ಉಕ್ರೇನ್ ಯುದ್ಧ ಕೈದಿಗಳನ್ನು ಕರೆತರುತ್ತಿದ್ದ ರಷ್ಯಾದ ಮಿಲಿಟರಿ ವಿಮಾನ ಪತನ: 74 ಸಾವಿನ ಶಂಕೆ!

Date:

ಉಕ್ರೇನ್ ಯುದ್ಧ ಕೈದಿಗಳನ್ನು ಕರೆತರುತ್ತಿದ್ದ ರಷ್ಯಾ ಮಿಲಿಟರಿ ವಿಮಾನ ಪತನಗೊಂಡು ವಿಮಾನದಲ್ಲಿದ್ದ ಎಲ್ಲ 74 ಮಂದಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ಸ್ಥಳೀಯ ಕಾಲಮಾನ 11 ಗಂಟೆ ವೇಳೆ ಬೆಲ್‌ಗೊರೋಡ್‌ ಪ್ರಾಂತ್ಯದಿಂದ ಯುದ್ಧ ಕೈದಿಗಳನ್ನು ವಾಪಸ್‌ ಕರೆತರುತ್ತಿದ್ದ ವೇಳೆ ಪತನವಾಗಿದೆ. ಅಪಘಾತಕ್ಕೆ ಕಾರಣವನ್ನು ಇನ್ನಷ್ಟೆ ತಿಳಿಯಬೇಕಿದೆ.

ಅಗ್ನಿಶಾಮಕಗಳು, ಆಂಬ್ಯುಲೆನ್ಸ್‌ಗಳು ಹಾಗೂ ಪೊಲೀಸರು ಘಟನಾ ಸ್ಥಳ ಕೊರೊಚನ್ಸೆ ಜಿಲ್ಲೆಯ ಬೆಲ್‌ಗೊರೋಡ್‌ಗೆ ತಲುಪಿದ್ದಾರೆ ಎಂದು ಸ್ಥಳೀಯ ತುರ್ತು ಸೇವಾ ಅಧಿಕಾರಿಗಳ ಹೇಳಿಕೆ ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಲ್‌ಗೊರೋಡ್‌ ಪ್ರಾಂತ್ಯವು ಉಕ್ರೇನ್ ಗಡಿಯಲ್ಲಿದ್ದು, ಡಿಸೆಂಬರ್‌ನಲ್ಲಿ ಕ್ಷಿಪಣಿ ದಾಳಿಯಿಂದ 25 ಮೃತಪಟ್ಟಿರುವುದು ಒಳಗೊಂಡು ಹಲವು ತಿಂಗಳಿನಿಂದ ಉಕ್ರೇನ್ ಕಡೆಯಿಂದ ದಾಳಿ ನಡೆಸಲಾಗುತ್ತಿದೆ. ವಿಮಾನ ಪತನವಾಗಿ ಸ್ಫೋಟವಾಗಿರುವುದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೇವೇಗೌಡರ ದೈವಭಕ್ತಿ ಮತ್ತು ಕುಟುಂಬ ಕಲ್ಯಾಣ

“ಆರು ಸಿಬ್ಬಂದಿ, ಮೂವರು ಭದ್ರತಾ ಸಿಬ್ಬಂದಿಯೊಂದಿಗೆ ಉಕ್ರೇನಿನ 65 ಯುದ್ಧ ಕೈದಿಗಳನ್ನು ಸೆರೆ ಹಿಡಿದು ವಿನಿಮಯಕ್ಕಾಗಿ ಬೆಲಗೊರೋಡ್ ಪ್ರಾಂತ್ಯಕ್ಕೆ ಕರೆತರಲಾಗುತ್ತಿತ್ತು” ಎಂದು ರಕ್ಷಣಾ ಇಲಾಖೆಯ ವಕ್ತಾರರು ತಿಳಿಸಿದ್ದಾರೆ.

ಉಕ್ರೇನ್ ಸೇನೆ ತನ್ನ ಸ್ವಂತ ಸೇನೆಯನ್ನೇ ಹೊಡೆದುರುಳಿಸಿದೆ. ನಮ್ಮ ಪೈಲಟ್‌ಗಳು ಮಾನವೀಯತೆಯ ಕಾರ್ಯಾಚರಣೆ ಮಾಡುತ್ತಿದ್ದ ನಮ್ಮ ಪೈಲಟ್‌ಗಳನ್ನು ಕೂಡ ಹೊಡೆದುರುಳಿಸಲಾಗಿದೆ” ಎಂದು ರಷ್ಯ ಸಂಸತ್ತಿನ ಕೆಳಮನೆಯ ಸ್ಪೀಕರ್ ಆರೋಪಿಸಿದ್ದಾರೆ.

ರಷ್ಯಾ ಕ್ಷಿಪಣಿ ದಾಳಿಯಿಂದ ನಮ್ಮ ವಾಯು ಪಡೆಯ 18 ಮಂದಿ ಮೃತಪಟ್ಟಿರುವುದಾಗಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...