ನೈಜೀರಿಯಾ | ಮನೆಗೆ ಮರಳಿದ ಅಪಹರಣಕ್ಕೊಳಗಾಗಿದ್ದ 250 ಶಾಲಾ ಮಕ್ಕಳು

Date:

ಮಾರ್ಚ್‌ 7ರಂದು ವಾಯವ್ಯ ನೈಜೀರಿಯಾದಲ್ಲಿ ಬಂದೂಕುಧಾರಿಗಳು ಅಪಹರಿಸಿದ್ದ 250ಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳು ಮನೆಗೆ ಮರಳಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನೈಜೀರಿಯಾದ ಕಡುನಾ ರಾಜ್ಯದ ಕುರಿಗಾದಲ್ಲಿ ಶಾಲಾ ಮಕ್ಕಳನ್ನು ಅಪಹರಿಸಲಾಗಿತ್ತು. ಇತ್ತೀಚಿನ ವರ್ಷಗಳಲ್ಲಿ ನಡೆದ ಅತಿದೊಡ್ಡ ಅಪಹರಣ ಇದಾಗಿತ್ತು. ರಾಷ್ಟ್ರೀಯ ಅಭದ್ರತೆಯ ಬಗ್ಗೆ ಆಕ್ರೋಶವೂ ವ್ಯಕ್ತವಾಗಿತ್ತು. ಇದೀಗ, ಆ ಎಲ್ಲ ಮಕ್ಕಳು ತಮ್ಮ ಮನೆಗಳಿಗೆ ಮರಳಿದ್ದಾರೆ.

“ಅಪಹರಣಕ್ಕೊಳಗಾದ ಕುರಿಗಾದಲ್ಲಿನ ಶಾಲಾ ಮಕ್ಕಳನ್ನು ಬಿಡುಗಡೆಗೊಂಡಿದ್ದಾರೆ. ಮಕ್ಕಳಿಗೆ ಯಾವುದೇ ಹಾನಿಯಾಗಿಲ್ಲ” ಎಂದು ಕಡುನಾ ರಾಜ್ಯದ ಗವರ್ನರ್ ಉಬಾ ಸಾನಿ ತಿಳಿಸಿದ್ದಾರೆ. ಆದರೆ, ಮಕ್ಕಳು ಹೇಗೆ ಬಿಡುಗಡೆಯಾದರು ಎಂಬುದನ್ನು ಗವರ್ನರ್ ವಿವರಿಸಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದು ನಿಜಕ್ಕೂ ಸಂತೋಷದ ದಿನ ಎಂದು ಹೇಳಿರುವ ಅವರು, ಸೈನ್ಯಕ್ಕೆ, ಅಧ್ಯಕ್ಷ ಬೋಲಾ ಅಹ್ಮದ್ ಟಿನುಬು, ರಾಷ್ಟ್ರೀಯ ಭದ್ರತಾ ಸಲಹೆಗಾರರು ಹಾಗೂ ಶಾಲಾ ಮಕ್ಕಳ ಮರಳುವಿಕೆಗಾಗಿ ಪ್ರಾರ್ಥಿಸಿದ ಎಲ್ಲ ನೈಜೀರಿಯನ್ನರಿಗೆ ಧನ್ಯವಾದ ತಿಳಿಸಿದ್ದಾರೆ.

ಸ್ಥಳೀಯವಾಗಿ ಡಕಾಯಿತರು ಎಂದು ಕರೆಯಲ್ಪಡುವ ಕೆಲ ಗುಂಪುಗಳು ಮಕ್ಕಳನ್ನು ಅಪಹರಿಸಿದ್ದವು. ಈ ಗುಂಪುಗಳು ಆಗಾಗ್ಗೆ ಹಳ್ಳಿಗಳಿಗೆ ನುಗ್ಗಿ ಲೂಟಿ ಮಾಡುತ್ತವೆ. ವಾಯುವ್ಯ ಮತ್ತು ಉತ್ತರ-ಮಧ್ಯ ನೈಜೀರಿಯಾದಲ್ಲಿ ಸುಲಿಗೆಗಾಗಿ ಸಾಮೂಹಿಕ ಅಪಹರಣ ನಡೆಸುತ್ತವೆ ಎಂದು ಹೇಳಲಾಗಿದೆ.

ವಿದ್ಯಾರ್ಥಿಗಳನ್ನು ಬಿಡುಗಡೆ ಮಾಡಲು ಅಪಹಾರಣಕಾರರು ಬೃಹತ್ ಮೊತ್ತದ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಆದರೆ, ಅಧ್ಯಕ್ಷ ಟಿನುಬು ಅವರು ಯಾವುದೇ ಹಣವನ್ನು ನೀಡದಂತೆ ಭದ್ರತಾ ಪಡೆಗಳಿಗೆ ಅದೇಶಿಸಿದ್ದರು ಎಂದು ಗವರ್ನರ್‌ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...