ಇಸ್ಲಾಮಾಬಾದ್ ದಾಳಿ ಹಿಂದೆ ಭಾರತದ ಕೈವಾಡವೆಂದು ಪಾಕ್ ಆರೋಪ; ಆಧಾರರಹಿತವೆಂದ ಕೇಂದ್ರ ಸರ್ಕಾರ

Date:

ಮಂಗಳವಾರ (ನ.11), ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಭಯೋತ್ಪಾದಕ ದಾಳಿ ನಡೆದಿದ್ದು, ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ. ಈ ದಾಳಿಯ ಹಿಂದೆ ಭಾರತದ ಬೆಂಬಲವಿದೆ ಎಂದು ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಆರೋಪಿಸಿದ್ದಾರೆ. ಈ ಆರೋಪವನ್ನು ಭಾರತ ಸರ್ಕಾರ ತಿರಸ್ಕರಿಸಿದೆ. “ಪಾಕಿಸ್ತಾನದ ಭ್ರಮನಿರಸನಗೊಂಡ ನಾಯಕತ್ವವು ತಮ್ಮ ಮನೆಯಲ್ಲಿ ನಡೆಯುತ್ತಿರುವ ಕೃತ್ಯಗಳಲ್ಲಿ ಹೊಣೆಗಾರಿಕೆಯಿಂದ ದೂರವಿರಲು ‘ಆಧಾರಹಿತ, ಸತ್ಯಕ್ಕೆ ದೂರವಾದ’ ಹೇಳಿಕೆಗಳನ್ನು ನೀಡುತ್ತಿದೆ” ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.

ಪಾಕ್ ರಾಜಧಾನಿ ಇಸ್ಲಾಮಾಬಾದ್‌ನ ಜಿಲ್ಲಾ ನ್ಯಾಯಾಲಯ ಆವರಣದ ಗೇಟ್‌ ಬಳಿ ಭೀಕರ ಸ್ಪೋಟ ಸಂಭವಿಸಿದೆ. ಇದನ್ನು ಆತ್ಮಹತ್ಯಾ ದಾಳಿ ಎಂದು ಹೇಳಲಾಗಿದೆ. ಈ ದಾಳಿಯ ಹಿಂದೆ ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ಕೈವಾಡವಿದೆ. ಭಾರತ ಸರ್ಕರದ ಪ್ರಾಯೋಜಕತ್ವವಿದೆ ಎಂದು ಪ್ರಧಾನಿ ಷರೀಫ್ ಹೇಳಿಕೆ ನೀಡಿದ್ದಾರೆ. ಆದರೆ, ಟಿಟಿಪಿ ಈ ದಾಳಿಯ ಹೊಣೆಗಾರಿಕೆಯನ್ನು ನಿರಾಕರಿಸಿದೆ ಎಂದು ವರದಿಯಾಗಿದೆ.

 ಷರೀಫ್‌ ಅವರ ಆರೋಪವನ್ನು ಭಾರತದ ವಿದೇಶಾಂಗ ಸಚಿವಾಲಯವು ತಳ್ಳಿಹಾಕಿದೆ. ಸಚಿವಾಲಯದ ವಕ್ತಾರ ವಕ್ತಾರ ರಣಧೀರ್ ಜೈಸ್ವಾಲ್ ಅವರು, “ಸ್ಪಷ್ಟವಾಗಿ ಭ್ರಮನಿರಸನಗೊಂಡ ಪಾಕಿಸ್ತಾನಿ ನಾಯಕತ್ವವು ಮಾಡುತ್ತಿರುವ ಆಧಾರರಹಿತ ಆರೋಪಗಳನ್ನು ಭಾರತ ನಿಸ್ಸಂದಿಗ್ಧವಾಗಿ ತಿರಸ್ಕರಿಸುತ್ತದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ಹರಿಯಾಣದ ಮತದಾರೆ ‘ಬ್ರೆಜಿಲ್ ಮಾಡೆಲ್’ ಯಾರು ಗೊತ್ತೇ?

