ಕರಾವಳಿಯಿಂದ ಮಸ್ಕತ್‌ಗೆ ತಲುಪಿದ ʻಪೆಪೆರೆ ಪೆಪೆ ಢುಂʼ ತಂಡ

Date:

ಕರಾವಳಿಯ ಕೊಂಕಣಿ ಸಂಗೀತ ಲೋಕದಲ್ಲಿ ಬ್ರಾಸ್ ಬ್ಯಾಂಡ್‌ ನ ಪ್ರಚಾರ ಹಾಗೂ ಉತ್ತೇಜನಕ್ಕಾಗಿ ‘ಆಮಿ ಆನಿ ಆಮ್ಚಿಂ’ ಸಂಘಟನೆಯ ಮೂಲಕ ಹುಟ್ಟಿಕೊಂಡ ʻಪೆಪೆರೆ ಪೆಪೆ ಢುಂʼ ಕಾರ್ಯಕ್ರಮವು ಇದೇ ಮೊದಲ ಬಾರಿಗೆ ಗಲ್ಫ್‌ ರಾಷ್ಟ್ರ ಒಂದರಲ್ಲಿ ಪ್ರದರ್ಶನ ನೀಡಲಿದೆ.

ಅಕ್ಟೋಬರ್‌ 10(ಇಂದು)ರಂದು ಒಮನ್‌ ದೇಶದ ರಾಜಧಾನಿ ಮಸ್ಕತ್‌ ನ ರುವಿಯ ಅಲ್‌ ಫಲಾಜ್‌ ಹೋಟೆಲ್‌ ನಲ್ಲಿ ಈ ಕಾರ್ಯಕ್ರಮದ ಎರಡನೇ ಆವೃತ್ತಿಯು ನಡೆಯಲಿದೆ.

1002626811

ಈಗಾಗಲೇ ಮಂಗಳೂರಿನಿಂದ 10 ಜನರ ಬ್ಲೂ ಬ್ರಾಸ್ ಬ್ಯಾಂಡ್ ವಾದಕರ ತಂಡ ಮತ್ತು 10 ಜನ ಆಮಿ ಆನಿ ಆಮ್ಚಿಂ ಸಂಘಟನೆಯ ಸದಸ್ಯರು ಮಸ್ಕತ್ ತಲುಪಿದ್ದು MCCP ಸಂಘಟನೆಯ ಪದಾಧಿಕಾರಿಗಳು ಅವರನ್ನು ರೂವಿ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1002626816

ಇಂದು ನಡೆಯಲಿರುವ ಈ ಸಂಗೀತ ಸ್ಪರ್ಧೆಯಲ್ಲಿ ‘ಮಸ್ಕತ್‌ ಚಿಂ ನಕ್ತಿರಾಂ’, ‘ದಬಕ್‌ ದಬಾ ಕಲಾಕಾರ್‌’, ‘ಗಾಂವ್ಚಿಂ ಮೊತಿಯಾಂ’ ಮತ್ತು ‘ತೆನ್ಕಾಂತ್ಲಿಂ ತಾಲೆಂತಾಂ’ ಎಂಬ ನಾಲ್ಕು ತಂಡಗಳು ಪ್ರಶಸ್ತಿಗಾಗಿ ಕಾದಾಡಲಿದ್ದು ವಿಜೇತ ತಂಡಕ್ಕೆ 1,000 ಒಮಾನಿ ರಿಯಲ್‌ (ಸುಮಾರು ರೂ. 2,30,000) ಮೊತ್ತದ ಪ್ರಶಸ್ತಿ ದೊರೆಯಲಿದ್ದು, ಉಳಿದ ಮೂರು ತಂಡಗಳಿಗೆ ತಲಾ 500 ಒಮಾನಿ ರಿಯಲ್‌ ( ಸುಮಾರು ರೂ. 1,15000) ಮೊತ್ತದ ಪ್ರಶಸ್ತಿಯನ್ನು ನೀಡಲಾಗುವುದು.

