ಪ್ಯಾಲೆಸ್ತೀನ್ ಪ್ರದೇಶದಲ್ಲಿ ಅಲ್‌ ಜಝೀರಾ ಸುದ್ದಿವಾಹಿನಿ ಪ್ರಸಾರಕ್ಕೆ ತಡೆ

Date:

ಪ್ಯಾಲೆಸ್ತೀನ್ ಪ್ರದೇಶಗಳಲ್ಲಿ ಖತರ್ ಮೂಲದ ಅಲ್ ಜಝೀರಾ ಸುದ್ದಿವಾಹಿನಿಯ ಪ್ರಸಾರವನ್ನು ಅಮಾನತುಗೊಳಿಸಿ ಪ್ಯಾಲೆಸ್ತೀನ್ ಪ್ರಾಧಿಕಾರ ಗುರುವಾರ ಆದೇಶ ಹೊರಡಿಸಿದೆ.

ಅಲ್‌ ಜಝೀರಾ ಪ್ರಸಾರ ಮಾಡುವ ವಿಷಯಗಳು ಪ್ರಚೋದನಕಾರಿಯಾಗಿವೆೆ ಎಂದು ಹೇಳಿದೆ. ತಪ್ಪು ಮಾಹಿತಿ, ಪ್ರಚೋದಿಸುವಿಕೆ ಹಾಗೂ ದೇಶದ್ರೋಹವನ್ನು ಎಸಗಿದ್ದಕ್ಕಾಗಿ ಮತ್ತು ಪ್ಯಾಲೆಸ್ತೀನ್‌ನ ಆಂತರಿಕ ವ್ಯವಹಾರಗಳಲ್ಲಿ ಹಸ್ತಕ್ಷೇಪಗಳನ್ನು ನಡೆಸಿದ್ದಕ್ಕಾಗಿ ಅಲ್‌ ಜಝೀರಾ ಸುದ್ದಿವಾಹಿನಿಯ ಪ್ರಸಾರವನ್ನು ಅಮಾನತಿನಲ್ಲಿರಿಸಲಾಗಿದೆಯೆಂದು ಪ್ಯಾಲೆಸ್ತೀನ್ ನ ಆಂತರಿಕ ವ್ಯವಹಾರಗಳಲ್ಲಿ ಹಸ್ತಕ್ಷೇಪಗಳನ್ನು ನಡೆಸಿದ್ದಕ್ಕಾಗಿ ಅಲ್‌ ಜಝೀರಾ ಸುದ್ದಿವಾಹಿನಿಯ ಪ್ರಸಾರವನ್ನು ಅಮಾನತಿನಲ್ಲಿರಿಸಲಾಗಿದೆಯೆಂದು ಪ್ಯಾಲೆಸ್ತೀನ್ ನ ಅಧಿಕೃತ ಸುದ್ದಿಸಂಸ್ಥೆ ವಾಫಾ ಬುಧವಾರ ಸಂಜೆ ವರದಿ ಮಾಡಿದೆ.

ರಮಲ್ಲಾದಲ್ಲಿರುವ ಅಲ್‌ ಜಝೀರಾ ಉದ್ಯೋಗಿಯೊಬ್ಬರು ಕೂಡಾ ಪ್ಯಾಲೆಸ್ತೀನ್ ಪ್ರಾಧಿಕಾರವು ಸುದ್ದಿವಾಹಿನಿಯ ಪ್ರಸಾರವನ್ನು ಅಮಾನತುಗೊಳಿಸಿರುವುದನ್ನು ದೃಢಪಡಿಸಿದ್ದಾರೆ ಎಂದು ವಾಫಾ ವರದಿ ತಿಳಿಸಿದೆ. ಪ್ಯಾಲೆಸ್ತೀನ್ ಆಡಳಿತದ ನಿರ್ಧಾರವು ಎಲ್ಲ ಪತ್ರಕರ್ತರು, ಉದ್ಯೋಗಿಗಳು, ಸಿಬ್ಬಂದಿ ಹಾಗೂ ಅದರ ಸಹ ವಾಹಿನಿಗಳ ಕಾನೂನಾತ್ಮಕ ಸ್ಥಾನಮಾನವನ್ನು ಮುಂದಿನ ಆದೇಶದವರೆಗೆ ಅಮಾನತಿನಲ್ಲಿರಿಸಲಾಗಿದೆಯೆಂದು ವಾಫಾದ ಹೇಳಿಕೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ಯಾಲೆಸ್ತೀನ್ ಪ್ರಾಧಿಕಾರದ ನಿರ್ಧಾರವನ್ನು ಅಲ್‌ಜಝೀರಾ ಖಂಡಿಸಿದೆ. ಮಾಧ್ಯಮಗಳನ್ನು ಗುರಿಯಿರಿಸಲು ಇಸ್ರೇಲಿ ಅತಿಕ್ರಮಣಕಾರರ ಜೊತೆ ಪ್ಯಾಲೆಸ್ತೀನ್ ಆಡಳಿತವು ಕೈಜೋಡಿಸಿದೆಯೆಂದು ಅದು ಆಪಾದಿಸಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಗ್ಯಾರಂಟಿ ಗೆಲುವನ್ನು ಮಾರ್ಕೆಟಿಂಗ್ ಮಾಡಿಕೊಳ್ಳಬೇಕೇ ಸರ್ಕಾರ?

ಪಶ್ಚಿಮದಂಡೆಯಲ್ಲಿ ಆಡಳಿತಾತ್ಮಕ ನಿಯಂತ್ರಣವನ್ನು ಹೊಂದಿರುವ ಪ್ಯಾಲೆಸ್ತೀನ್ ಪ್ರಾಧಿಕಾರವು, ಇಸ್ರೇಲ್‌ನ ಅತಿಕ್ರಮಣಕ್ಕೊಳಗಾದ ಪ್ಯಾಲೆಸ್ತೀನ್ ಪ್ರದೇಶಗಳಲ್ಲಿನ ಉದ್ವಿಗ್ನ ಘಟನಾವಳಿಗಳನ್ನು ವರದಿ ಮಾಡದಂತೆ ತನ್ನನ್ನು ಹಿಮ್ಮೆಟ್ಟಿಸಲು ಯತ್ನಿಸುತ್ತಿರುವುದಾಗಿ ಅಲ್‌ ಜಝೀರಾ ಆಪಾದಿಸಿದೆ.

ಗಾಝಾ ಸಂಘರ್ಷದ ಕುರಿತ ವರದಿಗಳಿಗಾಗಿ ಇಸ್ರೇಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸರಕಾರದ ಕೆಂಗಣ್ಣಿಗೆ ಗುರಿಯಾಗಿದ್ದ ಅಲ್‌ ಜಝೀರಾ ವಾಹಿನಿಯ ಪ್ರಸಾರವನ್ನು ಈಗಾಗಲೇ ಇಸ್ರೇಲ್‌ನಲ್ಲಿ ನಿಷೇಧಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...