ಪಾಕಿಸ್ತಾನ | ಇಸ್ಲಾಮಾಬಾದ್‌, ರಾವಲ್ಪಿಂಡಿಯಲ್ಲಿ ಇಂಟರ್‌ನೆಟ್‌ ಸ್ಥಗಿತ

Date:

ಪಾಕಿಸ್ತಾನ ಸರ್ಕಾರವು ಶುಕ್ರವಾರದಂದು ರಾಜಧಾನಿ ಇಸ್ಲಾಮಾಬಾದ್ ಮತ್ತು ರಾವಲ್ಪಿಂಡಿಯಲ್ಲಿ ಮೊಬೈಲ್ ಮತ್ತು ಇಂಟರ್‌ನೆಟ್‌ ಸೇವೆಗಳನ್ನು ಸ್ಥಗಿತಗೊಳಿಸಿದೆ. ಇಸ್ಲಾಮಿಕ್ ಪಕ್ಷವಾದ ಟಿಎಲ್‌ಪಿ ಯೋಜಿಸಿರುವ ಪ್ರತಿಭಟನೆಗೆ ಮುನ್ನ ರಾಜಧಾನಿಯ ಪ್ರವೇಶ ಮತ್ತು ನಿರ್ಗಮನ ಮಾರ್ಗಗಳನ್ನು ಮುಚ್ಚಲಾಗಿದೆ.

ಗುರುವಾರದಂದು ಲಾಹೋರ್ ನಗರದಲ್ಲಿ ಕಾನೂನು ಜಾರಿ ಅಧಿಕಾರಿಗಳು ಮತ್ತು ಟಿಎಲ್‌ಪಿ ಸದಸ್ಯರ ನಡುವಿನ ಹಿಂಸಾತ್ಮಕ ಘರ್ಷಣೆಯಿಂದ ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇಸ್ರೇಲ್ ವಿರೋಧಿ ಪ್ರತಿಭಟನೆಯ ಹಿನ್ನಲೆಯಲ್ಲಿ ಈ ಘರ್ಷಣೆಗಳು ನಡೆದಿವೆ. ಟಿಎಲ್‌ಪಿ ಶುಕ್ರವಾರದಂದು ಇಸ್ಲಾಮಾಬಾದ್‌ನಲ್ಲಿರುವ ಅಮೆರಿಕಾ ರಾಯಭಾರ ಕಚೇರಿಯ ಹೊರಗೆ ಪ್ರತಿಭಟನೆ ನಡೆಸಲು ಘೋಷಿಸಿದ ನಂತರ, ಪಂಜಾಬ್ ಪೊಲೀಸರು ಟಿಎಲ್‌ಪಿ ಮುಖ್ಯಸ್ಥ ಸಾದ್ ಹುಸೇನ್ ರಿಜ್ವಿಯನ್ನು ಬಂಧಿಸಲು ಲಾಹೋರ್‌ನಲ್ಲಿರುವ ಟಿಎಲ್‌ಪಿ ಪ್ರಧಾನ ಕಚೇರಿಯ ಮೇಲೆ ದಾಳಿ ನಡೆಸಿದ್ದಾರೆ.

ಇಂಟರ್ನೆಟ್ ಮತ್ತು ರಸ್ತೆಗಳು ಬಂದ್
ಗೃಹ ಸಚಿವಾಲಯವು ಪಾಕಿಸ್ತಾನ ಟೆಲಿಕಾಮ್ಯುನಿಕೇಷನ್ ಅಥಾರಿಟಿ (ಪಿಟಿಎ)ಗೆ ಶುಕ್ರವಾರದ ಮಧ್ಯರಾತ್ರಿಯಿಂದ ಇಸ್ಲಾಮಾಬಾದ್ ಮತ್ತು ರಾವಲ್ಪಿಂಡಿಯಲ್ಲಿ ಮೊಬೈಲ್ ಮತ್ತು ಇಂಟರ್‌ನೆಟ್ ಸೇವೆಗಳನ್ನು ಅನಿರ್ದಿಷ್ಟಾವಧಿಗೆ ಸ್ಥಗಿತಗೊಳಿಸುವಂತೆ ಸೂಚಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸಂವಿಧಾನ ಬದಲಿಸುವ ಸನಾತನಿಗಳ ಹುನ್ನಾರಕ್ಕೆ ವಕೀಲರೇ ದಾಳ

ಪಂಜಾಬ್ ಸರ್ಕಾರವು ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯಾದ್ಯಂತ 144 ಸೆಕ್ಷನ್ ಜಾರಿಗೊಳಿಸಿದ್ದು, 10 ದಿನಗಳ ಕಾಲ ಎಲ್ಲ ರೀತಿಯ ಪ್ರತಿಭಟನೆಗಳು, ರ‍್ಯಾಲಿಗಳು ಮತ್ತು ಸಾರ್ವಜನಿಕ ಸಭೆಗಳನ್ನು ನಿಷೇಧಿಸಿದೆ. ಪಂಜಾಬ್ ಗೃಹ ಇಲಾಖೆಯ ಅಧಿಸೂಚನೆಯ ಪ್ರಕಾರ, ಸಾರ್ವಜನಿಕ ಸ್ಥಳಗಳು, ಬೀದಿಗಳು ಮತ್ತು ತೆರೆದ ಪ್ರದೇಶಗಳಲ್ಲಿ ನಾಲ್ಕು ಅಥವಾ ಹೆಚ್ಚಿನ ಜನರ ಸಭೆಗಳನ್ನು ನಿಷೇಧಿಸಲಾಗಿದೆ. ಆದರೆ, ಈ ನಿರ್ಬಂಧವು ಪ್ರಾರ್ಥನೆ, ಮದುವೆ, ಅಂತ್ಯಕ್ರಿಯೆ, ಕಚೇರಿಗಳು ಅಥವಾ ನ್ಯಾಯಾಲಯದ ಆವರಣಕ್ಕೆ ಅನ್ವಯಿಸುವುದಿಲ್ಲ. ಜೊತೆಗೆ, ಆಯುಧಗಳ ಪ್ರದರ್ಶನ ಮತ್ತು ಲೌಡ್‌ಸ್ಪೀಕರ್‌ಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ರಾವಲ್ಪಿಂಡಿಯಲ್ಲಿ 144 ಸೆಕ್ಷನ್ ಈಗಾಗಲೇ ಅಕ್ಟೋಬರ್ 11 ರವರೆಗೆ ಜಾರಿಯಲ್ಲಿದೆ. ಇಸ್ಲಾಮಾಬಾದ್‌ನಲ್ಲಿ, ಎಲ್ಲ ಪ್ರಮುಖ ಪ್ರವೇಶ ಮಾರ್ಗಗಳನ್ನು ಬಂದ್ ಮಾಡಲಾಗಿದೆ. ಕೆಂಪು ವಲಯವನ್ನು ಸಂಪೂರ್ಣವಾಗಿ ಮುಚ್ಚಲಾಗಿದೆ. ಟಿಎಲ್‌ಪಿಯು ದೊಡ್ಡ ಪ್ರಮಾಣದ ಪ್ರತಿಭಟನೆಗೆ ಸಜ್ಜಾಗುತ್ತಿರುವ ಕಾರಣ ಕಾನೂನು ಜಾರಿ ಸಂಸ್ಥೆಗಳು ಕಟ್ಟೆಚ್ಚರ ವಹಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...