ಇಸ್ರೇಲ್‌ನಿಂದ ರಾಯಿಟರ್ಸ್‌ ಪತ್ರಕರ್ತನ ಹತ್ಯೆ: ವಿಶ್ವಸಂಸ್ಥೆ ಭದ್ರತಾ ಮಂಡಳಿಗೆ ದೂರು

Date:

ಇಸ್ರೇಲ್ ಲೆಬನಾನ್‌ನ ಗಡಿಭಾಗದಲ್ಲಿ ರಾಯಿಟರ್ಸ್‌ ಸುದ್ದಿ ಸಂಸ್ಥೆಯ ಪತ್ರಕರ್ತ ಇಸ್ಸಾಂ ಅಬ್ದುಲ್ಲಾ ಅವರನ್ನು ಇಸ್ರೇಲ್‌ ಉದ್ದೇಶಪೂರ್ವಕವಾಗಿ ಹತ್ಯೆಗೈದಿದೆ ಎಂದು ಆರೋಪಿಸಿರುವ ಲೆಬನಾನ್‌ ವಿದೇಶಾಂಗ ಸಚಿವರು, ಈ ಕುರಿತು ವಿಶ್ವಸಂಸ್ಥೆಯ ಭದ್ರತಾ ಮಂಡಳಿಗೆ ಅಧಿಕೃತವಾಗಿ ದೂರು ನೀಡುವುದಾಗಿ ತಿಳಿಸಿದ್ದಾರೆ.

‘ಇಸ್ರೇಲ್‌ ಕೃತ್ಯವು ಅಭಿಪ್ರಾಯ ವ್ಯಕ್ತಪಡಿಸುವುದರ ಮತ್ತು ಪತ್ರಿಕಾ ಸ್ವಾತಂತ್ರ್ಯದ ಮೇಲೆ ನಡೆದ ಘೋರ ದಾಳಿ ಮತ್ತು ಅಪರಾಧ. ಇಸ್ರೇಲ್ ಕ್ಷಿಪಣಿ ದಾಳಿ ನಡೆಸಿದ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಪತ್ರಕರ್ತರು ಕಾರಿನಲ್ಲಿದ್ದರು’ ಎಂದು ತಿಳಿಸಿದ್ದಾರೆ.

‘ಪತ್ರಕರ್ತನ ಸಾವಿಗೆ ವಿಷಾದಿಸುತ್ತೇವೆ. ಇದು ದುರದೃಷ್ಟಕರ ಘಟನೆ. ಘಟನೆ ಕುರಿತು ತನಿಖೆ ನಡೆಸಲಾಗುತ್ತಿದೆ’ ಎಂದು ಇಸ್ರೇಲ್‌ ಸೇನೆಯ ವಕ್ತಾರ ರಿಚರ್ಡ್‌ ಹೆಚ್ಟ್‌ ಅವರು ಪ್ರತಿಕ್ರಿಯಿಸಿದ್ದಾರೆ. ಆದರೆ ಈ ಸಾವಿಗೆ ಇಸ್ರೇಲ್‌ ಸೇನೆ ಕಾರಣವೇ ಎಂಬುದನ್ನು ಅವರು ಸ್ಪಷ್ಟಪಡಿಸಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಕ್ಷಿಣ ಲೆಬನಾನ್‌ ಗಡಿಯಲ್ಲಿ ಇಸ್ರೇಲ್‌ ಸೇನೆ ಮತ್ತು ಲೆಬನಾನ್‌ನ ಹಿಜ್ಬುಲ್ಲಾ ನಡುವೆ ನಡೆಯುತ್ತಿರುವ ಕದನದ ವರದಿ ಮಾಡಲು ಅಂತಾರಾಷ್ಟ್ರೀಯ ಪತ್ರಕರ್ತರ ಗುಂಪು ಅಲ್ಮಾ–ಅಲ್‌– ಶಾಬ್‌ ಎಂಬ ಗ್ರಾಮಕ್ಕೆ ತೆರಳಿತ್ತು. ಈ ವೇಳೆ ಇಸ್ರೇಲ್ ನಡೆದ ಕ್ಷಿಪಣಿ ದಾಳಿ ನಡೆದಿದೆ. ದಾಳಿಯಲ್ಲಿ ತನ್ನ ಸಂಸ್ಥೆಯ ಒಬ್ಬರು ಮೃತಪಟ್ಟಿದ್ದು, ಇನ್ನಿಬ್ಬರು ಪತ್ರಕರ್ತರು ಗಾಯಗೊಂಡಿರುವುದಾಗಿ ರಾಯಿಟರ್ಸ್‌ ಹೇಳಿದೆ.

ಅಲ್‌– ಜಝೀರಾ ವಾಹಿನಿಯ ವರದಿಗಾರ ಮತ್ತು ವಿಡಿಯೋಗ್ರಾಫರ್‌ ಕೂಡ ಗಾಯಗೊಂಡಿದ್ದಾರೆ ಎಂದು ಅಲ್‌-ಜಝೀರಾ ಹೇಳಿದೆ. ಈ ಘಟನೆಯಲ್ಲಿ ಒಟ್ಟು ಆರು ಮಂದಿ ಪತ್ರಕರ್ತರು ಗಾಯಗೊಂಡಿದ್ದರು.

ಇಸ್ಸಾಂ ಅಬ್ದುಲ್ಲಾ ಅವರ ಅಂತಿಮ ಸಂಸ್ಕಾರವನ್ನು ದಕ್ಷಿಣ ಲೆಬನಾನ್‌ನ ಖಿಯಾಮ್‌ ಪಟ್ಟಣದಲ್ಲಿ ಶನಿವಾರ ನೆರವೇರಿಸಲಾಯಿತು. ಅದಕ್ಕೂ ಮೊದಲು, ಅವರ ಮೃತದೇಹಕ್ಕೆ ಲೆಬನಾನ್‌ ಧ್ವಜ ಹೊದಿಸಿ, ಖಿಯಾಮ್‌ ಪಟ್ಟಣದಲ್ಲಿ ಮೆರವಣಿಗೆ ನಡೆಸಲಾಯಿತು.

ನೂರಾರು ಜನರು ಇಸ್ಸಾಂ ಅಂತಿಮ ಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಹತ್ತಕ್ಕೂ ಹೆಚ್ಚು ಪತ್ರಕರ್ತರು ಮತ್ತು ಲೆಬೆನಾನ್‌ನ ಜನಪ್ರತಿನಿಧಿಗಳು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...