ನೈಜೀರಿಯಾ | ಇಂಧನ ಟ್ಯಾಂಕರ್ ಸ್ಫೋಟಗೊಂಡು 150ಕ್ಕೂ ಹೆಚ್ಚು ಮಂದಿ ಸಾವು

Date:

ಇಂಧನ ಟ್ಯಾಂಕರ್‌ ಸ್ಪೋಟಗೊಂಡು 150ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ದುರ್ಘಟನೆ ನೈಜೀರಿಯಾದ ಅಬುಜಾದಲ್ಲಿ ನಡೆದಿದೆ. ಬುಧವಾರ ಸಂಜೆ ಘಟನೆ ನಡೆದಿದ್ದು, ಸ್ಥಳದಲ್ಲಿಯೇ 100ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಹಲವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗುರುವಾರ ಮಧ್ಯಾಹ್ನದ ವೇಳೆಗೆ ಸಾವಿನ ಸಂಖ್ಯೆ 157ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಂಧನ ತುಂಬಿದ ಟ್ಯಾಂಕರ್‌ ನೈಜೀರಿಯಾದ ಕ್ಯಾನೊದಿಂದ ಉತ್ತರದ ಯೋಬೆಗೆ ತೆರಳುತ್ತಿತ್ತು. ಈ ವೇಳೆ, ಅಬುಜಾ ಸಮೀಪದ ಮಜಿಯಾ ಪಟ್ಟಣದ ಬಳಿ ಟ್ಯಾಂಕರ್ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಈ ವೇಳೆ, ಜನರು ಇಂಧನವನ್ನು ತುಂಬಿಕೊಳ್ಳಲು ಟ್ಯಾಂಕರ್‌ ಬಳಿ ದೌಡಾಯಿಸಿದ್ದಾರೆ. ಆ ಸಂದರ್ಭದಲ್ಲಿ ಟ್ಯಾಂಕರ್ ಸ್ಪೋಟಗೊಂಡಿದೆ” ಎಂದು ಪೊಲೀಸ್ ವಕ್ತಾರ ಲಾವನ್ ಶಿಸು ಆಡಮ್ ಹೇಳಿದ್ದಾರೆ.

ದುರ್ಘಟನೆಯ ಸ್ಥಳದಲ್ಲಿಯೇ 100ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಸಾಮೂಹಿಕ ಅಂತ್ಯಕ್ರಿಯೆ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಾವನ್ನಪ್ಪಿದ ಎಲ್ಲರೂ ಇಂಧನ ತುಂಬಿಕೊಳ್ಳಲು ಹೋಗಿರಲಿಲ್ಲ. ಟ್ಯಾಂಕರ್ ಪಲ್ಟಿಯಾದ ಪ್ರದೇಶದಲ್ಲಿ ವಾಸವಾಗಿದ್ದರು ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇದೊಂದು ದುಃಖಕರ ಸಂಗತಿ. ಸ್ಥಳದಲ್ಲಿ ಏನಾಗುತ್ತಿದೆ ಎಂಬುದು ಬಹಳಷ್ಟು ಜನರಿಗೆ ತಿಳಿದಿರಲಿಲ್ಲ. ಹೆಚ್ಚು ಬಡತನ, ಸೌಕರ್ಯಗಳ ಕೊರತೆ, ಇಂಧನ ಬೆಲೆ ಏರಿಕೆಯಿಂದ ಜನರು ಹತಾಶರಾಗಿದ್ದರು. ಹೀಗಾಗಿ, ಅವರು ಇಂಧನವನ್ನು ಸಂಗ್ರಹಿಸಿಲು ಹೋಗಿದ್ದು, ದುರಂತ ಅಂತ್ಯ ಕಂಡಿದ್ದಾರೆ” ಎಂದು ಅಲ್‌ಝಜೀರ ವರದಿ ಮಾಡಿದೆ.

