ಕೆನಡಾ| ಇನ್ನೊಬ್ಬ ಉದ್ಯೋಗಿಯೊಂದಿಗೆ ಸಂಬಂಧ; ಸಿಎಫ್‌ಒ ಅನ್ನು ವಜಾಗೊಳಿಸಿದ ಆರ್‌ಬಿಸಿ!

Date:

ಯಾರಿಗೂ ತಿಳಿಸದೆ ಇನ್ನೊಬ್ಬ ಉದ್ಯೋಗಿಯೊಂದಿಗೆ ನಿಕಟ ವೈಯಕ್ತಿಕ ಸಂಬಂಧ ಹೊಂದಿದ್ದ ಕಾರಣಕ್ಕೆ ರಾಯಲ್ ಬ್ಯಾಂಕ್ ಆಫ್ ಕೆನಡಾ (ಆರ್‌ಸಿಬಿ) ತನ್ನ ಮಧ್ಯಂತರ ಮುಖ್ಯ ಹಣಕಾಸು ಅಧಿಕಾರಿ (ಸಿಎಫ್‌ಒ) ನಡಿನ್ ಅಹ್ನ್ ಅವರನ್ನು ವಜಾಗೊಳಿಸಿದೆ. ನಡಿನ್ ಅವರು ಬ್ಯಾಂಕಿನ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆಂದು ಬ್ಯಾಂಕ್‌ ಆರೋಪಿಸಿದೆ.

ಇನ್ನು ನಡಿನ್ ಅಹ್ನ್ ವಜಾದಿಂದ ತೆರವಾಗಿದ್ದ ಸಿಎಫ್‌ಒ ಸ್ಥಾನಕ್ಕೆ ಕ್ಯಾಥರೀನ್ ಗಿಬ್ಸನ್ ಅವರನ್ನು ನೇಮಿಸಲಾಗಿದೆ ಎಂದು ಬ್ಯಾಂಕ್ ಹೇಳಿದೆ.

ಬ್ಯಾಂಕ್‌ನ ನಿಯಮದ ಪ್ರಕಾರ ಯಾವುದೇ ವ್ಯಕ್ತಿಯು ಬ್ಯಾಂಕ್‌ನ ಇನ್ನೊಬ್ಬ ವ್ಯಕ್ತಿಯೊಂದಿಗೆ ವೈಯಕ್ತಿಕ ನಿಕಟ ಸಂಬಂಧವನ್ನು ಹೊಂದಿದ್ದರೆ, ಅದನ್ನು ಬ್ಯಾಂಕ್‌ನಲ್ಲಿ ಬಹಿರಂಗಪಡಿಸಬೇಕು. ಆದರೆ ಅಹ್ನ್ ಉದ್ಯೋಗಿಯೊಂದಿಗಿನ ಸಂಬಂಧದ ಬಗ್ಗೆ ಯಾವುದೇ ಮಾಹಿತಿ ನೀಡಿರಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?     ನಿರ್ಮಾಪಕರ ಸಂಘದ ವಿರುದ್ಧ ನಟ ಸುದೀಪ್ ಮಾನನಷ್ಟ ಮೊಕದ್ದಮೆ: ಅರ್ಜಿ ವಜಾಗೊಳಿಸಲು ಹೈಕೋರ್ಟ್‌ ನಕಾರ

ಅಹ್ನ್ ವಿರುದ್ಧದ ‘ಆರೋಪಗಳ’ ಬಗ್ಗೆ ತಿಳಿದ ಬಳಿಕ ಬ್ಯಾಂಕ್ ತನಿಖೆಯನ್ನು ಪ್ರಾರಂಭಿಸಿದೆ. “ನಡಿನ್ ಅಹ್ನ್ ಇನ್ನೊಬ್ಬ ಉದ್ಯೋಗಿಯೊಂದಿಗೆ ಯಾರಿಗೂ ತಿಳಿಸದೆ ನಿಕಟ ವೈಯಕ್ತಿಕ ಸಂಬಂಧವನ್ನು ಹೊಂದಿದ್ದಾರೆ. ಇದರಿಂದಾಗಿ ಬ್ಯಾಂಕಿನ ನೀತಿ ಸಂಹಿತೆಯನ್ನು ಉಲ್ಲಂಘಿಸಲಾಗಿದೆ. ಈ ಸಂಬಂಧವು ಬಡ್ತಿ ಮತ್ತು ವೇತನ ಹೆಚ್ಚಳ ಸೇರಿದಂತೆ ಇತರೆ ಕ್ರಮಗಳ ಮೇಲೆ ಪ್ರಭಾವ ಬೀರಿದೆ” ಎಂದು ವರದಿ ಉಲ್ಲೇಖಿಸಿದೆ.

ಇಬ್ಬರನ್ನು ಕೂಡಾ ವಜಾಗೊಳಿಸಲಾಗಿದೆ ಎಂದು ಬ್ಯಾಂಕ್ ಹೇಳಿಕೆಯಲ್ಲಿ ತಿಳಿಸಿದೆ. ಇನ್ನು ರಾಯಲ್ ಬ್ಯಾಂಕ್ ಆಫ್ ಕೆನಡಾದ ಕಾರ್ಯತಂತ್ರ ಅಥವಾ ಅದರ ಹಣಕಾಸು ಅಥವಾ ವ್ಯವಹಾರದ ಕಾರ್ಯಕ್ಷಮತೆಗೆ ಸಂಬಂಧಿಸಿದಂತೆ ಮಾಜಿ ಸಿಎಫ್‌ಒ ಅಥವಾ ಇತರ ಉದ್ಯೋಗಿಯಿಂದ ದುಷ್ಕೃತ್ಯದ ಯಾವುದೇ ಪುರಾವೆಗಳು ತನಿಖೆಯಲ್ಲಿ ಕಂಡುಬಂದಿಲ್ಲ ಎಂದು ಬ್ಯಾಂಕ್ ತಿಳಿಸಿದೆ.

ಸೆಪ್ಟೆಂಬರ್ 2021 ರಲ್ಲಿ ರಾಯಲ್ ಬ್ಯಾಂಕ್ ಆಫ್ ಕೆನಡಾದ ಸಿಎಫ್‌ಒ ಆಗುವ ಮುನ್ನ ಅಹ್ನ್ ಈ ಹಿಂದೆ ಹೂಡಿಕೆದಾರರ ಸಂಬಂಧಗಳ ಮುಖ್ಯಸ್ಥರಾಗಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...