ಸರ್ಬಿಯಾ | ಸಂಸತ್‌ನಲ್ಲಿ ಹೊಗೆ ಬಾಂಬ್ ಸ್ಫೋಟ; ವಿಪಕ್ಷ ನಾಯಕರಿಂದಲೇ ದಾಳಿ

Date:

ಸರ್ಬಿಯಾದಲ್ಲಿ ಭ್ರಷ್ಟಾಚಾರದ ವಿರುದ್ಧ ವಿದ್ಯಾರ್ಥಿಗಳ ನೇತೃತ್ವದಲ್ಲಿ ಆಂದೋಲನ ನಡೆಯುತ್ತಿದೆ. ಆ ಆಂದೋಲನಕ್ಕೆ ಅಲ್ಲಿನ ವಿರೋಧ ಪಕ್ಷಗಳು ಬೆಂಬಲ ಸೂಚಿಸಿವೆ. ವಿದ್ಯಾರ್ಥಿಗಳ ಹೋರಾಟವನ್ನು ಬೆಂಬಲಿಸಿ ಸಂಸತ್ ಕಲಾಪ ನಡೆಯುವ ವೇಳೆ, ವಿಪಕ್ಷಗಳ ನಾಯಕರು ಸಂಸತ್‌ನೊಳಗೆ ಹೊಗೆ ಬಾಂಬ್‌ಗಳನ್ನು ಸ್ಪೋಟಿಸಿದ್ದಾರೆ. ಪರಿಣಾಮ, ಸಂಸತ್‌ನಲ್ಲಿ ಗದ್ದಲ ಉಂಟಾಗಿದ್ದು, ಕೆಲವು ಶಾಸಕರಿಗೆ ಗಾಯಗಳಾಗಿವೆ.

ಸರ್ಬಿಯಾದ ರಾಜಧಾನಿ ಬೆಲ್‌ಗ್ರೇಡ್‌ನಲ್ಲಿರುವ ಸಂಸತ್‌ ಭವನದಲ್ಲಿ ಘಟನೆ ನಡೆದಿದೆ. ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ವಿಡಿಯೋದಲ್ಲಿ, ವಿಪಕ್ಷಗಳ ಶಾಸಕರು ಸಂಸತ್‌ ಒಳಗೆ ಹೊಗೆ ಬಾಂಬ್‌ಗಳನ್ನು ಸ್ಪೋಟಿಸಿದ್ದು, ಬಣ್ಣದ ಹೊಗೆ ಆವರಿಸಿಕೊಂಡಿರುವುದು ಕಂಡುಬಂದಿದೆ.

2024ರಲ್ಲಿ ರೈಲು ನಿಲ್ಧಾಣದ ಮೇಲ್ಚಾವಣಿ ಕುಸಿದು ಬಿದ್ದು, ಸುಮಾರು 15 ಮಂದಿ ಮೃತಪಟ್ಟಿದ್ದರು. ಆ ಘಟನೆಗೆ ಕಳಪೆ ಕಾಮಗಾರಿ ಮತ್ತು ಭ್ರಷ್ಟಾಚಾರವೇ ಕಾರಣವೆಂದು ಆರೋಪಿಸಲಾಗಿತ್ತು. ಸರ್ಬಿಯಾದ ವಿದ್ಯಾರ್ಥಿಗಳು ಭ್ರಷ್ಟಾಚಾರ ವಿರೋಧಿ ಆಂದೋಲನ ಆರಂಭಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿದ್ಯಾರ್ಥಿಗಳ ಪ್ರತಿಭಟನೆಯಿಂದಾಗಿ 2025ರ ಜನವರಿಯಲ್ಲಿ ಸರ್ಬಿಯಾ ಪ್ರಧಾನಿ ಮಿಲೋಸ್ ವುಸೆವಿಕ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರ ರಾಜೀನಾಮೆಯ ಕುರಿತು ಮಂಗಳವಾರ ಅಧಿವೇಶನದಲ್ಲಿ ಚರ್ಚೆ ನಡೆಯುವುದಿತ್ತು. ಅಧಿವೇಶನ ಆರಂಭವಾಗುತ್ತಿದ್ದಂತೆಯೇ, ವಿಪಕ್ಷಗಳ ಸದಸ್ಯರು ಹೊಗೆ ಬಾಂಬ್‌ ಸ್ಪೋಟಿಸಿದ್ದರಿಂದ ಗದ್ದಲ ಉಂಟಾಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...