ಸಂತೋಷ್‌ ಡಿಕೋಸ್ತಾ, ರೀನ ಕ್ಯಾಸ್ಟಲಿನೊ ಮತ್ತು ಅರುಣ್‌ ಡಿಸೋಜಾ ಈ ಕಾರ್ಯಕ್ರಮದ ಕಾರ್ಯ ನಿರ್ವಹಣೆ ಮಾಡಲಿದ್ದಾರೆ.

1002626813

ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಅನಿವಾಸಿ ಭಾರತೀಯ ಉದ್ಯಮಿ ರೊನಾಲ್ಡ್ ಕೊಲಾಸೊ ಸಹಿತ ಸ್ಥಳೀಯ ಧರ್ಮಗುರು ವಂ. ಸ್ಟೀಫನ್ ಲುವಿಸ್, ಕೆಲರಾಯ್ ಚರ್ಚ್ ಧರ್ಮಗುರು ವಂ. ಸಿಲ್ವೆಸ್ಟರ್ ಡಿಕೊಸ್ಟಾ, ಯುಟಿ ಇಫ್ತಿಕಾರ್ ಫರೀದ್, ವಾಲ್ಟರ್ ನಂದಳಿಕೆ, ಅಲೆಕ್ಸಿಸ್ ಕ್ಯಾಸ್ಟಲಿನೊ ಮುಂತಾದವರು ಭಾಗವಹಿಸಲಿದ್ದಾರೆ.

ಈ ಕಾರ್ಯಕ್ರಮ ಹೌಸ್ ಫುಲ್ ಪ್ರದರ್ಶನ ಕಾಣುವ ಎಲ್ಲಾ ಸಾಧ್ಯತೆಗಳಿವೆ. ‘ಆಮಿ ಆನಿ ಆಮ್ಚಿಂ’ ತಂಡದ ಕಲ್ಪನೆಯ ʻಪೆಪೆರೆ ಪೆಪೆ ಢುಂʼ ಮೊದಲ ಆವೃತ್ತಿ ಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಒಟ್ಟು 20 ತಂಡಗಳು ಪಾಲ್ಗೊಂಡಿದ್ದು, ಬ್ರಾಸ್ ಬ್ಯಾಂಡ್ ಕಹಳೆ ಮನೆಮನೆಗೆ ತಲುಪಿಸುವ ಪ್ರಯತ್ನವು ಅತ್ಯಂತ ಯಶಸ್ವಿಯಾಗಿತ್ತು.

1002626810
1002626812
1002626814
eedina 6
ಈದಿನ NRI ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ದುಬೈ ರನ್’ನಲ್ಲಿ ಮಿಂಚಿದ ಬ್ಯಾರಿಗಳು: ಅತಿ ಉದ್ದನೆಯ ಯುಎಇ ಧ್ವಜದ ದೃಶ್ಯ ಹಂಚಿಕೊಂಡ ರಾಜಕುಮಾರ ಶೇಖ್ ಹಮ್ದಾನ್

ಆರೋಗ್ಯ, ಫಿಟ್‌ನೆಸ್ ಮತ್ತು ಮನರಂಜನೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಭಾನುವಾರ ದುಬೈನ...

ಸೌದಿ ಅರೇಬಿಯಾ | ಕೋವಿಡ್ ಬೂಸ್ಟರ್ ಡೋಸ್ ಲಸಿಕೆ ಪೂರ್ಣಗೊಳಿಸಲು ಆರೋಗ್ಯ ಸಚಿವಾಲಯ ಸೂಚನೆ

ಕೋವಿಡ್-19 ನಿಂದ ತಮ್ಮನ್ನು ರಕ್ಷಿಸಿಕೊಳ್ಳಲು ಎಲ್ಲ ವಯಸ್ಸಿನ ನಿವಾಸಿಗಳು ಮತ್ತು ವಲಸಿಗರು...