ಪಿತೃಪ್ರಭುತ್ವಕ್ಕೆ ಸೆಡ್ಡು: ತಾಯಿಗೆ 2ನೇ ಮದುವೆ ಮಾಡಿಸಿದ ಪಾಕಿಸ್ತಾನಿ ಬಾಲಕ

Date:

ಪಾಕಿಸ್ತಾನದ ಹುಡುಗನೊಬ್ಬ ತನ್ನ ದೃಢ ಮತ್ತು ನಿಸ್ವಾರ್ಥ ನಿರ್ಧಾರಕ್ಕಾಗಿ ನೆಟ್ಟಿಗರ ಗಮನ ಸೆಳೆದಿದ್ದಾನೆ. ಆತ ತನ್ನ ಒಬ್ಬಂಟಿಯಾಗಿದ್ದ ತಾಯಿಗೆ 2ನೇ ಮದುವೆ ಮಾಡಿಸಿದ್ದಾನೆ. ತನ್ನ ತಾಯಿ ಮತ್ತೆ ಸಾಂಗತ್ಯ ಜೀವನ ಪಡೆದುಕೊಳ್ಳುವಂತೆ ಮಾಡಿದ್ದಾನೆ.

ಇದು ಭಾರತ ಮತ್ತು ಪಾಕಿಸ್ತಾನದಂತಹ ಪಿತೃಪ್ರಧಾನ/ಪಿತೃಪ್ರಭುತ್ವ ಸಮಾಜದಲ್ಲಿ ಗಂಭೀರ ನಡೆಯಾಗಿದೆ. ಪುರುಷರು ಒಂದಕ್ಕಿಂತ ಹೆಚ್ಚು ಮದುವೆಯಾದರೂ ಸಮಸ್ಯೆಯಿಲ್ಲ. ಆದರೆ, ಹೆಣ್ಣು ಮಾತ್ರ ಒಬ್ಬನನ್ನು ಮಾತ್ರವೇ ಮದುವೆಯಾಗಬೇಕು. ಪತಿ ಸತ್ತ ನಂತರವೂ ಆತನ ನೆನಪಿನಲ್ಲೇ ಜೀವನ ದೂಡಬೇಕು. ಮತ್ತೊಂದು ಮದುವೆಯಾಗಬಾರದು ಎಂಬಂತಹ ಅಲಿಖಿತ ನಿಯಮವನ್ನು ಪಿತೃಪ್ರಭುತ್ವದ ವ್ಯವಸ್ಥೆಯಲ್ಲಿ ಹೇರಲಾಗಿದೆ. ಈ ವ್ಯವಸ್ಥೆಯಲ್ಲಿ ಮರುವಿವಾಹವಾಗಲು ಮುಂದಾಗುವ ವಿಧವೆಯರು ಅಥವಾ ವಿಚ್ಛೇದಿತ ಮಹಿಳೆಯರನ್ನು ದೂಷಿಸಲಾಗುತ್ತದೆ. ಕಳಂಕಿತರಂತೆ ನೋಡಲಾಗುತ್ತದೆ. ಇಂತಹ ಧೋರಣೆಯ ವಿರುದ್ಧ ಬಾಲಕ ಸೆಡ್ಡುಹೊಡೆದು ನಿಂತಿದ್ದು, ಹಲವರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ. ಬಾಲಕನ ನಿರ್ಧಾರವನ್ನು ನೆಟ್ಟಿಗರು ಅತ್ಯುತ್ತಮ ನಡೆ ಎಂದು ಶ್ಲಾಘಿಸಿದ್ದಾರೆ.

ಆ ಚಿಕ್ಕ ಬಾಲಕ ಸಮಾಜದಲ್ಲಿನ ಪಿತೃಪ್ರಭುತ್ವ ಧೋರಣೆಯನ್ನು ಧಿಕ್ಕರಿಸಿದ್ದಾನೆ. ಸಮಾಜಿನ ಅಲಿಖಿತ ನಿಯಮಗಳಿಗೆ ಸವಾಲು ಹಾಕಿದ್ದಾನೆ. ತಾಯಿ ಏಕಾಂಗಿ ಜೀವನ ದೂಡಬಾರದು, ಆಕೆಯೂ 2ನೇ ಮದುವೆಯಾಗಲು ಸ್ವತಂತ್ರಳೆಂದು ಆಕೆಗೆ ವಿವಾಹ ಮಾಡಿಸಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಾಲಕ ತನ್ನ ತಾಯಿಗೆ 2ನೇ ಮದುವೆ ಮಾಡಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ತನ್ನ ತಾಯಿಗೆ ಮದುವೆ ಮಾಡಿಸಿದ ಹುಡುಗನನ್ನು ಅಬ್ಲುಲ್ ಅಹದ್ ಎಂದು ಗುರುತಿಸಲಾಗಿದೆ. ಬಾಲಕನ ನಿರ್ಧಾರವನ್ನು ಶ್ಲಾಘಿಸಿದ ನೆಟ್ಟಿಗರು, “ನೀವು ಆಕೆಗಾಗಿ ಮಾಡಬಹುದಾದ ಅತ್ಯುತ್ತಮ ಕೆಲಸ” ಎಂದು ಕಾಮೆಂಟ್ ಮಾಡಿದ್ದಾರೆ.

“ಈ ವಯಸ್ಸಿನಲ್ಲಿ ಆತನ ಬಹಳ ಸಂವೇದನಾಶೀಲ ಮತ್ತು ಭಾವನಾತ್ಮಕವಾಗಿ ಸವಾಲಿನ ನಿರ್ಧಾರ” ಎಂದು ಕೆಲವರು ಹೇಳಿದ್ದಾರೆ. “ಇದು ಕಠಿಣ ನಿರ್ಧಾರ, ಆದರೆ ನೀವು ಅದನ್ನು ಉತ್ತಮವಾಗಿ ಮಾಡಿದ್ದೀರಿ. ನಿಮ್ಮ ತಾಯಿಯ ಭವಿಷ್ಯ ಮತ್ತು ಜೀವನದ ಬಗ್ಗೆ ಯೋಜಿಸುವ ನೀವು ಒಬ್ಬ ಒಳ್ಳೆಯ ಮಗ” ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...