ನಾಚಿಕೆಯಿಂದ ತಲೆ ತಗ್ಗಿಸುವಂತಾಗಿದೆ: ತಾಲಿಬಾನ್ ಸಚಿವರಿಗೆ ನೀಡಿದ ಸ್ವಾಗತಕ್ಕೆ ಜಾವೇದ್ ಅಖ್ತರ್ ಕಿಡಿ

Date:

2021ರಲ್ಲಿ ಅಫ್ಘನ್ ಸರ್ಕಾರವನ್ನು ಉರುಳಿಸಿ, ಅಧಿಕಾರವನ್ನು ತಾಲಿಬಾನ್ ವಶಕ್ಕೆ ಪಡೆದುಕೊಂಡ ಬಳಿಕ, ತಾಲಿಬಾನ್‌ನ ನಾಯಕರೊಬ್ಬರು ಇದೇ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡಿದ್ದಾರೆ. ಭಯೋತ್ಪಾದನೆ ವಿರುದ್ಧ ಇಡೀ ಜಗತ್ತಿಗೆ ಸಂದೇಶ ರವಾನಿಸಲು ನಿಯೋಗಗಳನ್ನು ಕಳಿಸಿದ್ದ ಭಾರತ ಸರ್ಕಾರವು, ತಾಲಿಬಾನ್ ಭಯೋತ್ಪಾದಕ ನಾಯಕರಿಗೆ ಸ್ವಾಗತ ಕೋರಿದ್ದನ್ನು ಖ್ಯಾತ ಗೀತರಚನೆಕಾರ ಜಾವೇದ್ ಅಖ್ತರ್ ಟೀಕಿಸಿದ್ದಾರೆ. ನನ್ನ ತಲೆ ನಾಚಿಕೆಯಿಂದ ತೂಗುತ್ತಿದೆ ಎಂದಿದ್ದಾರೆ.

ಅಫ್ಘನ್‌ನ ತಾಲಿಬಾನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಅವರು ಭಾರತಕ್ಕೆ ಭೇಟಿ ನೀಡಿದ್ದು, ಆರು ದಿನಗಳ ಪ್ರವಾಸದಲ್ಲಿದ್ದರು. ಶುಕ್ರವಾರ, ದೆಹಲಿಯಲ್ಲಿ ನಡೆದ ಮುತ್ತಕಿ ಅವರ ಪತ್ರಿಕಾಗೋಷ್ಠಿಯಲ್ಲಿ ಮಹಿಳಾ ಪತ್ರಕರ್ತರನ್ನು ಹೊರಗಿಡಲಾಗಿತ್ತು. ಇದು, ಕೇಂದ್ರ ಸರ್ಕಾರದ ವಿರುದ್ಧ ವ್ಯಾಪಕ ಟೀಕಿ-ಆಕ್ರೋಶಕ್ಕೆ ಕಾರಣವೂ ಆಗಿತ್ತು.

ಇದೀಗ, ಮುತ್ತಕಿಗೆ ಭಾರತ ಸರ್ಕಾರ ಸ್ವಾಗತ ಕೋರಿರುವ ಬಗ್ಗೆ ಮಾತನಾಡಿರುವ ಜಾವೇದ್ ಅಖ್ತರ್, “ಎಲ್ಲ ರೀತಿಯ ಭಯೋತ್ಪಾದಕರ ವಿರುದ್ಧ ಅಂತಾರಾಷ್ಟ್ರೀಯ ಮಟ್ಟದಲ್ಲಿ ವೇದಿಕೆ ಸಜ್ಜುಗೊಳಿಸ ಹೊರಟವರು, ವಿಶ್ವದ ಕೆಟ್ಟ ಭಯೋತ್ಪಾದಕ ಗುಂಪು ತಾಲಿಬಾನ್‌ನ ಪ್ರತಿನಿಧಿಗೆ ಗೌರವ ಮತ್ತು ಸ್ವಾಗತವನ್ನು ನೀಡಿದೆ. ಇದನ್ನು ನೋಡಿದಾಗ ನಾಚಿಕೆಯಿಂದ ನನ್ನ ತಲೆಯನ್ನು ನಾನೇ ನೇಣಿಗೇರಿಸಿಕೊಂಡಂತಾಗಿದೆ” ಎಂದು ಅಖ್ತರ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ಮಚಾಡೊಗೆ ನೊಬೆಲ್ ಶಾಂತಿ ಪ್ರಶಸ್ತಿ; ತನ್ನ ಅರ್ಥವನ್ನೇ ಕಳೆದುಕೊಂಡ ‘ಶಾಂತಿ’

ಮುತ್ತಕಿ ಅವರನ್ನು ಆಹ್ವಾನಿಸಿದ್ದ ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿರುವ ದಾರುಲ್ ಉಲೂಮ್ ದಿಯೋಬಂದ್ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿರುವ ಜಾವೇದ್, “ಹೆಣ್ಣು ಮಕ್ಕಳ ಶಿಕ್ಷಣವನ್ನು ಸಂಪೂರ್ಣವಾಗಿ ನಿಷೇಧಿಸಿದ ‘ಇಸ್ಲಾಮಿಕ್ ಮೂಲಭೂತವಾದಿ’ಗೆ ಇಷ್ಟೊಂದು ಗೌರವಯುತ ಸ್ವಾಗತ ನೀಡಿದ್ದಕ್ಕಾಗಿ ದಿಯೋಬಂದ್‌ಗೂ ನಾಚಿಕೆಯಾಗಬೇಕು. ನನ್ನ ಭಾರತೀಯ ಸಹೋದರ ಸಹೋದರಿಯರೇ ನಮಗೆ ಏನಾಗುತ್ತಿದೆ” ಎಂದು ಪ್ರಶ್ನಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...