‘ಹಮಾಸ್’ ನಾಯಕರ ಮನೆ ಮೇಲೆ ಇಸ್ರೇಲ್ ವಾಯು ದಾಳಿ, ಇಬ್ಬರ ಸಾವು, ಹೇಡಿತನ ಎಂದ ಕತಾರ್

Date:

ಕತಾರ್ ರಾಜಧಾನಿ ದೋಹಾದಲ್ಲಿ ಗಾಜಾ ಕದನ ವಿರಾಮ ಪ್ರಸ್ತಾಪದ ಬಗ್ಗೆ ಚರ್ಚಿಸುತ್ತಿದ್ದ ಹಮಾಸ್ ನಾಯಕರ ಅನೇಕ ವಸತಿ ಕಟ್ಟಡಗಳ ಮೇಲೆ ಇಸ್ರೇಲ್ ಮಂಗಳವಾರ ರಾತ್ರಿ ವಾಯು ದಾಳಿ ನಡೆಸಿರುವುದಾಗಿ ವರದಿಯಾಗಿದೆ.

3.30ರ ಸುಮಾರಿಗೆ ಲಗ್ತೈಫಿಯಾ ಪ್ರದೇಶದ ವಸತಿ ಪ್ರದೇಶದಲ್ಲಿ ಸರಣಿ ಸ್ಪೋಟಗಳು ಸಂಭವಿಸಿದ್ದು, ದೊಡ್ಡ ಪ್ರಮಾಣದ ಹೊಗೆಯೊಂದಿಗೆ ಸ್ಫೋಟ ಕಾಣಿಸಿಕೊಂಡಿದೆ. ದಾಳಿಯಲ್ಲಿ ಹಮಾಸ್‌ ಮುಖ್ಯಸ್ಥ ಖಲೀಲ್‌ ಅಲ್‌ ಹಯ್ಯ ಅವರ ಮಗ ಹಮೀಮ್‌ ಅಲ್‌ ಹಯ್ಯ ಮತ್ತು ಕಚೇರಿ ನಿರ್ದೇಶಕ ಜಿಹಾದ್‌ ಲಬಾದ್‌ ಸಾವನ್ನಪ್ಪಿದ್ದಾರೆ ಎಂದು ಪ್ಯಾಲೇಸ್ಟಿನಿಯನ್‌ ಮಾಧ್ಯಮ ವರದಿ ಮಾಡಿದೆ.

ಈ ದಾಳಿಯನ್ನು ಇಸ್ರೇಲ್ ಮಿಲಿಟರಿ ಪಡೆ IDF ಖಚಿತಪಡಿಸಿದೆ. ಹಮಾಸ್ ಉಗ್ರ ಸಂಘಟನೆಯ ಹಿರಿಯ ನಾಯಕರನ್ನು ಗುರಿಯಾಗಿಸಿಕೊಂಡು IDF ಮತ್ತು ISA (ಭದ್ರತಾ ಏಜೆನ್ಸಿ) ಈ ದಾಳಿ ನಡೆಸಿರುವುದಾಗಿ ಹೇಳಿದೆ. ಈ ದಾಳಿ ದೋಹಾದಲ್ಲಿ ನಡೆದಿದೆಯೇ ಅಥವಾ ಬೇರೆಲ್ಲಿಯಾದರೂ ನಡೆದಿದೆಯೇ ಎಂಬುದನ್ನು IDF ಸ್ಪಷ್ಟಪಡಿಸಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕದನ ವಿರಾಮ ಮತ್ತು ಒತ್ತೆಯಾಳು ಬಿಡುಗಡೆ ಪ್ರಸ್ತಾಪವನ್ನು ಒಪ್ಪಿಕೊಳ್ಳಲು ಇದು ಕೊನೆಯ ಅವಕಾಶ ಎಂದು ಹಮಾಸ್‌ಗೆ ಎಚ್ಚರಿಕೆ ನೀಡಿದ್ದರು. ಆ ಬೆನ್ನಲ್ಲೇ ಹಮಾಸ್‌ ನಾಯಕರನ್ನು ಗುರಿಯಾಗಿಸಿಕೊಂಡು ವಾಯು ದಾಳಿ ಮಾಡಲಾಗಿದೆ.

ಕತಾರ್‌ನಲ್ಲಿ ಹಮಾಸ್ ಮೇಲಿನ ದಾಳಿಯ ಬಗ್ಗೆ ಅಮೆರಿಕಕ್ಕೆ ಮುಂಚಿತವಾಗಿ ತಿಳಿಸಲಾಗಿತ್ತು ಮತ್ತು ಈ ಕ್ರಮಕ್ಕೆ ವಾಷಿಂಗ್ಟನ್‌ನಿಂದ ಸಂಪೂರ್ಣ ಬೆಂಬಲ ದೊರೆತಿದೆ ಎಂದು ಇಸ್ರೇಲಿ ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ. ಮತ್ತೊಂದೆಡೆ, ಕತಾರ್ ಈ ದಾಳಿಯನ್ನು ಎಲ್ಲ ಅಂತರರಾಷ್ಟ್ರೀಯ ಕಾನೂನುಗಳ ಸಂಪೂರ್ಣ ಉಲ್ಲಂಘನೆ ಎಂದು ಬಣ್ಣಿಸಿದೆ.

ಈ ದಾಳಿಯು ತನ್ನ ಸಾರ್ವಭೌಮತ್ವ ಮತ್ತು ಭದ್ರತೆಗೆ ನೇರ ಬೆದರಿಕೆ ಮಾತ್ರವಲ್ಲದೆ, ದೋಹಾದಲ್ಲಿ ವಾಸಿಸುವ ಕತಾರಿಗಳು ಮತ್ತು ವಿದೇಶಿ ನಾಗರಿಕರ ಜೀವಗಳಿಗೆ ಗಂಭೀರ ಅಪಾಯವಾಗಿದೆ ಎಂದು ಕತಾರ್‌ನ ವಿದೇಶಾಂಗ ಸಚಿವಾಲಯ ಹೇಳಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...