ಇಂಧನ ಉತ್ಪಾದನೆ ಕಡಿತದ ಸೌದಿ ಅರೆಬಿಯ ನಿರ್ಧಾರ ಭಾರತಕ್ಕೆ ಹೊರೆ: ಇಂಧನ ಸಂಸ್ಥೆ

Date:

  • ಸೌದಿ ಅರೆಬಿಯ ನಿರ್ಧಾರದಿಂದ ಇಂಧನ ಕೊರತೆ
  • ಭಾರತದ ತೈಲ ಆಮದು ಪ್ರಮಾಣ 33 ಪಟ್ಟು ಹೆಚ್ಚಳ

ತೈಲ ಉತ್ಪಾದನೆ ಕಡಿತಗೊಳಿಸಲು ರಷ್ಯಾ ಸೇರಿದಂತೆ ಸೌದಿ ಅರೆಬಿಯ ಹಾಗೂ ಪೆಟ್ರೋಲಿಯಂ ರಫ್ತು ರಾಷ್ಟ್ರಗಳ ಸಂಸ್ಥೆ (ಒಪಿಎಸಿ) ನಿರ್ಧರಿಸಿವೆ.

ಸೌದಿ ಮತ್ತು ಇತರ ದೇಶಗಳ ಈ ತೀರ್ಮಾನದಿಂದ ಭಾರತಕ್ಕೆ ಹೊರೆಯಾಗುವ ಸಾಧ್ಯತೆ ಇದೆ. ಈ ವರ್ಷದ ದ್ವಿತೀಯಾರ್ಧದಲ್ಲಿ ಭಾರತದ ತೈಲ ಆಮದು ಹೆಚ್ಚಾಗಲಿದೆ ಎಂದು ಅಂತಾರಾಷ್ಟ್ರೀಯ ಇಂಧನ ಸಂಸ್ಥೆ (ಐಇಎ) ಕಾರ್ಯನಿರ್ವಾಹಕ ನಿರ್ದೇಶಕ ಫಾತಿಹ್ ಬಿರೋಲ್ ಹೇಳಿದ್ದಾರೆ.

“ಸೌದಿ ಅರೆಬಿಯ, ರಷ್ಯಾ, ಪೆಟ್ರೋಲಿಯಂ ರಫ್ತು ರಾಷ್ಟ್ರಗಳ ಸಂಸ್ಥೆ ಮೊದಲಾದವು ತೈಲ ಉತ್ಪಾದನೆ ಕಡಿತಗೊಳಿಸಲು ನಿರ್ಧರಿಸಿದ್ದಾರೆ. ಐಇಎ ವಿಶ್ಲೇಷಣೆ ಮತ್ತು ತೈಲ ಮಾರುಕಟ್ಟೆಗಳನ್ನು ಅಂದಾಜಿಸುವ ಪ್ರತಿಯೊಂದು ಸಂಸ್ಥೆಯ ವಿಶ್ಲೇಷಣೆಯನ್ನು ಗಮನಿಸಿದಾಗ ಈ ವರ್ಷದ ದ್ವಿತೀಯಾರ್ಧದಲ್ಲಿ ತೈಲ ಮಾರುಕಟ್ಟೆಗಳಲ್ಲಿ ಹೆಚ್ಚು ಕೊರತೆ ಉಂಟಾಗಲಿದೆ” ಎಂದು ಫಾತಿಹ್‌ ಅವರು ಮಂಗಳವಾರ (ಏಪ್ರಿಲ್‌ 11) ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರತ ಇಂಧನ ಆಮದುದಾರ ರಾಷ್ಟ್ರ. ದೇಶದಲ್ಲಿ ಬಳಸುವ ಹೆಚ್ಚಿನ ಇಂಧನ ಆಮದು ಮಾಡಿಕೊಳ್ಳಲಾಗುತ್ತದೆ ಎಂದು ಫಾತಿಹ್‌ ಅವರು ತಿಳಿಸಿದರು.

ಈ ಹಿನ್ನೆಲೆಯಲ್ಲಿ ಪ್ರಮುಖ ರಾಷ್ಟ್ರಗಳ ತೈಲ ಉತ್ಪಾದನೆ ಕಡಿತಗೊಳಿಸುವ ನಿರ್ಧಾರ ಭಾರತದ ಆರ್ಥಿಕತೆ ಮತ್ತು ಅದರ ಗ್ರಾಹಕರ ಮೇಲೆ ನೇರವಾಗಿ ಹೊರೆ ಉಂಟು ಮಾಡಲಿದೆ ಎಂದು ಅವರು ಹೇಳಿದರು.

ಮುಂಬರುವ ವರ್ಷಗಳಲ್ಲಿ ತೈಲ ಬೆಲೆಗಳ ಏರಿಕೆ ಮತ್ತು ಪೂರೈಕೆ ಭದ್ರತಾ ಕೊರತೆಯ ಕಾಳಜಿಗಳ ಮೇಲೆ ಒತ್ತಡ ಉಂಟಾಗಲಿದೆ. ಏಕೆಂದರೆ ಈಗ ಹೆಚ್ಚಿನ ದೇಶಗಳು ತಮ್ಮದೇ ಆದ ನೈಸರ್ಗಿಕ ಅನಿಲವನ್ನು ಉತ್ಪಾದಿಸಿ ರಫ್ತು ಮಾಡುತ್ತಿವೆ. ಇದು ಮಾರುಕಟ್ಟೆಯಲ್ಲಿ ದ್ರವೀಕೃತ ನೈಸರ್ಗಿಕ ಅನಿಲ (ಎಲ್‌ಎನ್‌ಜಿ) ಶೇಖರಣೆಗೆ ಕಾರಣವಾಗುತ್ತದೆ ಎಂದು ಫಾತಿಹ್‌ ವಿವರಿಸಿದರು.

