ಪಾಕ್ ಚುನಾವಣೆ : ನವಾಜ್ ಷರೀಫ್ ಗೆಲುವು, ಎಲ್ಇಟಿ ಮುಖ್ಯಸ್ಥ ಹಫೀಜ್ ಸಯೀದ್ ಪುತ್ರ ಸೋಲು

Date:

ಪಾಕಿಸ್ತಾನ ರಾಷ್ಟ್ರೀಯ ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದ್ದು,ಮುಂದಿನ ವಾರ ನೂತನ ಸರ್ಕಾರ ರಚನೆಯಾಗಲಿದೆ. ಪಾಕಿಸ್ತಾನ ಮುಸ್ಲಿಂ ಲೀಗ್-ನವಾಜ್(ಪಿಎಂಎಲ್‌ಎನ್) ಪಕ್ಷದ ಮುಖ್ಯಸ್ಥ ಹಾಗೂ ಮಾಜಿ ಪ್ರಧಾನಿ ನವಾಜ್ ಷರೀಫ್ ಲಾಹೋರ್‌ನಿಂದ 55 ಸಾವಿರಕ್ಕೂ ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಸದ್ಯದ ಫಲಿತಾಂಶದ ಪ್ರಕಾರ ನಾಲ್ಕು ಸ್ಥಾನಗಳಲ್ಲಿ ಗೆದ್ದು ಹಲವು ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿರುವ ಪಿಎಂಎಲ್‌ಎನ್‌ ಪಕ್ಷ ಹೆಚ್ಚಿನ ಸ್ಥಾನ ಗೆಲ್ಲಲಿವೆ ಎಂದು ಸಮೀಕ್ಷೆಗಳು ಹೇಳಿರುವ ಹಿನ್ನೆಲೆ ನವಾಜ್‌ ಷರೀಫ್ ಮುಂದಿನ ಪ್ರಧಾನಿಯಾಗಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಮುಂಬೈ ದಾಳಿಯ ರೂವಾರಿ ಎಲ್‌ಇಟಿ ಭಯೋತ್ಪಾದನೆ ಸಂಘಟನೆ ಮುಖ್ಯಸ್ಥ ಹಫೀಜ್ ಸಯೀದ್ ಪುತ್ರ ತಲ್ಹಾ ಸಹೀದ್ ಲಾಹೋರ್‌ ಕ್ಷೇತ್ರದಿಂದ ಪರಾಭವಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೇಸಿಗೆ ಬೇಗ ಬಂದಿದೆ; ಜೀವಜಲಕ್ಕೆ ತತ್ವಾರ ತಂದಿದೆ

ಫೆ.08 ರಂದು ಪಾಕ್‌ ದೇಶಾದ್ಯಂತ ಚುನಾವಣೆಗಳು ನಡೆದಿದ್ದವು. 12 ಕೋಟಿಗೂ ಹೆಚ್ಚು ಮತದಾರರು ಮತಪತ್ರದ ಮೂಲಕ ತಮ್ಮ ಹಕ್ಕು ಚಲಾಯಿಸಿದ್ದರು.

ರಾಷ್ಟ್ರೀಯ ಚುನಾವಣೆಯಲ್ಲಿ 12ಕ್ಕಿಂತ ಹೆಚ್ಚು ಪಕ್ಷಗಳು ಸ್ಪರ್ಧಿಸಿದ್ದರೂ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ ನೇತೃತ್ವದ ಪಿಟಿಐ, ನವಾಜ್ ಷರೀಫ್ ನೇತೃತ್ವದ ಪಿಎಂಎಲ್ಎನ್‌, ಬಿಲಾವಾಲ್ ಜರ್ದಾರಿ ಬಟ್ಟೋ ಅವರ ಪಿಪಿಪಿ ಪಕ್ಷಗಳು ಪ್ರಮುಖ ಸ್ಪರ್ಧಿಗಳಾಗಿವೆ.

ಚುನಾವಣೆಯಲ್ಲಿ ಹಲವು ದುರುಪಯೋಗ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಹಿಂಸಾಚಾರ ನಡೆಯುವ ಸಾಧ್ಯತೆಯಿರುವುದರಿಂದ ಇಂದು ನಡೆಯುತ್ತಿರುವ ಮತ ಎಣಿಕೆ ದಿನದಂದು ದೇಶಾದ್ಯಂತ ಇಂಟರ್‌ನೆಟ್‌ ಸಂಪರ್ಕವನ್ನು ಸ್ಥಗಿತಗೊಳಿಸಲಾಗಿದೆ. ಒಟ್ಟು 265 ರಾಷ್ಟ್ರೀಯ ಸ್ಥಾನಗಳಲ್ಲಿ ಸರ್ಕಾರ ರಚನೆಗೆ ಗೆಲ್ಲುವ ಪಕ್ಷ 133 ಸ್ಥಾನಗಳನ್ನು ಗಳಿಸಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...