ಪಾಕ್ ಸೇನಾ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ ಅವರಿಗೆ ಹೆಚ್ಚಿನ ಅಧಿಕಾರ ಮತ್ತು ಕಾನೂನು ವಿನಾಯಿತಿ ನೀಡುವ ಪ್ರಸ್ತಾಪವನ್ನು ಪಾಕಿಸ್ತಾನದ ಸೆನೆಟ್ ಸೋಮವಾರ ಅಂಗೀಕರಿಸಿದೆ. ಈ ವಿವಾದಾತ್ಮಕ ಸಾಂವಿಧಾನಿಕ ತಿದ್ದುಪಡಿಯನ್ನು ಉಲ್ಲೇಖಿಸಿರುವ ಜೈಸ್ವಾಲ್, “ಪಾಕಿಸ್ತಾನದ ನಾಯಕತ್ವವು ತಮ್ಮ ಮನೆಯಲ್ಲಿ ‘ನಡೆಯುತ್ತಿರುವ ಸಾಂವಿಧಾನಿಕ ಉಲ್ಲಂಘನೆ’ಯಿಂದ ಜನರ ಚಿತ್ತವನ್ನು ಬೇರೆಡೆ ಸೆಳೆಯಲು ಪ್ರಯತ್ನಿಸುತ್ತಿದೆ” ಎಂದು ಆರೋಪಿಸಿದ್ದಾರೆ.

“ದೇಶದೊಳಗೆ ಮಿಲಿಟರಿ ಪ್ರೇರಿತ ಸಾಂವಿಧಾನಿಕ ವಿಧ್ವಂಸಕತೆ ಮತ್ತು ಅಧಿಕಾರ ದಬ್ಬಾಳಿಕೆ ನಡೆಸಲು ಅಲ್ಲಿನ ಸರ್ಕಾರ ಮುಂದಾಗಿದೆ. ಅದಕ್ಕಾಗಿ, ತಿದ್ದುಪಡಿಗಳನ್ನು ತರುತ್ತಿದೆ. ಈ ಸಾಂವಿಧಾನಿಕ ಉಲ್ಲಂಘನೆಗಳನ್ನು ಜನರು ಪ್ರಶ್ನಿಸದಂತೆ ತಡೆಯಲು, ಸಾರ್ವಜನಿಕರ ಗಮನವನ್ನು ಬೇರೆಡೆಗೆ ಸೆಳೆಯಲು ಭಾರತದ ವಿರುದ್ಧ ಸುಳ್ಳು ನಿರೂಪಣೆಗಳನ್ನು ರೂಪಿಸುತ್ತಿದೆ. ಆದರೆ, ಪಾಕ್‌ನ ಧೋರಣೆ ಬಗ್ಗೆ ಅಂತರರಾಷ್ಟ್ರೀಯ ಸಮುದಾಯವು ಚೆನ್ನಾಗಿ ತಿಳಿದಿದೆ. ಪಾಕಿಸ್ತಾನದ ಹತಾಶ ದಿಕ್ಕು ತಪ್ಪಿಸುವ ತಂತ್ರಗಳಿಂದ ಜಗತ್ತು ದಾರಿ ತಪ್ಪುವುದಿಲ್ಲ” ಎಂದು ಅವರು ಹೇಳಿದ್ದಾರೆ.

ದೆಹಲಿಯ ಕೆಂಪು ಕೋಟೆಯ ಬಳಿಯೂ ಸೋಮವಾರ ಕಾರೊಂದು ಸ್ಪೋಟಗೊಂಡಿದೆ. ಘಟನೆಯಲ್ಲಿ ಕನಿಷ್ಠ 13 ಜನರು ಸಾವನ್ನಪ್ಪಿದ್ದಾರೆ. ಈ ಘಟನೆಯ ಮರುದಿನವೇ ಇಸ್ಲಾಮಾಬಾದ್‌ನಲ್ಲಿ ಸ್ಪೋಟ ನಡೆದಿದೆ. ದೆಹಲಿಯಲ್ಲಾದ ಘಟನೆಗೆ ಬಿಜೆಪಿಗರು ಮತ್ತು ಹಲವು ಮಾಧ್ಯಮಗಳು ಪಾಕಿಸ್ತಾನ ಮತ್ತು ಮುಸ್ಲಿಮರನ್ನು ದೂಷಿಸುತ್ತಿದ್ದಾರೆ. ಪಾಕಿಸ್ತಾನದಲ್ಲಾದ ಘಟನೆಗೆ ಅಲ್ಲಿನ ನಾಯಕತ್ವವು ಭಾರತ ಸರ್ಕಾರವನ್ನು ಟೀಕಿಸುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...