ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಯುಎಇ ಅಧ್ಯಕ್ಷರಾಗಿ ಹಿದಾಯತ್‌ ಅಡ್ಡೂರು ಪುನರಾಯ್ಕೆ: ಪ್ರ. ಕಾರ್ಯದರ್ಶಿಯಾಗಿ ಮುಷ್ತಾಕ್ ಕದ್ರಿ

Date:

ತುಂಬೆ ಗ್ರೂಪ್ ಸ್ಥಾಪಕಾಧ್ಯಕ್ಷ ಡಾ. ತುಂಬೆ ಮೊಯಿದೀನ್ ಮುಖ್ಯ ಪೋಷಕರಾಗಿರುವ ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್ (BCCI) ಇದರ ವಾರ್ಷಿಕ ಮಹಾಸಭೆಯು ದುಬೈಯ ಜುಮೈರಾದ ಕ್ರೌನ್ ಪ್ಲಾಝಾ ಹೊಟೇಲಿನಲ್ಲಿ ನಡೆಯಿತು.

ಈ ವಾರ್ಷಿಕ ಮಹಾಸಭೆಯಲ್ಲಿ 2026–2028ರ ಅವಧಿಗೆ ಹಿದಾಯತ್‌ ಅಡ್ಡೂರು ಅವರನ್ನು ಎರಡನೇ ಬಾರಿಗೆ ಅಧ್ಯಕ್ಷರಾಗಿ ಪುನರಾಯ್ಕೆ ಮಾಡಲಾಯಿತು. ಅವರ ನೇತೃತ್ವದಲ್ಲಿ 2025ರ ಫೆಬ್ರವರಿಯಲ್ಲಿ ದುಬೈಯಲ್ಲಿ ನಡೆದ ‘ಬ್ಯಾರಿ ಸಮ್ಮೇಳನ’ವು ಯಶಸ್ವಿಯಾಗಿ ನಡೆದು, ಹೊಸ ಇತಿಹಾಸ ಸೃಷ್ಟಿಸಿತ್ತು.

ಬಿಸಿಸಿಐ ಇದರ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಮುಷ್ತಾಕ್ ಕದ್ರಿ, ಖಜಾಂಚಿಯಾಗಿ ಹಂಝಾ ಎ. ಖಾದರ್, ಸಂಚಾಲಕರಾಗಿ ಅಶ್ರಫ್ ಶಾ ಮಾಂತೂರು ಅವರನ್ನು ಆಯ್ಕೆ ಮಾಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉಪಾಧ್ಯಕ್ಷರಾಗಿ ಬಶೀರ್ ಕಿನ್ನಿಂಗಾರ್ ಹಾಗೂ ಅಬ್ದುಲ್ ರೌಫ್ ಅಬುಧಾಬಿ,  ಕಾರ್ಯದರ್ಶಿಯಾಗಿ ಅನ್ಸಾಫ್ ಆಯ್ಕೆಯಾಗಿದ್ದಾರೆ.
ಮಾಧ್ಯಮ ಮತ್ತು ಸಂವಹನ ಕಾರ್ಯದರ್ಶಿಯಾಗಿ ಅಲ್ತಾಫ್ ಎಂ., ಸಲಹೆಗಾರರಾಗಿ ಮೊಹಮ್ಮದ್ ಅಲಿ ಉಚ್ಚಿಲ್ ಹಾಗೂ ಅಶ್ರಫ್ ಬಾಳೆಹೊನ್ನೂರು ಅವರನ್ನು ಆಯ್ಕೆ ಮಾಡಲಾಯಿತು.

ಯುಎಇಯ ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ & ಇಂಡಸ್ಟ್ರಿ(BCCI) ಯುಎಇ ಘಟಕದ ಕಾರ್ಯಕಾರಿಣಿ ಸಮಿತಿಗೆ ಅನ್ವರ್ ಹುಸೈನ್ ಅಡ್ಡೂರು, ಸಲೀಂ ಮೂಡಬಿದ್ರೆ, ಸೂಫಿ ಅನ್ವರ್ ಹಾಗೂ ಶೋಯೆಬ್ ಅವರನ್ನು ಆಯ್ಕೆ ಮಾಡಲಾಯಿತು.

ಸಭೆಯು ಅಶ್ರಫ್ ಅವರ ಕಿರಾಅತ್ ಪಠಣದೊಂದಿಗೆ ಆರಂಭಗೊಂಡಿತು. ಅಶ್ರಫ್ ಶಾ ಮಾಂತೂರು ಸಭೆಯಲ್ಲಿದ್ದವರೆನ್ನೆಲ್ಲಾ ಆತ್ಮೀಯವಾಗಿ ಸ್ವಾಗತಿಸಿದರು. ಅನ್ವರ್ ಹುಸೈನ್ ಅಡ್ಡೂರು ಅವರು ಸಭೆಯಲ್ಲಿ ವಾರ್ಷಿಕ ವರದಿಯನ್ನು ವಾಚಿಸಿದರು. ಹಂಝಾ ಎ. ಖಾದರ್ ಅವರು ಲೆಕ್ಕ ಪತ್ರ ಮಂಡನೆ ಮಾಡಿದರು.

ಬಿಸಿಸಿಐಯಿಂದ ಬ್ಯಾರಿ ಉದ್ಯಮಿಗಳ ನೋಂದಣಿಗೆ ಅವಕಾಶ

ಯುಎಇಎಯಲ್ಲಿ ಉದ್ಯಮ ನಡೆಸುತ್ತಿರುವ ಬ್ಯಾರಿ ಸಮುದಾಯದ ಉದ್ಯಮಿಗಳು ಯುಎಇಯ ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ & ಇಂಡಸ್ಟ್ರಿ(BCCI)ಯಲ್ಲಿ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಹೊಸದಾಗಿ ಸೇರಲು ಬಯಸುವ ಉದ್ಯಮಿಗಳು BCCIಯನ್ನು ಸಂಪರ್ಕಿಸಬಹುದು.

