ಪಾಕಿಸ್ತಾನ | ಶಿಕ್ಷಣ ನೀತಿಗಳ ವಿರುದ್ಧ ‘ಜೆನ್ ಝಡ್’ ಪ್ರತಿಭಟನೆ; ಪಿಒಕೆ ಉದ್ವಿಗ್ನ

Date:

ಪಾಕಿಸ್ತಾನ ಸರ್ಕಾರದ ಶಿಕ್ಷಣ ನೀತಿಗಳ ವಿರುದ್ಧ ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಭಾದ ವಿದ್ಯಾರ್ಥಿಗಳು ಪ್ರತಿಭಟನೆಗೆ ಇಳಿದಿದ್ದಾರೆ. ಶೆಹಬಾಜ್ ಷರೀಫ್ ಅವರ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ. ವಿದ್ಯಾರ್ಥಿಗಳ ಜನರಲ್ ಝಡ್ (ಜೆನ್ ಝಡ್) ಪ್ರತಿಭಟನೆಯಿಂದಾಗಿ ಪಿಒಕೆ ಉದ್ವಿಗ್ನಗೊಂಡಿದೆ.

ವಿಶ್ವವಿದ್ಯಾಲಯಗಳ ದುಬಾರಿ ಶುಲ್ಕಗಳು ಮತ್ತು ದೋಷಪೂರಿತ ಪರೀಕ್ಷಾ ಪ್ರಕ್ರಿಯೆಯನ್ನು ಖಂಡಿಸಿ ಪಾಕ್ ಸರ್ಕಾರದ ವಿರುದ್ಧ ವಿದ್ಯಾರ್ಥಿಗಳು ಶಾಂತಿಯುತ ಪ್ರತಿಭಟನೆ ಆರಂಭಿಸಿದ್ದರು. ಆದರೆ, ಕೆಲವು ವ್ಯಕ್ತಿಗಳು ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿದ್ದು ಒಬ್ಬ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇದರಿಂದಾಗಿ, ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ.

ಈ ಹಿಂದೆ, ತೆರಿಗೆ ಪರಿಹಾರ, ಅಗ್ಗದ ವಿದ್ಯುತ್ ಮತ್ತು ಅಭಿವೃದ್ಧಿ ಯೋಜನೆಗಳು ಹಾಗೂ ಆರ್ಥಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕೆಂದು ಪಿಒಕೆ ಪ್ರದೇಶದಲ್ಲಿ ಬೃಹತ್ ಪ್ರತಿಭಟನೆ ನಡೆದಿತ್ತು. ಇದೀಗ, ವಿದ್ಯಾರ್ಥಿಗಳ ಪ್ರತಿಭಟನೆ ಭುಗಿಲೆದ್ದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿದ್ಯಾರ್ಥಿಗಳ ಪ್ರತಿಭಟನೆ ಯಾಕಾಗಿ?
ಮುಜಫರಾಬಾದ್‌ನಲ್ಲಿರುವ ‘ಆಜಾದ್ ಜಮ್ಮು ಮತ್ತು ಕಾಶ್ಮೀರ ವಿಶ್ವವಿದ್ಯಾಲಯ’ದಲ್ಲಿ (ಯುಎಜೆಕೆ) ಮೆಟ್ರಿಕ್ಯುಲೇಷನ್ ಮತ್ತು ಮಧ್ಯಂತರ ಹಂತಗಳಲ್ಲಿ ನಡೆಯುವ ಪರೀಕ್ಷೆಗಳನ್ನು ಮೌಲ್ಯಮಾಪನಕ್ಕೆ ಹೊಸ ಡಿಜಿಟಲ್ ಮೌಲ್ಯಮಾಪನ ವ್ಯವಸ್ಥೆಯನ್ನು ಪರಿಚಯಿಸಲಾಗಿತ್ತು.ಅಲ್ಲದೆ, ಆರು ತಿಂಗಳ ವಿಳಂಬದ ಬಳಿಕ ಪರೀಕ್ಷಾ ಫಲಿತಾಂಶವನ್ನು ಯುಎಜೆಕೆ ಪ್ರಕಟಿಸಿತ್ತು. ಅದರಲ್ಲಿ, ಹಲವು ವಿದ್ಯಾರ್ಥಿಗಳು ಅನಿರೀಕ್ಷಿತವಾಗಿ ಕಡಿಮೆ ಅಂಕ ಪಡೆದಿದ್ದರು. ಮರುಮೌಲ್ಯಮಾಪನ ಬಯುಸವವರು ಪ್ರತಿ ವಿಷಯಕ್ಕೆ 1,500 ರೂ. ಶುಲ್ಕ ಪಾವತಿಸಬೇಕೆಂದು ಸೂಚಿಸಲಾಗಿತ್ತು.

