ಇಂಧನ ಬಿಕ್ಕಟ್ಟು: ಪಾಕ್‌ನ ಸರ್ಕಾರಿ ಸ್ವಾಮ್ಯದ ನೌಕರರ ವೇತನದಲ್ಲಿ ಶೇ. 30ರಷ್ಟು ಕಡಿತ

Date:

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷದ ಪರಿಣಾಮವಾಗಿ ಎದುರಾಗಿರುವ ಇಂಧನ ಬಿಕ್ಕಟ್ಟನ್ನು ನಿಭಾಯಿಸಲು ಪಾಕಿಸ್ತಾನ ಸರ್ಕಾರವು ಕಠಿಣ ಆರ್ಥಿಕ ಮಿತವ್ಯಯ ಕ್ರಮಗಳನ್ನು ಕೈಗೊಂಡಿದೆ. ಸರ್ಕಾರಿ ಸ್ವಾಮ್ಯದ ಉದ್ದಿಮೆಗಳು ಮತ್ತು ಸ್ವಾಯತ್ತ ಸಂಸ್ಥೆಗಳ ನೌಕರರ ವೇತನದಲ್ಲಿ ಶೇಕಡಾ 5 ರಿಂದ 30ರವರೆಗೆ ಕಡಿತಗೊಳಿಸಲು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರು ಶನಿವಾರ ಅನುಮೋದನೆ ನೀಡಿದ್ದಾರೆ ಎಂದು ಪಿಟಿಐ ಮೂಲಗಳನ್ನು ಉಲ್ಲೇಖಿಸಿ ಟೈಮ್ಸ್‌ ಆಫ್‌ ಇಂಡಿಯಾ ವರದಿ ಮಾಡಿದೆ.

​ಪ್ರಧಾನಿ ಕಚೇರಿ ಹೊರಡಿಸಿರುವ ಹೇಳಿಕೆಯ ಪ್ರಕಾರ, ಇಂಧನ ಬೆಲೆಯಲ್ಲಿ ಆಗಿರುವ ತೀವ್ರ ಏರಿಕೆ ಮತ್ತು ಸರ್ಕಾರದ ವೆಚ್ಚವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಭೆಯ ತೀರ್ಮಾನದಂತೆ, ಸರ್ಕಾರಿ ನೌಕರರಂತೆಯೇ, ಸರ್ಕಾರದ ಆಶ್ರಯದಲ್ಲಿರುವ ಸರ್ಕಾರಿ ಸ್ವಾಮ್ಯದ ಉದ್ಯಮಗಳು ಮತ್ತು ಸ್ವಾಯತ್ತ ಸಂಸ್ಥೆಗಳ ನೌಕರರ ವೇತನದಲ್ಲಿ ಶೇ 5ರಿಂದ ಶೇ. 30 ರಷ್ಟು ಕಡಿತ ಇರಲಿದೆ. ಈ ಮಿತವ್ಯಯ ಕ್ರಮಗಳ ಮೂಲಕ ಉಳಿತಾಯವಾಗುವ ಹಣವನ್ನು ಕೇವಲ ‘ಸಾರ್ವಜನಿಕ ಪರಿಹಾರಕ್ಕಾಗಿ’ ಮಾತ್ರ ಬಳಸಲಾಗುವುದು ಎಂದು ಸರ್ಕಾರ ತಿಳಿಸಿದೆ.

