ಎಚ್ಐವಿ ತಡೆಗೆ 2 ಡೋಸ್ ಲಸಿಕೆ ಅಭಿವೃದ್ಧಿ: ಎಂಐಟಿ ವಿಜ್ಞಾನಿಗಳಿಂದ ಸಂಶೋಧನೆ

Date:

ಎಚ್ಐವಿ ತಡೆಗಟ್ಟಲು ಅಮೆರಿಕದ ಮೆಸ್ಸಾಚ್ಯೂಟ್ಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂಐಟಿ) ವಿಜ್ಞಾನಿಗಳು 2 ಡೋಸ್ ಲಸಿಕೆ ಅಭಿವೃದ್ಧಿ ಪಡಿಸಿದ್ದು, ಇದು ರೋಗಿಗಳ ಪ್ರತಿಕಾಯಗಳನ್ನು ವೃದ್ಧಿಸುತ್ತದೆ ಎಂದು ಎಂಐಟಿ ಸಂಸ್ಥೆ ಹೇಳಿದೆ. ಎಚ್ಐವಿಗೆ ಲಸಿಕೆ ಅಭಿವೃದ್ಧಿಪಡಿಸುವುದಕ್ಕೆ ಸಂಬಂಧಿಸಿದಂತೆ ಸಾಕಷ್ಟು ವರ್ಷಗಳಿಂದ ಶ್ರಮಿಸುತ್ತಿರುವ ಎಂಐಟಿ ಇದೀಗ 2 ಡೋಸ್‌ನ ಲಸಿಕೆ ತಯಾರಿ ಮಾಡಿರುವ ಮಾಹಿತಿ ನೀಡಿದೆ. 1 ವಾರದ ಅಂತರದಲ್ಲಿ ಈ 2 ಡೋಸ್‌ಗಳನ್ನು ನೀಡಲಾಗುತ್ತದೆ.

ಮೊದಲ ಡೋಸ್‌ನಲ್ಲಿ ಶೇ.20ರಷ್ಟು ಲಸಿಕೆ ನೀಡಿದರೆ, 2ನೇ ಡೋಸ್‌ನಲ್ಲಿ ಶೇ.80ರಷ್ಟು ಲಸಿಕೆ ನೀಡಲಾಗುತ್ತದೆ. ಇದು ಸೋಂಕಿತನ ದೇಹದಲ್ಲಿ ರೋಗದ ವಿರುದ್ಧ ಹೋರಾಡಲು ಬೇಕಾದ ಪ್ರತಿಕಾಯಗಳನ್ನು ವೃದ್ಧಿಸುತ್ತದೆ ಎಂದು ಎಂಐಟಿಯ ತಜ್ಞರು ತಿಳಿಸಿದ್ದಾರೆ.

ಪ್ರಸ್ತುತ, ಈ ಲಸಿಕೆಯ ಮೊದಲ ಡೋಸ್ ಆವೃತ್ತಿಯನ್ನು ಕ್ಲಿನಿಕಲ್ ಪ್ರಯೋಗಗಳಲ್ಲಿ ಪರೀಕ್ಷಿಸಲಾಗುತ್ತಿದೆ. ಇದರ ನಡುವೆ ಸಂಶೋಧಕರು ಎರಡು ಡೋಸ್ ಆವೃತ್ತಿಯನ್ನು ಪರೀಕ್ಷಿಸಲು ಪ್ರಯೋಗಗಳನ್ನು ನಡೆಸುವುದಕ್ಕೆ ಕೆಲಸ ಮಾಡುತ್ತಿದ್ದಾರೆ. ಈ ವಿಧಾನವು ಇತರ ಲಸಿಕೆಗಳಿಗೆ ಹೆಚ್ಚು ಪರಿಣಾಮಕಾರಿಯಾಗಿರಲಿದೆ ಎಂದು ಯೋಜನೆಯ ಪ್ರಮುಖ ಸಂಶೋಧಕ ಪ್ರೊಫೆಸರ್ ಅರೂಪ್ ಚಕ್ರವರ್ತಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಡಿನೋಟಿಫಿಕೇಷನ್ ಹಗರಣ: ಲೋಕಾಯುಕ್ತ ತನಿಖೆ ತೆವಳುತ್ತಿರುವುದೇಕೆ?

ಮೊದಲ ಡೋಸ್ ಪ್ರತಿರಕ್ಷಣಾ ವ್ಯವಸ್ಥೆಯನ್ನು ಸಕ್ರಿಯಗೊಳಿಸಿದರೆ, ಎರಡನೇ ಡೋಸ್‌ ಹೆಚ್ಚು ಪ್ರತಿರಕ್ಷಣಾ ವ್ಯವಸ್ಥೆಯ ಪ್ರತಿಕ್ರಿಯೆಯನ್ನು ಮತ್ತಷ್ಟು ಸಕ್ರಿಯಗೊಳಿಸುತ್ತದೆ. ಈ ಹೊಸ ವಿಧಾನವನ್ನು ಕಂಪ್ಯೂಟೇಶನಲ್ ಮಾಡೆಲಿಂಗ್ ಮೂಲಕ ಅಭಿವೃದ್ಧಿಪಡಿಸಲಾಗಿದೆ. ಇವುಗಳನ್ನು ಮೊದಲು ಇಲಿಗಳಲ್ಲಿ ಪರೀಕ್ಷಿಸಲಾಗಿದೆ.

ಪ್ರತಿ ವರ್ಷ ಸುಮಾರು 10 ಲಕ್ಷ ಮಂದಿ ಎಚ್ಐವಿ ಸೋಂಕಿಗೆ ತುತ್ತಾಗುತ್ತಿದ್ದಾರೆ. ಲಸಿಕೆ ಇಲ್ಲದಿರುವುದು ಸಹ ಇದಕ್ಕೆ ಪ್ರಮುಖ ಕಾರಣ. ಈಗ ಲಸಿಕೆ ಅಭಿವೃದ್ಧಿಪಡಿಸುವುದರಿಂದ ಸೋಂಕು ಹರಡುವುದನ್ನು ತಡೆಗಟ್ಟಬಹುದು ಎಂದು ವಿಜ್ಞಾನಿಗಳು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...