ಮತ್ತೊಂದು ಪ್ರಕರಣದಲ್ಲಿ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಹಾಗೂ ಪತ್ನಿಗೆ 14 ವರ್ಷ ಜೈಲು

Date:

ಭ್ರಷ್ಟಾಚಾರ ಪ್ರಕರಣದಲ್ಲಿ ಪಾಕ್ ನ್ಯಾಯಾಲಯ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ ಹಾಗೂ ಪತ್ನಿ ಬುಶ್ರಾ ಬಿಬಿ ಅವರಿಗೆ 14 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ.

ರಾಷ್ಟ್ರೀಯ ಚುನಾವಣೆಗಳಿಗೆ ಕೆಲವು ದಿನಗಳು ಇರುವಾಗ ತೀರ್ಪು ಪ್ರಕಟವಾಗಿದ್ದು, ನಿನ್ನೆಯಷ್ಟೆ ದೇಶದ ರಹಸ್ಯ ಸೋರಿಕೆ ಪ್ರಕರಣದಲ್ಲಿ ಇಮ್ರಾನ್ ಖಾನ್‌  ಅವರಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು.

“ನಮ್ಮ ನ್ಯಾಯಾಂಗ ವ್ಯವಸ್ಥೆಯ ಇತಿಹಾಸದಲ್ಲಿ ಮತ್ತೊಂದು ಕರಾಳ ದಿನವಾಗಿದ್ದು, ಇದು ಛಿದ್ರವಾಗಿದೆ” ಎಂದು ಇಮ್ರಾನ್‌ ಅವರ ಪಿಟಿಐ ಪಕ್ಷದ ವಕ್ತಾರರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಗಸ್ಟ್‌ನಿಂದ ಬಂಧನಕ್ಕೊಳಗಾಗಿರುವ ಇಮ್ರಾನ್‌ ಖಾನ್‌ ಅವರ ಶಿಕ್ಷೆಗಳನ್ನು ಏಕಕಾಲದಲ್ಲಿ ವಿಧಿಸಬೇಕೆ ಎಂಬುದು ತಕ್ಷಣಕ್ಕೆ ಸ್ಪಷ್ಟವಾಗಿಲ್ಲ. ಆದರೂ ಪತ್ನಿಯೊಂದಿಗೆ ನಡೆದ ವಿಚಾರಣೆಯಲ್ಲಿ ಇಮ್ರಾನ್‌ ಅವರಿಕೆ ಶಿಕ್ಷೆ ವಿಧಿಸಲಾಗಿದೆ. ಇಮ್ರಾನ್ ಸದ್ಯ ಶಿಕ್ಷೆ ಅನುಭವಿಸುತ್ತಿದ್ದು,ಪತ್ನಿ ಬುಶ್ರಾ ಬಿಬಿಯನ್ನು ಬಂಧಿಸಲಾಗಿಲ್ಲ ಎಂದು ಆರೋಪಿಗಳ ಪರ ವಕೀಲರು ತಿಳಿಸಿದ್ದಾರೆ.

ಇಮ್ರಾನ್‌ ಖಾನ್ ಹಾಗೂ ಬಿಬಿ 2018ರಲ್ಲಿ ಪ್ರಧಾನಿಯಾಗಿ ಆಯ್ಕೆಯಾಗುವ ಮುನ್ನ ವಿವಾಹವಾಗಿದ್ದರು. ಬಿಬಿ ಆಧ್ಯಾತ್ಮ ಪರಿಣಿತಳಾಗಿದ್ದು, ಧಾರ್ಮಿಕ ಮಾರ್ಗದರ್ಶನ ನೀಡುವ ಸಂದರ್ಭದಲ್ಲಿ ಭೇಟಿಯಾಗಿ ನಂತರ ವಿವಾಹವಾಗಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಆಯಾ ಕುಮಾರ್, ಗಯಾ ಕುಮಾರ್’- ಅವರೇ ನಿತೀಶ್ ಕುಮಾರ್

ಫೆ.08ರಂದು ಪಾಕಿಸ್ತಾನದಲ್ಲಿ ರಾಷ್ಟ್ರೀಯ ಚುನಾವಣೆಗಳು ನಡೆಯಲಿದ್ದು 12 ಕೋಟಿಗೂ ಹೆಚ್ಚು ಮಂದಿ ಮತ ಚಲಾಯಿಸಲಿದ್ದಾರೆ. ಇಮ್ರಾನ್‌ ಖಾನ್ ಹಾಗೂ ಪಿಟಿಐ ಪಕ್ಷ ಪ್ರಚಾರದಿಂದ ಹೊರಗುಳಿದಿದ್ದರೂ ಚುನಾವಣೆಯಲ್ಲಿ ಚರ್ಚೆಯ ಕೇಂದ್ರಬಿಂದುವಾಗಿದೆ.

ಇಮ್ರಾನ್‌ ಖಾನ್ ಅವನ್ನು ಚುನಾವಣೆಯಿಂದ ನಿಷೇಧಿಸಲಾಗಿದ್ದು, ಅವರ ಪಕ್ಷ ಪಿಟಿಐ ಪಕ್ಷವನ್ನು ಮೂಲೆ ಗುಂಪು ಮಾಡಲಾಗುತ್ತಿದೆ ಎನ್ನಲಾಗುತ್ತಿದೆ. ಆದಾಗ್ಯೂ ಚುನಾವಣೆಯ ಮತಯಂತ್ರದಲ್ಲಿ ಈಗಾಗಲೇ ದುರುಪಯೋಗ ಆರೋಪ ಕೇಳಿಬಂದಿದೆ.

ಇವೆಲ್ಲದರ ನಡುವೆಯೂ ಅನ್ಯಾಯದ ವಿರುದ್ಧ ಫೆ.08ರಂದು ತಮ್ಮ ಪಕ್ಷಕ್ಕೆ ಮತದಾನ ಮಾಡಿ ಸೇಡು ತೀರಿಸಿಕೊಳ್ಳುವಂತೆ ಇಮ್ರಾನ್‌ ಮತದಾರರಿಗೆ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...