​ಮುಂಬರುವ ಎರಡು ತಿಂಗಳ ಕಾಲ ಸರ್ಕಾರಿ ವಾಹನಗಳಿಗೆ ನೀಡುತ್ತಿರುವ ಇಂಧನ ಪ್ರಮಾಣದಲ್ಲಿ ಶೇ. 50ರಷ್ಟು ಕಡಿತ ಮಾಡಲಾಗುವುದು ಮತ್ತು ಈ ಅವಧಿಯಲ್ಲಿ ಶೇ. 60ರಷ್ಟು ಸರ್ಕಾರಿ ವಾಹನಗಳನ್ನು ರಸ್ತೆಗೆ ಇಳಿಸದಿರಲು ನಿರ್ಧರಿಸಲಾಗಿದೆ. ಈ ಕ್ರಮಗಳ ಮೇಲ್ವಿಚಾರಣೆಗಾಗಿ ಥರ್ಡ್-ಪಾರ್ಟಿ ಆಡಿಟ್(ಮೂರನೇ ವ್ಯಕ್ತಿಯ ಲೆಕ್ಕಪರಿಶೋಧನೆ) ನಡೆಸಲಾಗುವುದು ಎಂದು ಸಭೆಯಲ್ಲಿ ಅಧಿಕಾರಿಗಳಿಗೆ ತಿಳಿಸಲಾಗಿದೆ. ಅಲ್ಲದೆ, ನಿಗಮಗಳು ಮತ್ತು ಸಂಸ್ಥೆಗಳ ಆಡಳಿತ ಮಂಡಳಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರತಿನಿಧಿಗಳಿಗೆ ಇನ್ನು ಮುಂದೆ ಸಭೆಯಲ್ಲಿ ಭಾಗವಹಿಸುವ ಶುಲ್ಕ ನೀಡುವುದಿಲ್ಲ;ಬದಲಿಗೆ ಅದನ್ನು ಉಳಿತಾಯದ ಭಾಗವಾಗಿ ಪರಿಗಣಿಸಲಾಗುವುದು. ಸರ್ಕಾರದ ಹೊಸ ವಾಹನಗಳ ಖರೀದಿ ಹಾಗೂ ಇತರ ಎಲ್ಲಾ ಅನಗತ್ಯ ಖರೀದಿಗಳ ಮೇಲಿನ ಸಂಪೂರ್ಣ ನಿಷೇಧದ ಅನುಷ್ಠಾನದ ಕುರಿತೂ ಸಭೆಯಲ್ಲಿ ವಿವರಿಸಲಾಯಿತು ಎಂದು ಟೈಮ್ಸ್‌ ಆಫ್‌ ಇಂಡಿಯಾ ವರದಿಯಲ್ಲಿ ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

​ಮಿತವ್ಯಯ ಯೋಜನೆಯಡಿ, ಸಂಪುಟ ಸದಸ್ಯರು, ಮಂತ್ರಿಗಳು, ಸಲಹೆಗಾರರು ಮತ್ತು ವಿಶೇಷ ಸಹಾಯಕರ ಮುಂದಿನ ಎರಡು ತಿಂಗಳ ವೇತನವನ್ನೂ ‘ಸಾರ್ವಜನಿಕ ಕಲ್ಯಾಣದ ಉಳಿತಾಯವಾಗಿ’ ಬಳಸಲಾಗುವುದು. ಇದರೊಂದಿಗೆ, ಸರ್ಕಾರಿ ಅಧಿಕಾರಿಗಳು, ಸಚಿವರು, ರಾಜ್ಯ ಸಚಿವರು ಹಾಗೂ ವಿಶೇಷ ಸಹಾಯಕರ ವಿದೇಶಿ ಪ್ರವಾಸದ ಮೇಲೆ ಹೇರಿರುವ ಸಂಪೂರ್ಣ ನಿಷೇಧವು ಮುಂದೆಯೂ ಜಾರಿಯಲ್ಲಿರಲಿದೆ ಎಂದು ಪ್ರಧಾನಿ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

​ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದ ಆರ್ಥಿಕ ಪರಿಣಾಮಗಳನ್ನು ಪಾಕಿಸ್ತಾನವು ಈಗಾಗಲೇ ಅನುಭವಿಸುತ್ತಿದೆ. ಕಳೆದ ಶುಕ್ರವಾರವಷ್ಟೇ ಪೆಟ್ರೋಲಿಯಂ ಬೆಲೆಯನ್ನು ಪ್ರತಿ ಲೀಟರ್‌ಗೆ 55 ರೂ.ಗಳಷ್ಟು ಹೆಚ್ಚಿಸಲಾಯಿತು, ಇದು ಇಂಧನ ಬಳಕೆಯನ್ನು ನಿಯಂತ್ರಿಸುವ ಕ್ರಮಗಳನ್ನು ಪರಿಚಯಿಸಲು ಸರ್ಕಾರವನ್ನು ಪ್ರೇರೇಪಿಸಿತು. ಇದಕ್ಕೂ ಮೊದಲು, ಅಧಿಕೃತ ವಾಹನಗಳಿಗೆ ಎರಡು ತಿಂಗಳ ಕಾಲ ಇಂಧನ ಹಂಚಿಕೆಯನ್ನು ಶೇ. 50ರಷ್ಟು ಕಡಿಮೆ ಮಾಡುವುದು, ಈ ಅವಧಿಯಲ್ಲಿ ಶೇ. 60ರಷ್ಟು ಸರ್ಕಾರಿ ವಾಹನಗಳನ್ನು ರಸ್ತೆಯಿಂದ ತೆಗೆಯುವುದು ಮತ್ತು ಸರ್ಕಾರಿ ಕಚೇರಿಗಳಿಗೆ ವಾರಕ್ಕೆ ನಾಲ್ಕು ದಿನಗಳ ಕೆಲಸದ ಅವಧಿಯನ್ನು ಪರಿಚಯಿಸುವಂತಹ ಕ್ರಮಗಳನ್ನು ಸರ್ಕಾರ ಜಾರಿ ಮಾಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....