ಸೌದಿ ಅರೇಬಿಯಾದಲ್ಲಿ ಎರಡು ಬಸ್ಗಳ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಉಳ್ಳಾಲದ ಮಿಲ್ಲತ್ ನಗರದ ನಿವಾಸಿ, ಅನಿವಾಸಿ ಉದ್ಯೋಗಿಯಾಗಿದ್ದ ಯುವಕನೋರ್ವ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.
ಮೃತ ಯುವಕನನ್ನು ಮಿಲ್ಲತ್ ನಗರದ ನಿವಾಸಿ ಮುಹಮ್ಮದ್ ಅವರ ಪುತ್ರ ಅಬ್ದುಲ್ ರಾಝಿಕ್ (27) ಎಂದು ಗುರುತಿಸಲಾಗಿದೆ.
ಅಬ್ದುಲ್ ರಾಝಿಕ್ ಸೌದಿ ಅರೇಬಿಯಾದಲ್ಲಿ ಕೆಲಸಕ್ಕಾಗಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಸೌದಿ ಅರೇಬಿಯಾದ ಜುಬೈಲ್ನಲ್ಲಿರುವ ಪಾಲಿಟೆಕ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಅಬ್ದುಲ್ ರಾಝಿಕ್, ಸೆಪ್ಟೆಂಬರ್ 14 ರ ಸಂಜೆ ಕೆಲಸಕ್ಕೆ ತೆರಳುತ್ತಿದ್ದಾಗ ಬಸ್ನಲ್ಲಿ ಅಪಘಾತಕ್ಕೀಡಾಗಿದ್ದಾರೆ. ಅವರು ಪ್ರಯಾಣಿಸುತ್ತಿದ್ದ ಬಸ್ ಮತ್ತೊಂದು ಬಸ್ಗೆ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡ ರಾಝಿಕ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮುಹಮ್ಮದ್ ಅವರ ಕಿರಿಯ ಮಗ ರಾಝಿಕ್ ಸಿವಿಲ್ ಎಂಜಿನಿಯರಿಂಗ್ ಪದವೀಧರರಾಗಿದ್ದು, ವಿದೇಶಕ್ಕೆ ಹೋಗಿದ್ದರು. ಸೌದಿ ಅರೇಬಿಯಾದ ಜುಬೈಲ್ನಲ್ಲಿರುವ ಪಾಲಿಟೆಕ್ ಎಂಬ ಕಂಪನಿಯಲ್ಲಿ ಉದ್ಯೋಗದಲ್ಲಿದ್ದ ಅವರು ಜುಲೈ 11 ರಂದು ಮನೆಗೆ ಮರಳಿದ್ದರು.
ಒಂದು ತಿಂಗಳ ರಜೆಯ ನಂತರ, ಅವರು ಆಗಸ್ಟ್ 15 ರಂದು ಎರಡನೇ ಬಾರಿಗೆ ವಿದೇಶಕ್ಕೆ ತೆರಳಿದ್ದರು.
ರಾಝಿಕ್ ಅವರ ಒಬ್ಬ ಸಹೋದರ ಮತ್ತು ಓರ್ವ ಸಹೋದರಿ ಅನಾರೋಗ್ಯದ ಕಾರಣ ಮೊದಲೇ ನಿಧನರಾಗಿದ್ದರು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.
ಮೃತ ಯುವಕ ಪೋಷಕರು, ಮೂವರು ಸಹೋದರಿಯರು, ಒಬ್ಬ ಸಹೋದರ ಮತ್ತು ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.