ಐರೋಪ್ಯ ಒಕ್ಕೂಟವು ತೈಲ ಸೇರಿದಂತೆ ರಷ್ಯಾದ ಉತ್ಪನ್ನಗಳನ್ನು ದೂರವಿಟ್ಟಿದೆ. ಇದರಿಂದ ರಷ್ಯಾ-ಉಕ್ರೇನ್ ಯುದ್ಧದ ಆರಂಭದಿಂದಲೂ ಭಾರತ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಪ್ರಮುಖ ದೇಶವಾಗಿ ಪರಿಗಣಿಸಲ್ಪಟ್ಟಿದೆ.

ಮತ್ತೊಂದೆಡೆ ಭಾರತ ರಷ್ಯಾದಿಂದ ತನ್ನ ಕಚ್ಚಾ ತೈಲ ಆಮದುಗಳ ರಿಯಾಯಿತಿ ದರದಲ್ಲಿ ಖರೀದಿಯ ಪ್ರಮಾಣ ಹೆಚ್ಚಿಸಿತು. ಡೀಸೆಲ್ ಮತ್ತು ವಿಮಾನ ಇಂಧನದಂತಹ ಸಂಸ್ಕರಿಸಿದ ತೈಲದ ರೂಪದಲ್ಲಿ ಐರೋಪ್ಯ ರಾಷ್ಟ್ರಗಳಿಗೆ ಹಿಂಬಾಗಿಲ ಪ್ರವೇಶವನ್ನು ಸಕ್ರಿಯಗೊಳಿಸಿತು.

“ಇಂಧನ ಉತ್ಪಾದನೆಯನ್ನು ಸೌದಿ ಅರೆಬಿಯ ಮತ್ತು ಇತರ ರಾಷ್ಟ್ರಗಳು ಕಡಿತಗೊಳಿಸಿದರೂ ಕಚ್ಚಾ ತೈಲ ಆಮದು ಮಾಡಿಕೊಳ್ಳುವ ಭಾರತದ ನಿರ್ಧಾರ ಕಾನೂನುಬದ್ಧ ಹೆಜ್ಜೆ. ಭಾರತವು ವ್ಯಾಪಾರ ಮತ್ತು ಹಣಕಾಸು ನಿಯಮದ ವಿಷಯದಲ್ಲಿ ಅಂತಾರಾಷ್ಟ್ರೀಯ ನಿಯಮಗಳು ಮತ್ತು ನಿಯಂತ್ರಣ ಅನುಸರಿಸುತ್ತಿದೆ” ಎಂದು ಫಾತಿಹ್ ಬಿರೋಲ್ ಹೇಳಿದರು.

ಈ ಸುದ್ದಿ ಓದಿದ್ದೀರಾ? ಸೇನಾ ಠಾಣೆ ಮೇಲೆ ದಾಳಿ; ನಾಲ್ವರು ಯೋಧರು ಹುತಾತ್ಮ

“ಭಾರತವು ಪಾರದರ್ಶಕ ರೀತಿಯಲ್ಲಿ ಇತರರಿಗಿಂತ ಕಡಿಮೆ ರಿಯಾಯಿತಿ ದರದಲ್ಲಿ ಕಚ್ಚಾ ತೈಲ ಆಮದು ಮಾಡಿಕೊಳ್ಳುತ್ತಿದೆ. ಈ ಮೂಲಕ ಅದು ಲಾಭ ಪಡೆಯುತ್ತಿದೆ. ಇದು ಖಂಡಿತವಾಗಿಯೂ ಕಾನೂನುಬದ್ಧ ಹೆಜ್ಜೆ” ಎಂದು ಫಾತಿಹ್‌ ತಿಳಿಸಿದರು.

ಜನವರಿಯಲ್ಲಿ ಬಿಡುಗಡೆಯಾದ ವರದಿಯ ಪ್ರಕಾರ ಭಾರತದ ತೈಲ ಆಮದು ಕಳೆದ ವರ್ಷಕ್ಕೆ ಹೋಲಿಸಿದರೆ 33 ಪಟ್ಟು ಹೆಚ್ಚಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

RSS, BJP ವಿರುದ್ಧ ಹೋರಾಡುವ ದೇಶದ ಏಕೈಕ ನಾಯಕ ರಾಹುಲ್‌ ಗಾಂಧಿ : RS MP ಕ್ರಿಸ್ಟೋಫರ್ ತಿಲಕ್

ಸೋನಿಯಾ ಗಾಂಧಿ ಅವರು ಕಂಡ ರಾಜಕೀಯದ ಪರಿಸ್ಥಿತಿಯೇ ಬೇರೆ, ರಾಹುಲ್‌ ಗಾಂಧಿ...

ಅಮೆರಿಕ ವಿಮಾನ ನಿಲ್ದಾಣ: ಏರ್ ಕೆನಡಾ ವಿಮಾನಕ್ಕೆ ಅಪ್ಪಳಿಸಿದ ಟ್ರಕ್

ಅಮೆರಿಕದ ನ್ಯೂಯಾರ್ಕ್‌ನಲ್ಲಿರುವ ಜನನಿಬಿಡ ಲಾ ಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಏರ್ ಕೆನಡಾ...

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...