ಹೊಸದಾಗಿ BCCIಗೆ ಸೇರಲು ಬಯಸುವವರು ಇ-ಮೇಲ್ ಮೂಲಕ ನೋಂದಾವಣೆ ಮಾಡಿಕೊಳ್ಳಬಹುದು: bcciemirates@gmail.com
ಹೊಸದಾಗಿ ಸೇರ್ಪಡೆಯಾಗುವ ಉದ್ಯಮಿಗಳ Business (ಉದ್ಯಮ) ಬೆಳವಣಿಗೆಗೆ ಬೇಕಾದ ಎಲ್ಲ ರೀತಿಯ ಶಕ್ತಿ ತುಂಬುವ, ಪ್ರೋತ್ಸಾಹ ನೀಡುವ ಕೆಲಸ ಕಾರ್ಯವನ್ನು  BCCI ಮಾಡಲಿದೆ.

Business Empowerment(ವ್ಯಾಪಾರ ಸಬಲೀಕರಣ), ಅದಕ್ಕೆ ಸಂಬಂಧಿಸಿದ ಈವೆಂಟ್ಸ್, ಸೆಮಿನಾರ್ಸ್, Business Promote (ವ್ಯವಹಾರ ಪ್ರೋತ್ಸಾಹ, ಪ್ರಚಾರ), ಹೊಸ ಉದ್ಯಮ(New Start-up) ಆರಂಭಿಸಲು ಬೇಕಾದ ಕಾರ್ಯ ತಂತ್ರವನ್ನು ಕೂಡ ಹೊಸದಾಗಿ ನೋಂದಣಿ ಮಾಡಿಕೊಳ್ಳುವ ಬ್ಯಾರಿ ಸಮುದಾಯದ ಉದ್ಯಮಿಗಳಿಗೆ ನೀಡಲು BCCI ಮುಂದಾಗಿದೆ.

AI (ಕೃತಕ ಬುದ್ಧಿಮತ್ತೆ ಆಧಾರಿತ ವ್ಯವಹಾರ)ಆಧಾರಿತ ಎಲ್ಲ ರೀತಿಯ ಹೊಸ ತಂತ್ರಜ್ಞಾನವನ್ನು ಬಳಸಿಕೊಂಡು ಉದ್ಯಮಿದಾರರ ಉದ್ಯಮವನ್ನು ಬೆಳೆಸಲು ಬೇಕಾದ ಕಾರ್ಯತಂತ್ರವನ್ನು ಅಳವಡಿಸಲು BCCI ಯೋಜನೆಯನ್ನು ರೂಪಿಸಿಕೊಂಡಿದೆ. ಜೊತೆಗೆ ಪ್ರಸಕ್ತ ವ್ಯವಹಾರ ಕ್ಷೇತ್ರದಲ್ಲಿ ಎದುರಿಸುತ್ತಿರುವ ಸವಾಲು(Business Challenges Scenario)ಗಳನ್ನು ಯಾವ ರೀತಿ ಎದುರಿಸಬೇಕು, ಉದ್ಯಮಿಗಳಿಗೆ ಆಗುತ್ತಿರುವ ಬೇರೆ ಬೇರೆ ರೀತಿಯ ಸಮಸ್ಯೆ, ತೊಂದರೆ  ಎಂಬಿತ್ಯಾದಿ ವಿಷಯಗಳ ಕುರಿತು ಕೂಡ ಉದ್ಯಮದಾರರಿಗೆ ಸಲಹೆ, ಸೂಚನೆಯನ್ನು ಬಿಸಿಸಿಐ ನೀಡಲಿದೆ.

ಈ ಹಿನ್ನೆಲೆಯಲ್ಲಿ ಯುಎಇಯಲ್ಲಿರುವ ಬ್ಯಾರಿ ಸಮುದಾಯದ ಎಲ್ಲ ಉದ್ಯಮಿಗಳು ಸಹಾಯ, ಸಹಕಾರ ನೀಡುವಂತೆ ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿ ಪ್ರಕಟಣೆಯಲ್ಲಿ ತಿಳಿಸಿದೆ.

1404974
eedina 6
ಈದಿನ NRI ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೌದಿ ಅರೇಬಿಯಾ | ಕೋವಿಡ್ ಬೂಸ್ಟರ್ ಡೋಸ್ ಲಸಿಕೆ ಪೂರ್ಣಗೊಳಿಸಲು ಆರೋಗ್ಯ ಸಚಿವಾಲಯ ಸೂಚನೆ

ಕೋವಿಡ್-19 ನಿಂದ ತಮ್ಮನ್ನು ರಕ್ಷಿಸಿಕೊಳ್ಳಲು ಎಲ್ಲ ವಯಸ್ಸಿನ ನಿವಾಸಿಗಳು ಮತ್ತು ವಲಸಿಗರು...

ಅನಿವಾಸಿ ಉದ್ಯಮಿ ಝಕರಿಯಾ ಜೋಕಟ್ಟೆಗೆ ರಾಜ್ಯೋತ್ಸವ ಪ್ರಶಸ್ತಿ: ಡಾ. ಆರತಿ ಕೃಷ್ಣರಿಂದ ಅಭಿನಂದನೆ

ಕರ್ನಾಟಕ ರಾಜ್ಯೋತ್ಸದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ಕೊಡಮಾಡುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ...