ಯೆಮೆನ್ನಲ್ಲಿ ಜೈಲಿನಲ್ಲಿದ್ದ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರ ಮರಣದಂಡನೆ ಮಂಗಳವಾರ ರದ್ದುಗೊಂಡಿದೆ ಎಂದು ಸುದ್ದಿಗಳು ಹರಿದಾಡುತ್ತಿದೆ. ಇದು ಸುಳ್ಳು ಸುದ್ದಿ, ಮರಣದಂಡನೆ ರದ್ದುಗೊಂಡಿಲ್ಲ ಎಂದು ಅವರ ಸಹೋದರ ಹೇಳಿದ್ದಾರೆ.
ಪ್ರಿಯಾ ಅವರ ಶಿಕ್ಷೆಯನ್ನು ಸಂಪೂರ್ಣವಾಗಿ ರದ್ದುಪಡಿಸಲಾಗಿದೆ ಎಂದು ಭಾರತೀಯ ಗ್ರ್ಯಾಂಡ್ ಮುಫ್ತಿ ಕಚೇರಿ ಹೇಳಿಕೊಂಡಿತ್ತು ಎಂದು ಎಎನ್ಐ ವರದಿ ಮಾಡಿದೆ. ಅದಾದ ಬಳಿಕ ಮತ್ತೆ ಈ ಸುದ್ದಿ ಸುಳ್ಳು ಎಂದು ಎಎನ್ಐ ಮತ್ತೆ ವರದಿ ಮಾಡಿದೆ.
ಇದನ್ನು ಓದಿದ್ದೀರಾ? ಜು.16ರಂದು ಯೆಮೆನ್ನಲ್ಲಿ ಕೇರಳದ ನರ್ಸ್ ನಿಮಿಷಾ ಪ್ರಿಯಾಗೆ ಮರಣದಂಡನೆ: ಏನಿದು ಪ್ರಕರಣ?
ಸನಾದಲ್ಲಿ ನಡೆದ ಉನ್ನತ ಮಟ್ಟದ ಸಭೆಯು “ಹಿಂದೆ ತಾತ್ಕಾಲಿಕವಾಗಿ ಅಮಾನತುಗೊಳಿಸಲಾದ ಮರಣದಂಡನೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಲು” ನಿರ್ಧರಿಸಿದೆ ಎಂದು ಭಾರತೀಯ ಗ್ರ್ಯಾಂಡ್ ಮುಫ್ತಿ, ಕಾಂತಪುರಂ ಎ ಪಿ ಅಬುಬಕ್ಕರ್ ಮುಸ್ಲೈಯರ್ ಅವರ ಕಚೇರಿ ತಿಳಿಸಿದೆ ಎಂದು ವರದಿಯಾಗಿತ್ತು.
ಯೆಮೆನ್ ಪ್ರಜೆ ತಲಾಲ್ ಅಬ್ದೋ ಮೆಹ್ದಿ ಕೊಲೆ ಪ್ರಕರಣದಲ್ಲಿ ನಿಮಷಾ ದೋಷಿ ಎಂದು ನ್ಯಾಯಾಲಯ ಘೋಷಿಸಿದೆ. ಯೆಮೆನ್ ಪ್ರಜೆ ತಲಾಲ್ ಹತ್ಯೆ ಪ್ರಕರಣದಲ್ಲಿ 38 ವರ್ಷದ ನಿಮಿಷಾಗೆ 2020ರಲ್ಲಿ ಯೆಮೆನ್ ವಿಚಾರಣಾ ನ್ಯಾಯಾಲಯವು ಮರಣದಂಡನೆ ವಿಧಿಸಿತ್ತು.
ನಂತರ ಈ ತೀರ್ಪನ್ನು ದೇಶದ ಸುಪ್ರೀಂ ಜುಡಿಷಿಯಲ್ ಕೌನ್ಸಿಲ್ ನವೆಂಬರ್ 2023ರಲ್ಲಿ ಎತ್ತಿಹಿಡಿದಿದ್ದು, ಜುಲೈ 16ರಂದು ಯೆಮೆನ್ನಲ್ಲಿ ಗಲ್ಲು ಶಿಕ್ಷೆ ನಿಗದಿಯಾಗಿತ್ತು. ಆದರೆ ಸದ್ಯ ನಿಮಿಷಾ ಪ್ರಿಯಾಳ ಮರಣದಂಡನೆ ಮುಂದೂಡಿಕೆ ಮಾಡಲಾಗಿದೆ.