ಈ ಲೇಖನ ಓದಿದ್ದೀರಾ?: ಉಮಾಶ್ರೀ ಬಾಳಿಗೆ ತಿರುವು ಕೊಟ್ಟ ‘ಒಡಲಾಳ’; ಸವೆಸಿದ ಹಾದಿ ಹೇಗಿತ್ತು ಗೊತ್ತೇ?

ಪರಿಣಾಮವಾಗಿ, ಹೊಸ ಮೌಲ್ಯಮಾಪನ ವ್ಯವಸ್ಥೆ, ತೀವ್ರ ಶುಲ್ಕ ಹೆಚ್ಚಳ ಹಾಗೂ ಪರೀಕ್ಷಾ ಫಲಿತಾಂಶಗಳಲ್ಲಿ ವ್ಯತ್ಯಾಸಗಳ ವಿರುದ್ಧ ಯುಎಜೆಕೆ ವಿದ್ಯಾರ್ಥಿಗಳು ನವೆಂಬರ್ ಆರಂಭದಲ್ಲಿ ಪ್ರತಿಭಟನೆ ಆರಂಭಿಸಿದ್ದರು. ಆದರೆ, ಪ್ರತಿಭಟನೆ ವೇಳೆ, ವ್ಯಕ್ತಿಯೊಬ್ಬ ವಿದ್ಯಾರ್ಥಿಳ ಮೇಲೆ ಗುಂಡು ಹಾರಿಸಿದ್ದು, ಪ್ರತಿಭಟನೆಯನ್ನು ತೀವ್ರಗೊಳಿಸಿದೆ.

ಈ ಪ್ರತಿಭಟನೆಗಳು ಪಿಒಕೆಯಲ್ಲಿ ಮಾತ್ರವಲ್ಲದೆ ಪಾಕಿಸ್ತಾನದ ಉಳಿದ ಭಾಗಗಳಿಗೂ ವ್ಯಾಪಿಸುವ ಆಂತಕವಿದೆ. ಹೀಗಾಗಿ, ಷರೀಫ್ ಸರ್ಕಾರವು ಪ್ರತಿಭಟನೆಗಳನ್ನು ಹತ್ತಿಕ್ಕಲು ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲು ನೋಡುತ್ತಿದೆ ಎಂದು IANS ವರದಿ ಮಾಡಿದೆ.

ಪಿಒಕೆಯಲ್ಲಿನ ಅಶಾಂತಿಯು ನೇಪಾಳದಲ್ಲಿ ನಡೆದ ಜನರಲ್ ಝಡ್ ಪ್ರತಿಭಟನೆಯನ್ನು ಹೋಲುತ್ತದೆ. ಅಲ್ಲಿ ಸರ್ಕಾರ ಸಾಮಾಜಿಕ ಮಾಧ್ಯಮಗಳ ಮೇಲೆ ನಿರ್ಬಂಧ ಹೇರಿದ ಬಳಿಕ, ವಿದ್ಯಾರ್ಥಿಗಳು ಸರ್ಕಾರದ ಭ್ರಷ್ಟಾಚಾರ ಮತ್ತು ಅವಕಾಶಗಳ ಕೊರತೆ ಹಾಗೂ ಅಭಿವೃದ್ಧಿ ವೈಫಲ್ಯದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದ್ದರು. ಪರಿಣಾಮ, ಪ್ರಧಾನಿ ಕೆ.ಪಿ ಒಲಿ ಶರ್ಮಾ ಅವರು ರಾಜೀನಾಮೆ ನೀಡಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...