ಪಾಕಿಸ್ತಾನ | ಸಾರ್ವತ್ರಿಕ ಚುನಾವಣೆಯ ನಡುವೆಯೇ ಮೊಬೈಲ್ ಸೇವೆ ಕಡಿತಗೊಳಿಸಿದ ಸರ್ಕಾರ

Date:

ಪಾಕಿಸ್ತಾನದಲ್ಲಿ ಇಂದು ಸಾರ್ವತ್ರಿಕ ಚುನಾವಣಾ ದಿನದಂದೇ ರಾಷ್ಟ್ರವ್ಯಾಪಿ ಮೊಬೈಲ್ ಫೋನ್ ಸೇವೆಗಳನ್ನು ಸ್ಥಗಿತಗೊಳಿಸಿರುವುದಾಗಿ ವರದಿಯಾಗಿದೆ. ಸರ್ಕಾರದ ಈ ಕ್ರಮವು ಮತ್ತಷ್ಟು ಆತಂಕಕ್ಕೆ ದೂಡಿದೆ. ಇದು ಪ್ರಜಾಪ್ರಭುತ್ವ ವಿರೋಧಿ ನಡೆ ಎಂದು ಸಾಮಾಜಿಕ ಕಾರ್ಯಕರ್ತರು ದೂರಿದ್ದಾರೆ.

ಚುನಾವಣೆ ಆರಂಭಗೊಂಡ ಕೆಲವೇ ಗಂಟೆಗಳಲ್ಲಿ ಈ ನಿರ್ಧಾರ ಪ್ರಕಟಿಸಿರುವ ಆಂತರಿಕ ಸಚಿವಾಲಯವು, “ಇತ್ತೀಚಿಗೆ ದೇಶದಲ್ಲಿ ನಡೆದಿರುವ ಸಶಸ್ತ್ರ ದಾಳಿಗಳಲ್ಲಿ ಸಾಕಷ್ಟು ಅಮೂಲ್ಯ ಜೀವಗಳನ್ನು ಕಳೆದುಕೊಂಡಿದ್ದೇವೆ, ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯನ್ನು ಕಾಪಾಡಿಕೊಳ್ಳಲು ಮತ್ತು ಸಂಭಾವ್ಯ ಬೆದರಿಕೆಗಳನ್ನು ಎದುರಿಸಲು ಭದ್ರತಾ ಕ್ರಮಗಳು ಅತ್ಯಗತ್ಯ. ಹಾಗಾಗಿ ಮೊಬೈಲ್ ಸೇವೆಯನ್ನು ತಾತ್ಕಾಲಿಕವಾಗಿ ರದ್ದು ಮಾಡಲಾಗಿದೆ” ಎಂದು ಹೇಳಿದೆ.

paka

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚುನಾವಣೆಗೂ ಮುನ್ನಾದಿನವಾದ ಬುಧವಾರದಂದು ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಎರಡು ಬಾಂಬ್ ಸ್ಫೋಟ ನಡೆದಿತ್ತು. ಈ ಘಟನೆಯಲ್ಲಿ 28 ಜನರು ಸಾವನ್ನಪ್ಪಿದ್ದರು. ಇಂದು ಕೂಡ ದಾಳಿ ನಡೆದಿದ್ದು, ಭದ್ರತಾ ಸಿಬ್ಬಂದಿಯೋರ್ವರು ಮೃತಪಟ್ಟಿರುವುದಾಗಿ ವರದಿಯಾಗಿದೆ.

ಹಿಂಸಾಚಾರದ ಉಲ್ಬಣದ ಮಧ್ಯೆ ಭದ್ರತೆಯನ್ನು ಹೆಚ್ಚಿಸಲು ಪಾಕಿಸ್ತಾನವು ಇರಾನ್ ಮತ್ತು ಅಫ್ಘಾನಿಸ್ತಾನದೊಂದಿಗಿನ ಕೆಲವು ಭೂ ಗಡಿಗಳನ್ನು ತಾತ್ಕಾಲಿಕವಾಗಿ ಮುಚ್ಚಿದೆ.

ಜೈಲಿನಿಂದಲೇ ಮತ ಚಲಾಯಿಸಿದ ಮಾಜಿ ಪ್ರಧಾನಿ ಇಮ್ರಾನ್ ಖಾನ್

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್ ಸೇರಿದಂತೆ ಇತರ ಪ್ರಮುಖ ಬಂಧಿತ ರಾಜಕೀಯ ವ್ಯಕ್ತಿಗಳು ಅಂಚೆ ಮತಪತ್ರದ ಮೂಲಕ ಜೈಲಿನಿಂದಲೇ ಮತ ಚಲಾಯಿಸಿದ್ದಾರೆ ಎಂದು ವರದಿಯಾಗಿದೆ.

ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರು ತಮ್ಮ ಬೆಂಬಲಿಗರಿಗೆ ಮತದಾನದ ನಂತರ ಫಲಿತಾಂಶಗಳನ್ನು ಪ್ರಕಟಿಸುವವರೆಗೆ ಮತಗಟ್ಟೆಗಳ ಹೊರಗೆ ಕಾಯುವಂತೆ ಕರೆ ನೀಡಿದ ನಂತರ ಮೊಬೈಲ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

ಗುರುವಾರ ಬೆಳಗ್ಗೆ 8 ಗಂಟೆಗೆ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಸಂಜೆ 5 ಗಂಟೆಗೆ ಮುಕ್ತಾಯಗೊಳ್ಳಲಿದೆ. ಆದರೆ, ಕೆಲವು ಕಡೆಗಳಲ್ಲಿ ಮಧ್ಯಾಹ್ನ ಎರಡು ಗಂಟೆಯಾದರೂ ಮತದಾನ ಪ್ರಕ್ರಿಯೆ ಆರಂಭಗೊಂಡಿಲ್ಲ ಎಂಬ ದೂರುಗಳು ಕೂಡ ಕೇಳಿಬಂದಿದೆ. ಮತಪತ್ರಗಳನ್ನು ಹಾಕುವ ಮತಪೆಟ್ಟಿಗೆಗಳು ಮತದಾನ ಕೇಂದ್ರಕ್ಕೆ ಬಂದಿದ್ದರೂ ಕೂಡ ಸಿಬ್ಬಂದಿಗಳೇ ಬಂದಿಲ್ಲ ಎಂದು ಆರೋಪಿಸಿ ಕೆಲ ನಾಗರಿಕರು ತಮ್ಮ ಕಚೇರಿಯ ಇಂಟರ್‌ನೆಟ್ ಸೇವೆ ಬಳಸಿ ಟ್ವೀಟ್ ಮಾಡುತ್ತಿರುವುದಾಗಿ ಪಾಕ್ ಮಾಧ್ಯಮಗಳು ವರದಿ ಮಾಡಿದೆ.

“ಇಂಟರ್‌ನೆಟ್ ಸೇವೆಗಳನ್ನು ಅಮಾನತು ಮಾಡಿರುವುದರಿಂದ ಮೊದಲ ಬಾರಿಗೆ ಮತದಾನ ಮಾಡುತ್ತಿರುವವರಿಗೆ ಸಮಸ್ಯೆಯಾಗಿದೆ. ಅಭ್ಯರ್ಥಿಗಳ ಚುನಾವಣಾ ಚಿಹ್ನೆ, ಹೆಸರು ನೋಡಲು ಅಪ್ಲಿಕೇಶನ್‌ ಮತ್ತು ವೆಬ್‌ಸೈಟ್‌ಗಳನ್ನು ಬಳಸುತ್ತಿದ್ದರು. ಈಗ ಅವರು ಗೊಂದಲಕ್ಕೀಡಾಗಿದ್ದಾರೆ” ಎಂದು ಡಾಟಾ ಸಂಸ್ಥೆಯೊಂದು ಮಾಹಿತಿ ನೀಡಿದೆ.

ಪಾಕಿಸ್ತಾನದ ನ್ಯಾಷನಲ್ ಅಸೆಂಬ್ಲಿಯು ಒಟ್ಟು 336 ಸ್ಥಾನಗಳನ್ನು ಒಳಗೊಂಡಿದ್ದು, 265 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. ಒಂದು ಕ್ಷೇತ್ರದಲ್ಲಿ ಅಭ್ಯರ್ಥಿಯೊಬ್ಬರ ಕೊಲೆಯಾದ ಕಾರಣ ಅಲ್ಲಿ ಚುನಾವಣೆಯನ್ನು ಮುಂದೂಡಲಾಗಿದೆ. ಉಳಿದ 60 ಸ್ಥಾನಗಳನ್ನು ಮಹಿಳೆಯರಿಗೆ ಹಾಗೂ 10 ಸ್ಥಾನಗಳನ್ನು ಮುಸ್ಲಿಮೇತರರಿಗೆ ಮೀಸಲಿಡಲಾಗಿದೆ.

ಇದನ್ನು ಓದಿದ್ದೀರಾ? 40 ಪರ್ಸೆಂಟ್ ಕಮಿಷನ್ ಯಥಾಸ್ಥಿತಿ ಮತ್ತೆ ಮುಂದುವರೆದಿದೆ: ಡಿ ಕೆಂಪಣ್ಣ ಆರೋಪ

ಪಾಕಿಸ್ತಾನ ಚುನಾವಣಾ ಆಯೋಗದ ಪ್ರಕಾರ, ‘4,807 ಪುರುಷರು, 312 ಮಹಿಳೆಯರು ಮತ್ತು ಇಬ್ಬರು ಲಿಂಗತ್ವ ಅಲ್ಪಸಂಖ್ಯಾತರು ಸೇರಿ 5,121 ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದಾರೆ.

ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರು ಜೈಲಿನಲ್ಲಿರುವ ಕಾರಣ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ಪಕ್ಷವು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮುವ ಸಾಧ್ಯತೆ ಹೆಚ್ಚಾಗಿದೆ. 74 ವರ್ಷದ ಷರೀಫ್ ದಾಖಲೆಯ ನಾಲ್ಕನೇ ಬಾರಿಗೆ ಪ್ರಧಾನಿ ಪಟ್ಟಕ್ಕೇರುವ ಹುಮ್ಮಸ್ಸಿನಲ್ಲಿದ್ದಾರೆ. ಫೆ.22ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...