ದುರ್ಘಟನೆಯಲ್ಲಿ ಬಜಾವಾದ ಆದಮು ಅಬ್ದುಲ್ಲಾಹಿ ಮಾಧ್ಯಮಗಳೊಂದಿಗೆ ಮಾತನಾಡಿದ್ದು, “ದುರ್ಘಟನೆ ನಡೆದಾದ ನಾನು ಅಲ್ಲಿಯೇ ಇದ್ದೆ. ನಾನು ಇಂಧನ ತೆಗೆದುಕೊಂಡು ಮನೆಗೆ ಹೋದೆ. ಮತ್ತೆ ಟ್ಯಾಂಕರ್ ಬಳಿಗೆ ಹೋಗಲು ಸಿದ್ಧನಾಗುವ ವೇಳೆಗೆ ದೊಡ್ಡ ಸ್ಫೋಟದ ಸದ್ದು ಕೇಳಿಸಿತು. ಟ್ಯಾಂಕರ್ ಸ್ಪೋಟಗೊಂಡಿತ್ತು” ಎಂದು ಹೇಳಿದ್ದಾರೆ.

ನೈಜೀರಿಯಾದಲ್ಲಿ ಸರಕುಗಳನ್ನು ಸಾಗಿಲು ರೈಲ್ವೆ ವ್ಯವಸ್ಥೆಯು ಉತ್ತಮವಾಗಿಲ್ಲದ ಕಾರಣ, ಹೆಚ್ಚಿನ ಸರಕುಗಳನ್ನು ರಸ್ತೆ ಮಾರ್ಗದಲ್ಲಿಯೇ ಸಾಗಿಸಲಾಗುತ್ತದೆ. ಪರಿಣಾಮ, ಹಲವಾರು ಅಪಘಾತಗಳು ಸಂಭವಿಸುವುದು ಆ ದೇಶದಲ್ಲಿ ಸಾಮಾನ್ಯವಾಗಿಹೋಗಿದೆ.

ಈ ವರದಿ ಓದಿದ್ದೀರಾ?: ಸರ್ಕಾರವನ್ನೇ ಖಾಸಗೀಕರಣಗೊಳಿಸುತ್ತಿರುವ ‘ಅರ್ಬನ್ ನಾಜಿ’ಗಳು!

ನೈಜೀರಿಯಾದ ಫೆಡರಲ್ ರೋಡ್ ಸೇಫ್ಟಿ ಕಾರ್ಪ್ಸ್ ಪ್ರಕಾರ, 2020ರಲ್ಲಿ ಬರೋಬ್ಬರಿ 1,531 ಪೆಟ್ರೋಲ್ ಟ್ಯಾಂಕರ್ ಅಪಘಾತಗಳು ನಡೆದಿವೆ. ಅಪಘಾತಗಳಲ್ಲಿ 535 ಸಾವುಗಳು ಮತ್ತು 1,142 ಮಂದಿಗೆ ಗಾಯಗಳಾಗಿವೆ.

ಕಳೆದ ತಿಂಗಳಷ್ಟೇ, ಜಾನುವಾರುಗಳನ್ನು ಸಾಗಿಸುತ್ತಿದ್ದ ಟ್ರಕ್‌ಗೆ ಇಂಧನ ಟ್ಯಾಂಕರ್ ಡಿಕ್ಕಿ ಹೊಡೆದು, ಟ್ಯಾಂಕರ್ ಸ್ಫೋಟಗೊಂಡಿತ್ತು. ಪರಿಣಾಮ, ಕನಿಷ್ಠ 48 ಮಂದಿ ಸಾವನ್ನಪ್ಪಿದ್ದರು. ಅಲ್ಲದೆ, 50 ಪ್ರಾಣಿಗಳು ಜೀವಂತವಾಗಿ ಸುಟ್ಟುಹೋಗಿದ್ದವು.

“ನೈಜೀರಿಯಾದಲ್ಲಿ ರಸ್ತೆ ಮೂಲಸೌಕರ್ಯವು ತುಂಬಾ ಕೆಟ್ಟ ಸ್ಥಿತಿಯಲ್ಲಿದೆ. ಹೆದ್ದಾರಿಯಲ್ಲಿಯೂ ರಸ್ತೆಗುಂಡಿಗಳು ತಾಂಡವಾಡುತ್ತಿವೆ. ಅವುಗಳನ್ನು ತಪ್ಪಿಸಲು ಚಾಲಕರು ಪ್ರಯತ್ನಿಸುವ ಕಸರತ್ತಿನಲ್ಲಿ ವಾಹನಗಳು ನಿಯಂತ್ರಣ ಕಳೆದುಕೊಂಡು, ಅಪಘಾತಗಳು ಸಂಭವಿಸುತ್ತಿವೆ” ಎಂದು ಅಲ್‌ಝಜೀರಾ ವರದಿಯಾರ ಇದ್ರಿಸ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...